AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್

18 ವರ್ಷದ ಬಾಲಕ ವೇಗವಾಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ಅದೃಷ್ಟವಶಾತ್ ಅಲ್ಲೇ ಇದ್ದ ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರಕ್ಷಿಸಿದ್ದಾರೆ.

Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್
ರೈಲಿನ ಎದುರು ಹಾರಿದ ವ್ಯಕ್ತಿಯ ವಿಡಿಯೋ ವೈರಲ್
TV9 Web
| Edited By: |

Updated on: Mar 24, 2022 | 5:06 PM

Share

ಥಾಣೆ: ಮಹಾರಾಷ್ಟ್ರದ ಥಾಣೆ (Thane) ಜಿಲ್ಲೆಯ ವಿಠಲವಾಡಿ ರೈಲ್ವೆ ನಿಲ್ದಾಣದೊಳಗೆ ಬರುತ್ತಿದ್ದ ರೈಲಿನ ಎದುರು ಹಾರಿ, ಅತ್ಮಹತ್ಯೆ (Suicide) ಮಾಡಿಕೊಳ್ಳಲು ಪ್ರಯತ್ನಿಸಿದ ಯುವಕನನ್ನು ಸಿನಿಮೀಯ ರೀತಿಯಲ್ಲಿ ರೈಲ್ವೇ ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ್ದಾರೆ. ಮಾರ್ಚ್ 23ರಂದು ಮಹಾರಾಷ್ಟ್ರದ ಥಾಣೆಯ ವಿಠ್ಠಲವಾಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಬಾಲಕ ವೇಗವಾಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಳಿಗಳ ಮೇಲೆ ಹಾರಿದ್ದಾನೆ. ಆದರೆ ಅದೃಷ್ಟವಶಾತ್ ಅಲ್ಲೇ ಇದ್ದ ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರಕ್ಷಿಸಿದ್ದಾರೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದ (Railway Station) ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಕ್ಲಿಪ್ ಅನ್ನು ಎಎನ್‌ಐ ಮತ್ತು ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಅಡ್ಡಾಡುತ್ತಿದ್ದ ಬಾಲಕನನ್ನು ಕಂಡು ಅನುಮಾನಗೊಂಡ ಕಾನ್‌ಸ್ಟೆಬಲ್ ಹೃಷಿಕೇಶ್ ಮಾನೆ ರಕ್ಷಣೆಗೆ ಧಾವಿಸಿದ್ದಾರೆ. ರೈಲು ನಿಲ್ದಾಣದೊಳಗೆ ಬೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದ ಯುವಕನನ್ನು ರಕ್ಷಿಸಲು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ) ಕಾನ್‌ಸ್ಟೆಬಲ್ ಕೂಡ ಹಳಿ ಮೇಲೆ ಹಾರಿದ್ದಾರೆ.

ಪೊಲೀಸ್ ಪೇದೆ ತನ್ನ ಪ್ರಾಣದ ಹಂಗಿಲ್ಲದೆ ರೈಲಿನ ಹಳಿ ಮೇಲೆ ಹಾರಿ, ಬಾಲಕನನ್ನು ಹಳಿಯಿಂದ ದೂರ ತಳ್ಳಿದರು. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕನ ಪ್ರಾಣ ಉಳಿದಿದೆ ಎಂದು ಸಹಾಯಕ ಪೊಲೀಸ್ ಕಮಿಷನರ್ ವಿಜಯ್ ದಾರೆಕರ್ ಹೇಳಿದ್ದಾರೆ. ಪೊಲೀಸರು ಆ ಯುವಕನನ್ನು ಕಲ್ಯಾಣ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Viral Video: ಸೇಬು, ಚಿಕ್ಕು, ಬಾಳೆಹಣ್ಣು ಹಾಕಿ ಟೀ ಮಾಡಿದ ಚಾಯ್​ವಾಲ; ವಿಡಿಯೋ ನೋಡಿ ನೆಟ್ಟಿಗರು ಸುಸ್ತು!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್