AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್​ಗಿಂತ ಮಡಿಕೆಯೇ ಉತ್ತಮ! ಆನಂದ ಮಹೀಂದ್ರಾ ಯಾಕೆ ಹೀಗೆ ಹೇಳಿರುವುದು?

Anand Mahindra : ಹೀಗೆ ನೀವು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮಡಿಕೆಯೇ ಬೇರೆ ಫ್ರಿಡ್ಜೇ ಬೇರೆ. ಎರಡರ ಪ್ರಯೋಜನಗಳು ಬೇರೆಬೇರೆ ಎಂದು ಅನೇಕರು ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ನೀವೇನಂತೀರಿ?

ಫ್ರಿಡ್ಜ್​ಗಿಂತ ಮಡಿಕೆಯೇ ಉತ್ತಮ! ಆನಂದ ಮಹೀಂದ್ರಾ ಯಾಕೆ ಹೀಗೆ ಹೇಳಿರುವುದು?
ಫ್ರಿಡ್ಜ್​ ಮತ್ತು ಮಣ್ಣಿನ ಮಡಿಕೆ
TV9 Web
| Edited By: |

Updated on:May 10, 2023 | 4:32 PM

Share

Viral News : ‘ವಿನ್ಯಾಸ ಮತ್ತು ಸೌಂದರ್ಯಪ್ರಜ್ಞೆಯ ಹಿನ್ನೆಲೆಯಲ್ಲಿ ನೋಡಿದಾಗ ಫ್ರಿಡ್ಜ್​ಗಿಂತ ಮಡಿಕೆಯೇ ಸಮರ್ಥ. ನಮ್ಮ ನಿತ್ಯಜೀವನದಲ್ಲಿ ಇದು ಅತ್ಯುತ್ತಮವಾದ ಗೃಹಸಾಧನವಾಗಬಲ್ಲುದು’ ಎಂದು ಉದ್ಯಮಿ ಆನಂದ ಮಹೀಂದ್ರಾ ಫ್ರಿಡ್ಜ್ ಮತ್ತು ಮಡಿಕೆಯ ಫೋಟೋ ಟ್ವೀಟ್ ಮಾಡಿದ್ದಾರೆ. ಇದೀಗ ನಿನ್ನೆಯಷ್ಟೇ ಮಾಡಿದ ಈ ಟ್ವೀಟ್ ಈಗಾಗಲೇ 1.2 ಮಿಲಿಯನ್​ಗಿಂತಲೂ ಹೆಚ್ಚು ಜನರ ಗಮನ ಸೆಳೆದಿದೆ.

ಅನೇಕರು ಈ ಟ್ವೀಟ್​ಗೆ ವಿವಿಧ ನೋಟಗಳಿಂದ ಪ್ರತಿಕ್ರಿಯಿಸಿದ್ದಾರೆ. ಕೆಲವರು ಈ ಟ್ವೀಟ್​ ಅನ್ನು ಒಪ್ಪಿದ್ದಾರೆ ಇನ್ನೂ ಕೆಲವರು ಇದು ವಾಸ್ತವದಿಂದ ದೂರ ಎಂದಿದ್ದಾರೆ. ಇನ್ನೂ ಕೆಲವರು ತಮಾಷೆಯಾಗಿ ಉತ್ತರಿಸಿದ್ದಾರೆ. ಮಡಿಕೆಗಾದರೆ ರೂ. 200 ವ್ಯಯಿಸಬಹುದು. ಫ್ರಿಡ್ಜ್​ ಗಾದರೆ ರೂ. 10,000 ಮತ್ತು ಅದಕ್ಕಿಂತಲೂ ಮಿಗಿಲು. ಜೊತೆಗೆ ವಿದ್ಯುತ್ ಬಿಲ್​. ಆದರೆ ಮಡಿಕೆಯಲ್ಲಿರುವ ನೀರು ಬೇಸಿಗೆಯಲ್ಲಿ ತಂಪಾಗಿರುತ್ತದೆ ಮತ್ತು ರುಚಿಯನ್ನೂ ಹೆಚ್ಚಿಸಿಕೊಳ್ಳುತ್ತದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ : ವೈರಲ್ ಚಿಲ್ಲಿ ಲಿಪ್​ ಗ್ಲಾಸ್​; ಇದನ್ನು ಟ್ರೆಂಡ್​ ಆಗಲು ಬಿಡಬೇಡಿ ಎನ್ನುತ್ತಿರುವ ನೆಟ್ಟಿಗರು

ಆದರೆ ಮಡಿಕೆ ಮತ್ತು ಫ್ರಿಡ್ಜ್​ ಅನ್ನು ಸಾಮ್ಯಗೊಳಿಸಲಾಗದು ಎರಡರ ಪ್ರಯೋಜನ ಬೇರೆಬೇರೆಯೇ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಮಡಿಕೆ ಇದ್ದರೆ ಮುಗಿಯಿತು ಫ್ರಿಡ್ಜ್​ ಅಥವಾ ನೀರಿನ ಬಾಟಲಿಯ ಅಗತ್ಯವೇ ಇಲ್ಲ ಎಂದು ಕೆಲವರು ಹೇಳಿದ್ದಾರೆ. ಮಡಿಕೆಯೇ ಯಾಕಾಗಬೇಕು? ನಾನು ಪ್ರತೀ ಬೇಸಿಗೆಯಲ್ಲಿ ತಾಮ್ರದ ಪಾತ್ರೆಯಲ್ಲಿ ಮಲ್ಲಿಗೆ ಹೂ ಹಾಕಿಟ್ಟಿರುತ್ತೇನೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : ಮೊಬೈಲ್​ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ವಿದ್ಯಾರ್ಥಿನಿಯಿಂದ ಪೆಪ್ಪರ್ ಸ್ಪ್ರೇ; ವಿಡಿಯೋ ವೈರಲ್

ನಾನು ಮಡಿಕೆಯಲ್ಲಿ ಕ್ರೀಮ್​ ಇಟ್ಟರೆ ಅದು ಮಿಲ್ಕ್​ ಶೇಕ್​ ಆಗಿರುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಅದು ಐಸ್ಕ್ರೀಮ್ ಆಗಬೇಕೆಂದರೆ ಫ್ರಿಡ್ಜ್​ನಲ್ಲಿಡಿ ಎಂದು ತಮಾಷೆ ಮಾಡಿದ್ದಾರೆ. ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:29 pm, Wed, 10 May 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ