AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್

18 ವರ್ಷದ ಬಾಲಕ ವೇಗವಾಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ಅದೃಷ್ಟವಶಾತ್ ಅಲ್ಲೇ ಇದ್ದ ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರಕ್ಷಿಸಿದ್ದಾರೆ.

Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್
ರೈಲಿನ ಎದುರು ಹಾರಿದ ವ್ಯಕ್ತಿಯ ವಿಡಿಯೋ ವೈರಲ್
TV9 Web
| Edited By: |

Updated on: Mar 24, 2022 | 5:06 PM

Share

ಥಾಣೆ: ಮಹಾರಾಷ್ಟ್ರದ ಥಾಣೆ (Thane) ಜಿಲ್ಲೆಯ ವಿಠಲವಾಡಿ ರೈಲ್ವೆ ನಿಲ್ದಾಣದೊಳಗೆ ಬರುತ್ತಿದ್ದ ರೈಲಿನ ಎದುರು ಹಾರಿ, ಅತ್ಮಹತ್ಯೆ (Suicide) ಮಾಡಿಕೊಳ್ಳಲು ಪ್ರಯತ್ನಿಸಿದ ಯುವಕನನ್ನು ಸಿನಿಮೀಯ ರೀತಿಯಲ್ಲಿ ರೈಲ್ವೇ ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ್ದಾರೆ. ಮಾರ್ಚ್ 23ರಂದು ಮಹಾರಾಷ್ಟ್ರದ ಥಾಣೆಯ ವಿಠ್ಠಲವಾಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಬಾಲಕ ವೇಗವಾಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ಅದೃಷ್ಟವಶಾತ್ ಅಲ್ಲೇ ಇದ್ದ ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರಕ್ಷಿಸಿದ್ದಾರೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದ (Railway Station) ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಕ್ಲಿಪ್ ಅನ್ನು ಎಎನ್‌ಐ ಮತ್ತು ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಅಡ್ಡಾಡುತ್ತಿದ್ದ ಬಾಲಕನನ್ನು ಕಂಡು ಅನುಮಾನಗೊಂಡ ಕಾನ್‌ಸ್ಟೆಬಲ್ ಹೃಷಿಕೇಶ್ ಮಾನೆ ರಕ್ಷಣೆಗೆ ಧಾವಿಸಿದ್ದಾರೆ. ರೈಲು ನಿಲ್ದಾಣದೊಳಗೆ ಬೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದ ಯುವಕನನ್ನು ರಕ್ಷಿಸಲು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್ ಕೂಡ ಹಳಿ ಮೇಲೆ ಹಾರಿದ್ದಾರೆ.

ಪೊಲೀಸ್ ಪೇದೆ ತನ್ನ ಪ್ರಾಣದ ಹಂಗಿಲ್ಲದೆ ರೈಲಿನ ಹಳಿ ಮೇಲೆ ಹಾರಿ, ಬಾಲಕನನ್ನು ಹಳಿಯಿಂದ ದೂರ ತಳ್ಳಿದರು. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕನ ಪ್ರಾಣ ಉಳಿದಿದೆ ಎಂದು ಸಹಾಯಕ ಪೊಲೀಸ್ ಕಮಿಷನರ್ ವಿಜಯ್ ದಾರೆಕರ್ ಹೇಳಿದ್ದಾರೆ. ಪೊಲೀಸರು ಆ ಯುವಕನನ್ನು ಕಲ್ಯಾಣ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Viral Video: ಸೇಬು, ಚಿಕ್ಕು, ಬಾಳೆಹಣ್ಣು ಹಾಕಿ ಟೀ ಮಾಡಿದ ಚಾಯ್​ವಾಲ; ವಿಡಿಯೋ ನೋಡಿ ನೆಟ್ಟಿಗರು ಸುಸ್ತು!

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ