AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್​ಗಿಂತ ಮಡಿಕೆಯೇ ಉತ್ತಮ! ಆನಂದ ಮಹೀಂದ್ರಾ ಯಾಕೆ ಹೀಗೆ ಹೇಳಿರುವುದು?

Anand Mahindra : ಹೀಗೆ ನೀವು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮಡಿಕೆಯೇ ಬೇರೆ ಫ್ರಿಡ್ಜೇ ಬೇರೆ. ಎರಡರ ಪ್ರಯೋಜನಗಳು ಬೇರೆಬೇರೆ ಎಂದು ಅನೇಕರು ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ನೀವೇನಂತೀರಿ?

ಫ್ರಿಡ್ಜ್​ಗಿಂತ ಮಡಿಕೆಯೇ ಉತ್ತಮ! ಆನಂದ ಮಹೀಂದ್ರಾ ಯಾಕೆ ಹೀಗೆ ಹೇಳಿರುವುದು?
ಫ್ರಿಡ್ಜ್​ ಮತ್ತು ಮಣ್ಣಿನ ಮಡಿಕೆ
TV9 Web
| Edited By: ಶ್ರೀದೇವಿ ಕಳಸದ|

Updated on:May 10, 2023 | 4:32 PM

Share

Viral News : ‘ವಿನ್ಯಾಸ ಮತ್ತು ಸೌಂದರ್ಯಪ್ರಜ್ಞೆಯ ಹಿನ್ನೆಲೆಯಲ್ಲಿ ನೋಡಿದಾಗ ಫ್ರಿಡ್ಜ್​ಗಿಂತ ಮಡಿಕೆಯೇ ಸಮರ್ಥ. ನಮ್ಮ ನಿತ್ಯಜೀವನದಲ್ಲಿ ಇದು ಅತ್ಯುತ್ತಮವಾದ ಗೃಹಸಾಧನವಾಗಬಲ್ಲುದು’ ಎಂದು ಉದ್ಯಮಿ ಆನಂದ ಮಹೀಂದ್ರಾ ಫ್ರಿಡ್ಜ್ ಮತ್ತು ಮಡಿಕೆಯ ಫೋಟೋ ಟ್ವೀಟ್ ಮಾಡಿದ್ದಾರೆ. ಇದೀಗ ನಿನ್ನೆಯಷ್ಟೇ ಮಾಡಿದ ಈ ಟ್ವೀಟ್ ಈಗಾಗಲೇ 1.2 ಮಿಲಿಯನ್​ಗಿಂತಲೂ ಹೆಚ್ಚು ಜನರ ಗಮನ ಸೆಳೆದಿದೆ.

ಅನೇಕರು ಈ ಟ್ವೀಟ್​ಗೆ ವಿವಿಧ ನೋಟಗಳಿಂದ ಪ್ರತಿಕ್ರಿಯಿಸಿದ್ದಾರೆ. ಕೆಲವರು ಈ ಟ್ವೀಟ್​ ಅನ್ನು ಒಪ್ಪಿದ್ದಾರೆ ಇನ್ನೂ ಕೆಲವರು ಇದು ವಾಸ್ತವದಿಂದ ದೂರ ಎಂದಿದ್ದಾರೆ. ಇನ್ನೂ ಕೆಲವರು ತಮಾಷೆಯಾಗಿ ಉತ್ತರಿಸಿದ್ದಾರೆ. ಮಡಿಕೆಗಾದರೆ ರೂ. 200 ವ್ಯಯಿಸಬಹುದು. ಫ್ರಿಡ್ಜ್​ ಗಾದರೆ ರೂ. 10,000 ಮತ್ತು ಅದಕ್ಕಿಂತಲೂ ಮಿಗಿಲು. ಜೊತೆಗೆ ವಿದ್ಯುತ್ ಬಿಲ್​. ಆದರೆ ಮಡಿಕೆಯಲ್ಲಿರುವ ನೀರು ಬೇಸಿಗೆಯಲ್ಲಿ ತಂಪಾಗಿರುತ್ತದೆ ಮತ್ತು ರುಚಿಯನ್ನೂ ಹೆಚ್ಚಿಸಿಕೊಳ್ಳುತ್ತದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ : ವೈರಲ್ ಚಿಲ್ಲಿ ಲಿಪ್​ ಗ್ಲಾಸ್​; ಇದನ್ನು ಟ್ರೆಂಡ್​ ಆಗಲು ಬಿಡಬೇಡಿ ಎನ್ನುತ್ತಿರುವ ನೆಟ್ಟಿಗರು

ಆದರೆ ಮಡಿಕೆ ಮತ್ತು ಫ್ರಿಡ್ಜ್​ ಅನ್ನು ಸಾಮ್ಯಗೊಳಿಸಲಾಗದು ಎರಡರ ಪ್ರಯೋಜನ ಬೇರೆಬೇರೆಯೇ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಮಡಿಕೆ ಇದ್ದರೆ ಮುಗಿಯಿತು ಫ್ರಿಡ್ಜ್​ ಅಥವಾ ನೀರಿನ ಬಾಟಲಿಯ ಅಗತ್ಯವೇ ಇಲ್ಲ ಎಂದು ಕೆಲವರು ಹೇಳಿದ್ದಾರೆ. ಮಡಿಕೆಯೇ ಯಾಕಾಗಬೇಕು? ನಾನು ಪ್ರತೀ ಬೇಸಿಗೆಯಲ್ಲಿ ತಾಮ್ರದ ಪಾತ್ರೆಯಲ್ಲಿ ಮಲ್ಲಿಗೆ ಹೂ ಹಾಕಿಟ್ಟಿರುತ್ತೇನೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : ಮೊಬೈಲ್​ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ವಿದ್ಯಾರ್ಥಿನಿಯಿಂದ ಪೆಪ್ಪರ್ ಸ್ಪ್ರೇ; ವಿಡಿಯೋ ವೈರಲ್

ನಾನು ಮಡಿಕೆಯಲ್ಲಿ ಕ್ರೀಮ್​ ಇಟ್ಟರೆ ಅದು ಮಿಲ್ಕ್​ ಶೇಕ್​ ಆಗಿರುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಅದು ಐಸ್ಕ್ರೀಮ್ ಆಗಬೇಕೆಂದರೆ ಫ್ರಿಡ್ಜ್​ನಲ್ಲಿಡಿ ಎಂದು ತಮಾಷೆ ಮಾಡಿದ್ದಾರೆ. ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:29 pm, Wed, 10 May 23

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?