AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿದ ಮೂವರು ಆಪ್ತ ಸ್ನೇಹಿತರು! ಹೃದಯಸ್ಪರ್ಶಿ ವಿಡಿಯೊ ನೋಡಿ

Viral Video: ಮೂವರು ಸ್ನೇಹಿತರು ಸೇರಿ, ಬೆಂಕಿಯ ಉರಿ ಮತ್ತು ಹೊಗೆಯಿಂದ ಉಸಿರುಗಟ್ಟುವ ಜಾಗದಲ್ಲಿ ನಿಂತಿದ್ದ ವಯಸ್ಕರನ್ನು ರಕ್ಷಿಸಲು ಮುಂದಾಗಿದ್ದಾರೆ. ಕಟ್ಟಡವನ್ನೇರಿ ಬಾಲ್ಕನಿಯಲ್ಲಿ ನಿಂತಿದ್ದ ವಯಸ್ಕರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿದ ಮೂವರು ಆಪ್ತ ಸ್ನೇಹಿತರು! ಹೃದಯಸ್ಪರ್ಶಿ ವಿಡಿಯೊ ನೋಡಿ
ಮೂವರು ಆಪ್ತ ಸ್ನೇಹಿತರು ಸೇರಿ ಬೆಂಕಿ ತಗುಲಿದ್ದ ಕಟ್ಟದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿರುವ ದೃಶ್ಯ
TV9 Web
| Updated By: shruti hegde|

Updated on:Oct 05, 2021 | 9:39 AM

Share

ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ಮೂವರು ಆಪ್ತ ಸ್ನೇಹಿತರು ರಕ್ಷಿಸಿದ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆ ಫ್ರಾನ್ಸ್​ನಲ್ಲಿ ನಡೆದಿದ್ದು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಯಾವುದೇ ತರಬೇತಿ ಅಥವಾ ಸುರಕ್ಷತಾ ಉಪಕರಣಗಳ ಸಹಾಯವಿಲ್ಲದೇ ಮೂವರು ಸ್ನೇಹಿತರು ಒಂದಾಗಿ ದೈಹಿಕ ದುರ್ಬಲರಾಗಿದ್ದ ವಯಸ್ಕರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ವರದಿಗಳ ಪ್ರಕಾರ, ಮೂವರು ಪಾರ್ಕ್​ನಲ್ಲಿ ಮಾತನಾಡುತ್ತಾ ಕುಳಿತಿದ್ದಾಗ ದೂರದಲ್ಲಿದ್ದ ಕಟ್ಟಡದ ಮೂರನೇ ಮಹಡಿಯಿಂದ ಬೆಂಕಿಯ ಹೊಗೆ ಬರುತ್ತಿರುವುದು ಕಂಡು ಬಂದಿದೆ. ಜತೆಗೆ ವಯಸ್ಕರು ಬಾಲ್ಕನಿಯಲ್ಲಿ ನಿಂತು ಒದ್ದಾಡುತ್ತಿರುವುದು ಕಂಡು ಬಂದಿದೆ. ಕಿಂಚಿತ್ತೂ ಯೋಚಿಸದೇ ವಯಸ್ಕರನ್ನು ಕಾಪಾಡಿದ ಸ್ನೇಹಿತರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಸ್ವಲ್ಪವೂ ತಡ ಮಾಡದೇ ಬೆಂಕಿಯ ಉರಿ ಮತ್ತು ಹೊಗೆಯಿಂದ ಉಸಿರುಗಟ್ಟುವ ಜಾಗದಲ್ಲಿ ನಿಂತಿದ್ದ ವಯಸ್ಕರನ್ನು ರಕ್ಷಿಸಲು ಮುಂದಾಗಿದ್ದಾರೆ. ಕಟ್ಟಡವನ್ನೇರಿ ಬಾಲ್ಕನಿಯಲ್ಲಿ ನಿಂತಿದ್ದ ವಯಸ್ಕರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ವಯಸ್ಕರೋರ್ವರು ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವುದರಿಂದ ಉಸಿರಾಡಲು ಕಷ್ಟಪಡುತ್ತಿದ್ದರು. ಸ್ಥಳದಿಂದ ಪಾರಾಗಲು ಕಷ್ಟಪಡುತ್ತಿದ್ದರು. ಇದನ್ನು ಗಮನಿಸಿದ ಸ್ನೇಹಿತರು ತಡ ಮಾಡದೇ ವಯಸ್ಕರನ್ನು ರಕ್ಷಿಸಲು ಮುಂದಾಗಿದ್ದಾರೆ. ಧೈರ್ಯದಿಂದ ಮುನ್ನುಗ್ಗಿ ವಯಸ್ಕರನ್ನು ರಕ್ಷಿಸಿದ ಮೂವರು ಸ್ನೇಹಿತರಿಗೆ ಸ್ಥಳೀಯರು ಅಭಿನಂದನೆ ತಿಳಿಸಿದ್ದಾರೆ. ವರದಿಗಳ ಪ್ರಕಾರ ಘಟನೆ 2020 ಏಪ್ರಿಲ್​ನಲ್ಲಿ ನಡೆದಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Published On - 9:31 am, Tue, 5 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ