AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾಡ್ ಅಲ್ಲ ಅವಲಕ್ಕಿ; ಅತಿಯಾಯಿತು ಇಂಡಿಗೋ ಪ್ರಚಾರ ತಂತ್ರ ಎನ್ನುತ್ತಿರುವ ನೆಟ್ಟಿಗರು

Indigo : ಇಂದೇ ತಯಾರಿಸಿದ ಫ್ರೆಷ್​ ಸಲಾಡ್ ತಿಂದು ನೋಡಿ! ಈ ಪೋಸ್ಟ್​ ಬಗ್ಗೆ ಗೇಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಹಲವರು. ಅವರ ಪ್ರಚಾರ ತಂತ್ರಕ್ಕೆ ನಕ್ಕು ಸುಮ್ಮನಾಗಬೇಕು ಎಂದು ಕೆಲವರು ಹೇಳಿದ್ದಾರೆ.

ಸಲಾಡ್ ಅಲ್ಲ ಅವಲಕ್ಕಿ; ಅತಿಯಾಯಿತು ಇಂಡಿಗೋ ಪ್ರಚಾರ ತಂತ್ರ ಎನ್ನುತ್ತಿರುವ ನೆಟ್ಟಿಗರು
ಅವಲಕ್ಕಿ ಫೋಟೋ ಹಾಕಿ ಫ್ರೆಷ್​ ಸಲಾಡ್​ ಎನ್ನುತ್ತಿರುವ ಇಂಡಿಗೋ
TV9 Web
| Edited By: ಶ್ರೀದೇವಿ ಕಳಸದ|

Updated on:Jan 30, 2023 | 3:54 PM

Share

Viral News : ಅವಲಕ್ಕಿ ಫೋಟೋ ಹಾಕಿ ಇಂದೇ ಮಾಡಿದ ತಾಜಾ ಸಲಾಡ್ ತಿನ್ನಿ ಎಂದು ಆನ್​​ಲೈನ್​ನಲ್ಲಿ ಇಂಡಿಗೋ ಏರ್​ಲೈನ್ಸ್​ ಟ್ವೀಟ್ ಮಾಡಿದೆ. ನೆಟ್ಟಿಗರು ಈ ಪೋಸ್ಟ್​ ನೋಡಿ ಬಿದ್ದುಬಿದ್ದು ನಗುತ್ತಿದ್ದಾರೆ. ಇನ್ನೂ ಕೆಲವರು ತಲೆ ಕೆಟ್ಟಿದೆಯೇ ನಿಮಗೆ ಯಾಕೆ ತಪ್ಪು ದಾರಿಗೆ ಎಳೆಯುತ್ತೀರಾ ಪ್ರಚಾರದ ಹಪಾಹಪಿಗೆ ಎಂದು ಬಯ್ಯುತ್ತಿದ್ದಾರೆ. ಇನ್ನೂ ಕೆಲವರು ಸರಿಯಾಗಿ ಕಾಲೆಳೆಯುತ್ತಿದ್ದಾರೆ.

ಅವಲಕ್ಕಿ ತುಂಬಿದ ತಟ್ಟೆಯ ಮೇಲಿನಿಂದ ನಿಂಬೆಹಣ್ಣನ್ನು ಹಿಂಡುತ್ತಿರುವ ಈ ಫೋಟೋ ನೋಡಿದ ನೆಟ್ಟಿಗರು, ಇದು ಅವಲಕ್ಕಿ, ಇದನ್ನು ಸಲಾಡ್​ ಎಂದು ಹೇಳಿ ಯಾರನ್ನು ಮೂರ್ಖರನ್ನಾಗಿಸಲು ಹೊರಟಿದ್ದೀರಾ, ಅದೂ ಭಾರತೀಯರಿಗೆ? ಎಂದು ಕೇಳುತ್ತಿದ್ದಾರೆ. ಇಂದೋರ್​ನಲ್ಲಿರುವ ಎಲ್ಲರೂ ತುಂಬಾ ಆರೋಗ್ಯದಿಂದ ಇದ್ದಾರೆ, ಏಕೆಂದರೆ ಅವರು ಶಾವಿಗೆ, ಅವಲಕ್ಕಿಯ ಸಲಾಡ್ ಅನ್ನು ತಿನ್ನುತ್ತಾರೆ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು.

ಇದನ್ನೂ ಓದಿ : ಚೀನಾದ ರೆಸ್ಟೋರೆಂಟ್​ನಲ್ಲಿ ಗ್ರಾಹಕರಿಗೆ ಜ್ಯೂಸ್​ ಬದಲು ಲಿಕ್ವಿಡ್​ ಡಿಟರ್ಜೆಂಟ್​; 7 ಜನರು ಅಸ್ವಸ್ಥ

ನೀವು ವಿಮಾನದಲ್ಲಿ ರುಚಿಯಾದ ಪದಾರ್ಥಗಳನ್ನು ಕೊಡುತ್ತೀರಿ. ಸುಮ್ಮನೆ ಪ್ರಚಾರಕ್ಕಾಗಿ ಹೀಗೆ ಟ್ವೀಟ್ ಮಾಡಿ ಸಾರ್ವಜನಿಕರ ದಾರಿ ತಪ್ಪಿಸಬೇಡಿ ಎಂದು ಹೇಳಿದ್ದಾರೆ ಮತ್ತೊಬ್ಬರು. ಅನೇಕರು ಈ ಪೋಸ್ಟ್​ ಅನ್ನು ಗೇಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಆಕ್ರೋಶ ವ್ಯಕ್ತಪಡಿಸುವ ಅಗತ್ಯವೇನಿದೆ? ಇದು ಅವರ ಪ್ರಚಾರ ತಂತ್ರ ನಕ್ಕು ಸುಮ್ಮನಾಗಬೇಕು ಎಂದು ಕೆಲವರು ಹೇಳಿದ್ದಾರೆ. ಅವಲಕ್ಕಿ ತಿನ್ನುವಾಗೆಲ್ಲ ಈ ಪೋಹಾ ಜೋಕ್ಸ್​ ನೆನಪಿಸಿಕೊಳ್ಳುತ್ತೇವೆ ಎಂದಿದ್ದಾರೆ ಮತ್ತೂ ಕೆಲವರು.

ಇಷ್ಟು ದಿನ ಇಂದೋರ್​ ಅವಲಕ್ಕಿಗೆ ಹೆಸರುವಾಸಿಯಾಗಿತ್ತು. ಈಗಿದು ಸಲಾಡ್​ನ ರಾಜಧಾನಿಯಾಯಿತೇ? ಎಂದು ಮತ್ತೊಬ್ಬರು ಕೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 3:54 pm, Mon, 30 January 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’