AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಗೋಲ್ಡನ್ ಬೀಚ್​ನ ಮನೋಹರ ದೃಶ್ಯಗಳು

Golden Beach : ಕಳೆದ ಮೂರು ವರ್ಷಗಳಿಂದ ಬ್ಲ್ಯೂ ಫ್ಲ್ಯಾಗ್ ಬೀಚ್ ಮಾನ್ಯತೆ ಪಡೆದ ಒಡಿಶಾದ ಗೋಲ್ಡನ್​ ಬೀಚ್​​ನ ರಮಣೀಯ ದೃಶ್ಯಗಳನ್ನು ಟ್ವೀಟ್ ಮಾಡಿದ್ದಾರೆ ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ.

ಒಡಿಶಾದ ಗೋಲ್ಡನ್ ಬೀಚ್​ನ ಮನೋಹರ ದೃಶ್ಯಗಳು
ಒಡಿಶಾದ ಗೋಲ್ಡನ್ ಬೀಚ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Feb 14, 2023 | 10:18 AM

Viral News : ಬೀಚ್​ನಲ್ಲಿ ಆಹ್ಲಾದಕರ ಕ್ಷಣಗಳನ್ನು ಕಳೆಯಲು ಮನಸ್ಸು ಹಾತೊರೆಯುತ್ತದೆ ನಿಜ, ಆದರೆ ಅಲ್ಲಿರುವ ಪರಿಸರ ವಾತಾವರಣ ಶುಚಿಯಾಗಿರಬೇಕಷ್ಟೇ. ಭಾರತದಲ್ಲಿರುವ ಎಲ್ಲಾ ಬೀಚ್​​ಗಳು ಈ ಮಟ್ಟದಲ್ಲಿ ಶುಚಿತ್ವ ಕಾಪಾಡಿಕೊಂಡಿವೆ ಎಂದು ಹೇಳಲಾಗದು. ಆದರೆ ಒಡಿಶಾದ ಪುರಿಯಲ್ಲಿರುವ ಗೋಲ್ಡನ್​ ಬೀಚ್ ಮಾತ್ರ ಈ ಪೈಕಿ ವಿಶೇಷ ಗಮನ ಸೆಳೆಯುತ್ತ ಬಂದಿದೆ. ಕಳೆದ ಮೂರು ವರ್ಷಗಳಿಂದ ಬ್ಲ್ಯೂ ಫ್ಲ್ಯಾಗ್​ ಬೀಚ್​ ಮಾನ್ಯತೆ ಪಡೆದಿದೆ ಎಂದು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ.

ಪುರಿಯಲ್ಲಿರುವ ಈ ಗೋಲ್ಡನ್​ ಬೀಚ್​ನ ಸುಂದರವಾದ ಫೋಟೋಗಳನ್ನು ಗಮನಿಸಿ. ಡೆನ್ಮಾರ್ಕ್‌ನಲ್ಲಿರುವ ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಶನ್ (FEE) ನಿಂದ ಬ್ಲ್ಯೂ ಫ್ಲ್ಯಾಗ್ ಬೀಚ್​ ಮಾನ್ಯತೆಯನ್ನು ಪಡೆದ ಈ ಬೀಚ್​ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಪರಿಸರ ನಿರ್ವಹಣೆ, ಸಂರಕ್ಷಣೆ, ಸಮುದ್ರ ತೀರದಲ್ಲಿನ ಸುರಕ್ಷತೆ, ಸೇವೆ ಇತ್ಯಾದಿ 33 ಮಾನದಂಡಗಳನ್ನು ಅನುಸರಿಸಿದ್ದಕ್ಕಾಗಿ ಬ್ಲ್ಯೂ ಫ್ಲ್ಯಾಗ್​ ಮಾನ್ಯತೆಯನ್ನು ಈ ಬೀಚ್​ ಪಡೆದಿದೆ.

ಇದನ್ನೂ ಓದಿ : ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ

ಎರಡು ದಿನಗಳ ಹಿಂದೆ ಈ ಪೋಸ್ಟ್​ ಟ್ವೀಟ್ ಮಾಡಿದ್ದಾರೆ ಸುಸಾಂತ. ಈತನಕ ಸುಮಾರು 18,000 ಜನರು ನೋಡಿದ್ದಾರೆ. 600 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಸಮುದ್ರ ತೀರದಲ್ಲಿ ಮರಳನ್ನು ಗುಡಿಸುತ್ತಾರಾ? ಎಂಥಾ ಅದ್ಭುತ ಎಂದಿದ್ದಾರೆ ಒಬ್ಬರು. ನಿಜಕ್ಕೂ ಈ ಬೀಚ್​ನ ದೃಶ್ಯಗಳು ಬಹಳ ಸುಂದರವಾಗಿವೆ. ಮುಂದಿನ ರಜೆಗೆ ನಾನು ಪ್ಲ್ಯಾನ್ ಮಾಡುತ್ತೇನೆ ಎಂದಿದ್ದಾರೆ ಅನೇಕರು.

ಇದನ್ನೂ ಓದಿ : ವರ್ಷದ ಅಪ್ಪ ಪ್ರಶಸ್ತಿ ಈ ಅಪ್ಪನಿಗೇ! ವೈರಲ್ ಆದ ವಿಡಿಯೋ

ಯಾಕೆ ಇವರು ಬ್ಯಾಟರಿ ಆನ್ ಮಾಡಿದ್ದಾರೆ? ಮೊಟ್ಟೆಯಲ್ಲಿರುವ ಆಮೆಯ ಮರಿಗಳಿಗೆ ತೊಂದರೆ ಆಗುವುದಿಲ್ಲವೆ? ಎಂದು ಕೇಳಿದ್ದಾರೆ ಮತ್ತೊಬ್ಬರು. ಇಂಥ ಸ್ವಚ್ಛತೆಯನ್ನು ಭಾರತದ ಎಲ್ಲಾ ಬೀಚ್​ಗಳೂ ಅನುಸರಿಸಬೇಕು ಎಂದು ಅನೇಕರು ಹೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:18 am, Tue, 14 February 23

ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?