Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್​ಗಿಂತ ಮಡಿಕೆಯೇ ಉತ್ತಮ! ಆನಂದ ಮಹೀಂದ್ರಾ ಯಾಕೆ ಹೀಗೆ ಹೇಳಿರುವುದು?

Anand Mahindra : ಹೀಗೆ ನೀವು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮಡಿಕೆಯೇ ಬೇರೆ ಫ್ರಿಡ್ಜೇ ಬೇರೆ. ಎರಡರ ಪ್ರಯೋಜನಗಳು ಬೇರೆಬೇರೆ ಎಂದು ಅನೇಕರು ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ನೀವೇನಂತೀರಿ?

ಫ್ರಿಡ್ಜ್​ಗಿಂತ ಮಡಿಕೆಯೇ ಉತ್ತಮ! ಆನಂದ ಮಹೀಂದ್ರಾ ಯಾಕೆ ಹೀಗೆ ಹೇಳಿರುವುದು?
ಫ್ರಿಡ್ಜ್​ ಮತ್ತು ಮಣ್ಣಿನ ಮಡಿಕೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:May 10, 2023 | 4:32 PM

Viral News : ‘ವಿನ್ಯಾಸ ಮತ್ತು ಸೌಂದರ್ಯಪ್ರಜ್ಞೆಯ ಹಿನ್ನೆಲೆಯಲ್ಲಿ ನೋಡಿದಾಗ ಫ್ರಿಡ್ಜ್​ಗಿಂತ ಮಡಿಕೆಯೇ ಸಮರ್ಥ. ನಮ್ಮ ನಿತ್ಯಜೀವನದಲ್ಲಿ ಇದು ಅತ್ಯುತ್ತಮವಾದ ಗೃಹಸಾಧನವಾಗಬಲ್ಲುದು’ ಎಂದು ಉದ್ಯಮಿ ಆನಂದ ಮಹೀಂದ್ರಾ ಫ್ರಿಡ್ಜ್ ಮತ್ತು ಮಡಿಕೆಯ ಫೋಟೋ ಟ್ವೀಟ್ ಮಾಡಿದ್ದಾರೆ. ಇದೀಗ ನಿನ್ನೆಯಷ್ಟೇ ಮಾಡಿದ ಈ ಟ್ವೀಟ್ ಈಗಾಗಲೇ 1.2 ಮಿಲಿಯನ್​ಗಿಂತಲೂ ಹೆಚ್ಚು ಜನರ ಗಮನ ಸೆಳೆದಿದೆ.

ಅನೇಕರು ಈ ಟ್ವೀಟ್​ಗೆ ವಿವಿಧ ನೋಟಗಳಿಂದ ಪ್ರತಿಕ್ರಿಯಿಸಿದ್ದಾರೆ. ಕೆಲವರು ಈ ಟ್ವೀಟ್​ ಅನ್ನು ಒಪ್ಪಿದ್ದಾರೆ ಇನ್ನೂ ಕೆಲವರು ಇದು ವಾಸ್ತವದಿಂದ ದೂರ ಎಂದಿದ್ದಾರೆ. ಇನ್ನೂ ಕೆಲವರು ತಮಾಷೆಯಾಗಿ ಉತ್ತರಿಸಿದ್ದಾರೆ. ಮಡಿಕೆಗಾದರೆ ರೂ. 200 ವ್ಯಯಿಸಬಹುದು. ಫ್ರಿಡ್ಜ್​ ಗಾದರೆ ರೂ. 10,000 ಮತ್ತು ಅದಕ್ಕಿಂತಲೂ ಮಿಗಿಲು. ಜೊತೆಗೆ ವಿದ್ಯುತ್ ಬಿಲ್​. ಆದರೆ ಮಡಿಕೆಯಲ್ಲಿರುವ ನೀರು ಬೇಸಿಗೆಯಲ್ಲಿ ತಂಪಾಗಿರುತ್ತದೆ ಮತ್ತು ರುಚಿಯನ್ನೂ ಹೆಚ್ಚಿಸಿಕೊಳ್ಳುತ್ತದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ : ವೈರಲ್ ಚಿಲ್ಲಿ ಲಿಪ್​ ಗ್ಲಾಸ್​; ಇದನ್ನು ಟ್ರೆಂಡ್​ ಆಗಲು ಬಿಡಬೇಡಿ ಎನ್ನುತ್ತಿರುವ ನೆಟ್ಟಿಗರು

ಆದರೆ ಮಡಿಕೆ ಮತ್ತು ಫ್ರಿಡ್ಜ್​ ಅನ್ನು ಸಾಮ್ಯಗೊಳಿಸಲಾಗದು ಎರಡರ ಪ್ರಯೋಜನ ಬೇರೆಬೇರೆಯೇ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಮಡಿಕೆ ಇದ್ದರೆ ಮುಗಿಯಿತು ಫ್ರಿಡ್ಜ್​ ಅಥವಾ ನೀರಿನ ಬಾಟಲಿಯ ಅಗತ್ಯವೇ ಇಲ್ಲ ಎಂದು ಕೆಲವರು ಹೇಳಿದ್ದಾರೆ. ಮಡಿಕೆಯೇ ಯಾಕಾಗಬೇಕು? ನಾನು ಪ್ರತೀ ಬೇಸಿಗೆಯಲ್ಲಿ ತಾಮ್ರದ ಪಾತ್ರೆಯಲ್ಲಿ ಮಲ್ಲಿಗೆ ಹೂ ಹಾಕಿಟ್ಟಿರುತ್ತೇನೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : ಮೊಬೈಲ್​ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ವಿದ್ಯಾರ್ಥಿನಿಯಿಂದ ಪೆಪ್ಪರ್ ಸ್ಪ್ರೇ; ವಿಡಿಯೋ ವೈರಲ್

ನಾನು ಮಡಿಕೆಯಲ್ಲಿ ಕ್ರೀಮ್​ ಇಟ್ಟರೆ ಅದು ಮಿಲ್ಕ್​ ಶೇಕ್​ ಆಗಿರುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಅದು ಐಸ್ಕ್ರೀಮ್ ಆಗಬೇಕೆಂದರೆ ಫ್ರಿಡ್ಜ್​ನಲ್ಲಿಡಿ ಎಂದು ತಮಾಷೆ ಮಾಡಿದ್ದಾರೆ. ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:29 pm, Wed, 10 May 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ