AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಮಾ ಚಾವಲ್​; ತೋಳಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿಯ ಫೋಟೋ ವೈರಲ್

Tattoo : ಸ್ವಿಗ್ಗಿ ಈ ಫೋಟೋ ಅನ್ನು ಟ್ವೀಟ್ ಮಾಡಿದೆ. ನೆಟ್ಟಿಗರೆಲ್ಲ ನಾನು ವಡಾ ಪಾವ್​, ನಾನು ಜಾಮೂನ್​, ನಾನು ಚಹಾ, ನಾನು ಆಲೂ ದಮ್ ಹೀಗೆ ತಮ್ಮಿಷ್ಟದ ತಿಂಡಿತೀರ್ಥಗಳ ಟ್ಯಾಟೂ ಹಾಕಿಸಿಕೊಳ್ಳುತ್ತೇವೆ ಎನ್ನುತ್ತಿದ್ದಾರೆ. ನೀವು?

ರಾಜ್ಮಾ ಚಾವಲ್​; ತೋಳಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿಯ ಫೋಟೋ ವೈರಲ್
ರಾಜ್ಮಾ ಚಾವಲ್ ಎಂದು ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ
ಶ್ರೀದೇವಿ ಕಳಸದ
|

Updated on:Feb 06, 2023 | 5:09 PM

Share

Viral Video : ಮೊದಲು ಹಣೆ, ಕೈಮೇಲಷ್ಟೇ ನಿರ್ದಿಷ್ಟ ವಿನ್ಯಾಸದ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದರು. ಬಹಳವೆಂದರೆ ಕೈಮೇಲೆ ಪ್ರೀತಿಪಾತ್ರರ ಹೆಸರುಗಳನ್ನು ಹಾಕಿಸಿಕೊಳ್ಳುತ್ತಿದ್ದರು. ಆದರೆ ಈಗ ಹಾಗಲ್ಲ. ಪ್ರೀತಿಪಾತ್ರರ ಹೆಸರಿನೊಂದಿಗೆ ಫೋಟೋ ಕೂಡ ಹಾಕಿಸಿಕೊಳ್ಳುತ್ತಾರೆ. ಇಷ್ಟವಾದ ಯಾವ ವಿನ್ಯಾಸವನ್ನೂ, ಛಾಯಾಚಿತ್ರವನ್ನೂ ದೇಹದ ಯಾವುದೇ ಭಾಗದಲ್ಲಿಯೂ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಈ ಫೋಟೋ ನೋಡಿ. ಸ್ವಿಗ್ಗಿ ಇದನ್ನು ಟ್ವೀಟ್ ಮಾಡಿದೆ. ಒಬ್ಬ ವ್ಯಕ್ತಿ ರಾಜ್ಮಾ ಚಾವಲ್​ ಎಂದು ತನ್ನ ಹೊರದೋಳಿನ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ನೆಟ್ಟಿಗರು ಈ ಬಗ್ಗೆ ಸಾಕಷ್ಟು ಕುತೂಹಲದಿಂದ ಚರ್ಚಿಸುತ್ತಿದ್ದಾರೆ.

ಎಲ್ಲಾ ಬಿಟ್ಟು ಈ ವ್ಯಕ್ತಿ ಹೀಗೆ ಯಾಕೆ ಹಾಕಿಸಿಕೊಂಡಿದ್ದು ಎಂದು ಯೋಚಿಸುತ್ತಿದೆ ನೆಟ್​ಮಂದಿ. ನಾನು ವಡಾ ಪಾವ್​​, ಪಾವ್​ ಭಾಜಿ ಎಂದು ಹಾಕಿಸಿಕೊಳ್ಳುತ್ತೇನೆ ಎಂದಿದ್ದಾರೆ ಒಬ್ಬರು. ಇದು ನಮ್ಮ ನಿತ್ಯದ ಆಹಾರ, ಇದರಲ್ಲಿ ನನಗೆ ಅಸಹಜ ಎಂದು ಅನ್ನಿಸಿಲ್ಲ ಎಂದಿದ್ದಾರೆ ಮತ್ತೊಬ್ಬರು. ನಾನು ಚೋಲೆ ಬಟೂರೆ ಎಂದು ಹಾಕಿಸಿಕೊಳ್ಳುತ್ತೇನೆ ಎಂದು ಇನ್ನೊಬ್ಬರು. ನಾನು ಚಹಾ ಎಂದು ಹಾಕಿಸಿಕೊಳ್ಳುತ್ತೇನೆ ಎಂದು ಮಗದೊಬ್ಬರು.

ಇದನ್ನೂ ಓದಿ : ಯುರೋಪ್​ಗೆ ಡ್ರಗ್ಸ್​​ ಕಳ್ಳಸಾಗಣೆ ಮಾಡುವುದು ಹೇಗೆ? ವ್ಯಕ್ತಿಯೊಬ್ಬನಿಗೆ ಚಾಟ್​ಜಿಪಿಟಿ ಸಲಹೆ ಕೊಟ್ಟಾಗ

ಈ ಪೋಸ್ಟ್​​ ಅನ್ನು ಈಗಾಗಲೇ 15,000 ಜನರು ನೋಡಿದ್ದಾರೆ. 147 ಜನ ಇಷ್ಟಪಟ್ಟಿದ್ದಾರೆ. 14 ಜನರು ರೀಟ್ವೀಟ್ ಮಾಡಿದ್ದಾರೆ. ನಾನಂತೂ ಈ ವ್ಯಕ್ತಿಯನ್ನು ಪೂರ್ತಿ ಬೆಂಬಲಿಸುತ್ತೇನೆ ಎಂದಿದ್ದಾರೆ ಒಬ್ಬರು. ನಾನಂತೂ ಗುಲಾಬ್​ ಜಾಮೂನ್ ಎಂದು ಹಾಕಿಸಿಕೊಳ್ಳುತ್ತೇನೆ ಎಂದಿದ್ದಾರೆ ಮತ್ತೊಬ್ಬರು. ದಮ್ ಆಲೂ ಎಂದು ಇನ್ನೂ ಒಬ್ಬರು ಹೇಳಿದ್ದಾರೆ.

ಇದನ್ನು ನೋಡಿ ನಿಮಗೇನಾದರೂ ಹೀಗೆ ಟ್ಯಾಟೂ ಹಾಕಿಸಿಕೊಳ್ಳಬೇಕು ಅನ್ನಿಸಿತೆ? ಹಾಗಿದ್ದರೆ ನಿಮ್ಮಿಷ್ಟದ ಯಾವ ತಿಂಡಿಯ ಹೆಸರನ್ನು ನೀವು ಎಲ್ಲಿ ಹಾಕಿಸಿಕೊಳ್ಳಲು ಬಯಸುತ್ತೀರಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:08 pm, Mon, 6 February 23

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್