AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಗೋಲ್ಡನ್ ಬೀಚ್​ನ ಮನೋಹರ ದೃಶ್ಯಗಳು

Golden Beach : ಕಳೆದ ಮೂರು ವರ್ಷಗಳಿಂದ ಬ್ಲ್ಯೂ ಫ್ಲ್ಯಾಗ್ ಬೀಚ್ ಮಾನ್ಯತೆ ಪಡೆದ ಒಡಿಶಾದ ಗೋಲ್ಡನ್​ ಬೀಚ್​​ನ ರಮಣೀಯ ದೃಶ್ಯಗಳನ್ನು ಟ್ವೀಟ್ ಮಾಡಿದ್ದಾರೆ ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ.

ಒಡಿಶಾದ ಗೋಲ್ಡನ್ ಬೀಚ್​ನ ಮನೋಹರ ದೃಶ್ಯಗಳು
ಒಡಿಶಾದ ಗೋಲ್ಡನ್ ಬೀಚ್
TV9 Web
| Edited By: |

Updated on:Feb 14, 2023 | 10:18 AM

Share

Viral News : ಬೀಚ್​ನಲ್ಲಿ ಆಹ್ಲಾದಕರ ಕ್ಷಣಗಳನ್ನು ಕಳೆಯಲು ಮನಸ್ಸು ಹಾತೊರೆಯುತ್ತದೆ ನಿಜ, ಆದರೆ ಅಲ್ಲಿರುವ ಪರಿಸರ ವಾತಾವರಣ ಶುಚಿಯಾಗಿರಬೇಕಷ್ಟೇ. ಭಾರತದಲ್ಲಿರುವ ಎಲ್ಲಾ ಬೀಚ್​​ಗಳು ಈ ಮಟ್ಟದಲ್ಲಿ ಶುಚಿತ್ವ ಕಾಪಾಡಿಕೊಂಡಿವೆ ಎಂದು ಹೇಳಲಾಗದು. ಆದರೆ ಒಡಿಶಾದ ಪುರಿಯಲ್ಲಿರುವ ಗೋಲ್ಡನ್​ ಬೀಚ್ ಮಾತ್ರ ಈ ಪೈಕಿ ವಿಶೇಷ ಗಮನ ಸೆಳೆಯುತ್ತ ಬಂದಿದೆ. ಕಳೆದ ಮೂರು ವರ್ಷಗಳಿಂದ ಬ್ಲ್ಯೂ ಫ್ಲ್ಯಾಗ್​ ಬೀಚ್​ ಮಾನ್ಯತೆ ಪಡೆದಿದೆ ಎಂದು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ.

ಪುರಿಯಲ್ಲಿರುವ ಈ ಗೋಲ್ಡನ್​ ಬೀಚ್​ನ ಸುಂದರವಾದ ಫೋಟೋಗಳನ್ನು ಗಮನಿಸಿ. ಡೆನ್ಮಾರ್ಕ್‌ನಲ್ಲಿರುವ ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಶನ್ (FEE) ನಿಂದ ಬ್ಲ್ಯೂ ಫ್ಲ್ಯಾಗ್ ಬೀಚ್​ ಮಾನ್ಯತೆಯನ್ನು ಪಡೆದ ಈ ಬೀಚ್​ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಪರಿಸರ ನಿರ್ವಹಣೆ, ಸಂರಕ್ಷಣೆ, ಸಮುದ್ರ ತೀರದಲ್ಲಿನ ಸುರಕ್ಷತೆ, ಸೇವೆ ಇತ್ಯಾದಿ 33 ಮಾನದಂಡಗಳನ್ನು ಅನುಸರಿಸಿದ್ದಕ್ಕಾಗಿ ಬ್ಲ್ಯೂ ಫ್ಲ್ಯಾಗ್​ ಮಾನ್ಯತೆಯನ್ನು ಈ ಬೀಚ್​ ಪಡೆದಿದೆ.

ಇದನ್ನೂ ಓದಿ : ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ

ಎರಡು ದಿನಗಳ ಹಿಂದೆ ಈ ಪೋಸ್ಟ್​ ಟ್ವೀಟ್ ಮಾಡಿದ್ದಾರೆ ಸುಸಾಂತ. ಈತನಕ ಸುಮಾರು 18,000 ಜನರು ನೋಡಿದ್ದಾರೆ. 600 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಸಮುದ್ರ ತೀರದಲ್ಲಿ ಮರಳನ್ನು ಗುಡಿಸುತ್ತಾರಾ? ಎಂಥಾ ಅದ್ಭುತ ಎಂದಿದ್ದಾರೆ ಒಬ್ಬರು. ನಿಜಕ್ಕೂ ಈ ಬೀಚ್​ನ ದೃಶ್ಯಗಳು ಬಹಳ ಸುಂದರವಾಗಿವೆ. ಮುಂದಿನ ರಜೆಗೆ ನಾನು ಪ್ಲ್ಯಾನ್ ಮಾಡುತ್ತೇನೆ ಎಂದಿದ್ದಾರೆ ಅನೇಕರು.

ಇದನ್ನೂ ಓದಿ : ವರ್ಷದ ಅಪ್ಪ ಪ್ರಶಸ್ತಿ ಈ ಅಪ್ಪನಿಗೇ! ವೈರಲ್ ಆದ ವಿಡಿಯೋ

ಯಾಕೆ ಇವರು ಬ್ಯಾಟರಿ ಆನ್ ಮಾಡಿದ್ದಾರೆ? ಮೊಟ್ಟೆಯಲ್ಲಿರುವ ಆಮೆಯ ಮರಿಗಳಿಗೆ ತೊಂದರೆ ಆಗುವುದಿಲ್ಲವೆ? ಎಂದು ಕೇಳಿದ್ದಾರೆ ಮತ್ತೊಬ್ಬರು. ಇಂಥ ಸ್ವಚ್ಛತೆಯನ್ನು ಭಾರತದ ಎಲ್ಲಾ ಬೀಚ್​ಗಳೂ ಅನುಸರಿಸಬೇಕು ಎಂದು ಅನೇಕರು ಹೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:18 am, Tue, 14 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್