AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 2000 ಬಿಯರ್ ಬಾಟಲ್ ರಸ್ತೆಗೆ ಬಿದ್ದು ಪುಡಿಪುಡಿ; ಕ್ಲೀನ್ ಮಾಡಿದ ‘ಹೀರೋಗಳಿಗೆ’ ಧನ್ಯವಾದ ಹೇಳಿದ ಕಂಪನಿ

2ಸಾವಿರ ಬಿಯರ್ ಬಾಟಲ್​ಗಳು ಟ್ರಕ್​ನಿಂದ ರಸ್ತೆಗೆ ಬಿದ್ದು ಪುಡಿಯಾಗಿ ಹೊಳೆಯಂತೆ ಬಿಯರ್ ಹರಿದು ಹೋದ ವಿಡಿಯೋ ವೈರಲ್ ಆಗುತ್ತಿದೆ. ರಸ್ತೆಯನ್ನು ಸ್ವಚ್ಛಗೊಳಿಸಲು ಚಾಲಕನೊಂದಿಗೆ ನೆರವಾದ ಸಾರ್ವಜನಿಕರಿಗೆ ಕಂಪನಿಯು ಧನ್ಯವಾದಗಳನ್ನು ತಿಳಿಸಿದೆ.

Viral Video: 2000 ಬಿಯರ್ ಬಾಟಲ್ ರಸ್ತೆಗೆ ಬಿದ್ದು ಪುಡಿಪುಡಿ; ಕ್ಲೀನ್ ಮಾಡಿದ 'ಹೀರೋಗಳಿಗೆ' ಧನ್ಯವಾದ ಹೇಳಿದ ಕಂಪನಿ
ರಸ್ತೆಗೆ ಬಿದ್ದ ಬಿಯರ್ ಬಾಟಲ್​ಗಳು
TV9 Web
| Updated By: Rakesh Nayak Manchi|

Updated on:Jul 16, 2022 | 7:38 AM

Share

ವೈರಲ್ ವಿಡಿಯೋ: ಚಾಲಕನು ಟ್ರಕ್ ಅನ್ನು ತಿರುಗಿಸುವಾಗ ಬರೋಬ್ಬರಿ 2ಸಾವಿರ ಬಿಯರ್ (Beer) ಬಾಟಲ್​ಗಳು ರಸ್ತೆಗೆ ಬಿದ್ದು ಪುಡಿಪುಡಿಯಾದ ಘಟನೆಯ ವಿಡಿಯೋ ವೈರಲ್ (Viral Video) ಆಗುತ್ತಿದೆ. ಈ ನಡುವೆ ರಸ್ತೆಯನ್ನು ಸ್ವಚ್ಛಗೊಳಿಸಿದ ಸಾರ್ವಜನಿಕರಿಗೆ ಬಿಯರ್ ಕಂಪನಿಯು ಹೇಳಿದ ಧನ್ಯವಾದದ ಪೋಸ್ಟ್ ಕೂಡ ಟ್ರೆಂಡಿಂಗ್ (Trending) ಪಡೆದುಕೊಂಡಿದೆ. ಅಷ್ಟಕ್ಕೂ ಈ ಘಟನೆ ದಕ್ಷಿಣ ಕೊರಿಯಾದಲ್ಲಿ ಜೂನ್ 29 ರಂದು ನಡೆದಿದೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ತಿರುವು ರಸ್ತೆಯಲ್ಲಿ ಹೋಗುವಾಗ ಟ್ರಕ್​ನಲ್ಲಿದ್ದ ಬಾಟಲ್​ಗಳ ಬಾಕ್ಸ್​ಗಳು ರಸ್ತೆಗೆ ಬಿದ್ದು ಪುಡಿಯಾಗಿದ್ದು, ಸಂಪೂರ್ಣ ಬಿಯರ್ ರಸ್ತೆಯಲ್ಲಿ ಕೊಚ್ಚಿಹೋಗಿದೆ. ನಂತರ ಟ್ರಕ್ ಚಾಲಕನು ರಸ್ತೆಯನ್ನು ಸ್ವಚ್ಛಗೊಳಿಸಲು ಮುಂದಾಗಿದ್ದು, ಈ ವೇಳೆ ಸಾರ್ವಜನಿಕರು ಕೂಡ ಚಾಲಕನೊಂದಿಗೆ ಸೇರಿ ಕೇವಲ ಅರ್ಧಗಂಟೆಯಲ್ಲಿ ರಸ್ತೆಯನ್ನು ಸ್ವಚ್ಛಗೊಳಿಸುವಲ್ಲಿ ನೆರವಾಗಿದ್ದಾರೆ. ಅದರಂತೆ ವಾಹನಗಳ ಸುಗಮ ಸಂಚಾರಕ್ಕೂ ಕಾರಣವಾಯಿತು. ಈ ದೃಶ್ಯಾವಳಿ ಬಿಯರ್ ಕಂಪನಿಯ ಹೃದಯಗೆದ್ದಿದ್ದು, ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿ “ನಾವು ಚುಂಚಿಯಾನ್​ನಲ್ಲಿ ನಿಜವಾದ ಹೀರೋಗಳನ್ನು ಹುಡುಕುತ್ತಿದ್ದೇವೆ” ಎಂದಿದೆ.

“ನಿಜವಾದ ಪ್ರಭಾವ ಬೀರಿದ ನಾಗರಿಕರೇ, ನಾವು ನಿಮಗೆ ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ಚಾಲಕನನ್ನು ವಜಾಗೊಳಿಸದೆ ಅಥವಾ ಅವರ ವಿರುದ್ಧ ಯಾವುದೇ ಶಿಸ್ತಿನ ಕ್ರಮಕೈಗೊಳ್ಳದೆ ಅಪಘಾತವನ್ನು ವಿಮೆಯಿಂದ ಮುಚ್ಚಲಾಗಿದೆ” ಎಂದು ಕಂಪನಿ ಹೇಳಿಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಕಾಣಿಸಿಕೊಂಡಾಗಿನಿಂದ ಕೊರಿಯಾದ ಜನರನ್ನು ನೆಟಿಜನ್‌ಗಳು ಶ್ಲಾಘಿಸಿದ್ದಾರೆ.

ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿ, “ಕೊರಿಯಾವು ಭೂಮಿಯ ಮೇಲಿನ ಸ್ವಚ್ಛ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲಿನ ಜನರು ತಮ್ಮ ರಾಷ್ಟ್ರದ ಮೇಲೆ ಪ್ರೀತಿ ಮತ್ತು ಭಕ್ತಿಯನ್ನು ಹೊಂದಿದ್ದಾರೆ. ಇದು ಅದ್ಭುತವಾಗಿದೆ” ಎಂದು ಹೇಳಿದ್ದಾರೆ.

Published On - 7:38 am, Sat, 16 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ