Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್

18 ವರ್ಷದ ಬಾಲಕ ವೇಗವಾಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ಅದೃಷ್ಟವಶಾತ್ ಅಲ್ಲೇ ಇದ್ದ ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರಕ್ಷಿಸಿದ್ದಾರೆ.

Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್
ರೈಲಿನ ಎದುರು ಹಾರಿದ ವ್ಯಕ್ತಿಯ ವಿಡಿಯೋ ವೈರಲ್
Follow us
| Updated By: ಸುಷ್ಮಾ ಚಕ್ರೆ

Updated on: Mar 24, 2022 | 5:06 PM

ಥಾಣೆ: ಮಹಾರಾಷ್ಟ್ರದ ಥಾಣೆ (Thane) ಜಿಲ್ಲೆಯ ವಿಠಲವಾಡಿ ರೈಲ್ವೆ ನಿಲ್ದಾಣದೊಳಗೆ ಬರುತ್ತಿದ್ದ ರೈಲಿನ ಎದುರು ಹಾರಿ, ಅತ್ಮಹತ್ಯೆ (Suicide) ಮಾಡಿಕೊಳ್ಳಲು ಪ್ರಯತ್ನಿಸಿದ ಯುವಕನನ್ನು ಸಿನಿಮೀಯ ರೀತಿಯಲ್ಲಿ ರೈಲ್ವೇ ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ್ದಾರೆ. ಮಾರ್ಚ್ 23ರಂದು ಮಹಾರಾಷ್ಟ್ರದ ಥಾಣೆಯ ವಿಠ್ಠಲವಾಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಬಾಲಕ ವೇಗವಾಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ಅದೃಷ್ಟವಶಾತ್ ಅಲ್ಲೇ ಇದ್ದ ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರಕ್ಷಿಸಿದ್ದಾರೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದ (Railway Station) ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಕ್ಲಿಪ್ ಅನ್ನು ಎಎನ್‌ಐ ಮತ್ತು ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಅಡ್ಡಾಡುತ್ತಿದ್ದ ಬಾಲಕನನ್ನು ಕಂಡು ಅನುಮಾನಗೊಂಡ ಕಾನ್‌ಸ್ಟೆಬಲ್ ಹೃಷಿಕೇಶ್ ಮಾನೆ ರಕ್ಷಣೆಗೆ ಧಾವಿಸಿದ್ದಾರೆ. ರೈಲು ನಿಲ್ದಾಣದೊಳಗೆ ಬೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದ ಯುವಕನನ್ನು ರಕ್ಷಿಸಲು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್ ಕೂಡ ಹಳಿ ಮೇಲೆ ಹಾರಿದ್ದಾರೆ.

ಪೊಲೀಸ್ ಪೇದೆ ತನ್ನ ಪ್ರಾಣದ ಹಂಗಿಲ್ಲದೆ ರೈಲಿನ ಹಳಿ ಮೇಲೆ ಹಾರಿ, ಬಾಲಕನನ್ನು ಹಳಿಯಿಂದ ದೂರ ತಳ್ಳಿದರು. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕನ ಪ್ರಾಣ ಉಳಿದಿದೆ ಎಂದು ಸಹಾಯಕ ಪೊಲೀಸ್ ಕಮಿಷನರ್ ವಿಜಯ್ ದಾರೆಕರ್ ಹೇಳಿದ್ದಾರೆ. ಪೊಲೀಸರು ಆ ಯುವಕನನ್ನು ಕಲ್ಯಾಣ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Viral Video: ಸೇಬು, ಚಿಕ್ಕು, ಬಾಳೆಹಣ್ಣು ಹಾಕಿ ಟೀ ಮಾಡಿದ ಚಾಯ್​ವಾಲ; ವಿಡಿಯೋ ನೋಡಿ ನೆಟ್ಟಿಗರು ಸುಸ್ತು!

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್