AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಮಚದಿಂದ ಜೈಲಿನ ಟಾಯ್ಲೆಟ್​ ನೆಲ ಕೊರೆದು ಹಾಲಿವುಡ್​ ಸ್ಟೈಲಲ್ಲಿ ಉಗ್ರರು ಪರಾರಿ!

Trending Video: ಬಂಧಿತರಾಗಿದ್ದ ಉಗ್ರರು ಜೈಲಿನಲ್ಲಿದ್ದ ತಮ್ಮ ಬಾತ್​ ರೂಂನ ನೆಲವನ್ನು ಅಗೆದು, ಗುಪ್ತ ಮಾರ್ಗ ಸಿದ್ದಪಡಿಸಿಕೊಂಡಿದ್ದರು. ಆ ಬಾತ್​ ರೂಂ ಕ್ಲೀನ್ ಮಾಡಲು ಬೇರೆ ಯಾರೂ ಬರುತ್ತಿರಲಿಲ್ಲವಾದ್ದರಿಂದ ಇವರು ಹಲವು ದಿನಗಳಿಂದ ನೆಲವನ್ನು ಅಗೆದಿದ್ದು ಯಾರಿಗೂ ಗೊತ್ತಾಗಿರಲಿಲ್ಲ.

Viral Video: ಚಮಚದಿಂದ ಜೈಲಿನ ಟಾಯ್ಲೆಟ್​ ನೆಲ ಕೊರೆದು ಹಾಲಿವುಡ್​ ಸ್ಟೈಲಲ್ಲಿ ಉಗ್ರರು ಪರಾರಿ!
ಇಸ್ರೇಲ್​ನ ಜೈಲಿನಿಂದ ಉಗ್ರರು ಪರಾರಿ
TV9 Web
| Edited By: |

Updated on: Sep 08, 2021 | 7:37 PM

Share

ಜೆರುಸಲೆಂ: ಬಿಗಿ ಭದ್ರತೆಯಿದ್ದ ಜೈಲಿನಲ್ಲಿದ್ದ 6 ಪ್ಯಾಲೆಸ್ತೀನ್ ಉಗ್ರರು (Palestinian Militants) ಚಮಚಗಳಿಂದಲೇ ಟಾಯ್ಲೆಟ್​ ನೆಲವನ್ನು ಕೊರೆದು ಪರಾರಿಯಾಗಿದ್ದಾರೆ. ಹಾಲಿವುಡ್​ (Hollywood) ಸ್ಟೈಲ್​ನಲ್ಲಿ ಇಸ್ರೇಲ್​ನಲ್ಲಿ ಈ ಘಟನೆ ನಡೆದಿದೆ. ತಮ್ಮ ಸೆಲ್​ನ ನೆಲವನ್ನು ಅಗೆದು ಜೈಲಿನಿಂದ ಪರಾರಿಯಾಗಿರುವ ಕೈದಿಗಳ ವರ್ತನೆಯಿಂದ ಜೈಲಧಿಕಾರಿಗಳು ಶಾಕ್ ಆಗಿದ್ದಾರೆ. ಈ ಕೈದಿಗಳ ಪೈಕಿ ಅಲ್​-ಅಕ್ಸಾ ಬ್ರಿಗೇಡ್ (Al-Aqsa Martyrs’ Brigade) ಉಗ್ರ ಸಂಘಟನೆಯ ಮಾಜಿ ನಾಯಕ ಕೂಡ ಇದ್ದ ಎನ್ನಲಾಗಿದೆ.

ಬಂಧಿತರಾಗಿದ್ದ ಉಗ್ರರು ಜೈಲಿನಲ್ಲಿದ್ದ ತಮ್ಮ ಬಾತ್​ ರೂಂನ ನೆಲವನ್ನು ಅಗೆದು, ಗುಪ್ತ ಮಾರ್ಗ ಸಿದ್ದಪಡಿಸಿಕೊಂಡಿದ್ದರು. ಆ ಬಾತ್​ ರೂಂ ಕ್ಲೀನ್ ಮಾಡಲು ಬೇರೆ ಯಾರೂ ಬರುತ್ತಿರಲಿಲ್ಲವಾದ್ದರಿಂದ ಇವರು ಹಲವು ದಿನಗಳಿಂದ ನೆಲವನ್ನು ಅಗೆದಿದ್ದು ಯಾರಿಗೂ ಗೊತ್ತಾಗಿರಲಿಲ್ಲ. ತಮ್ಮ ಬಳಿಯಿದ್ದ ಚಮಚ, ಲೋಟಗಳನ್ನೇ ಬಳಸಿ ಹೊಂಡ ತೋಡಿ ಉಗ್ರರು ಪರಾರಿಯಾಗಿದ್ದಾರೆ.

ಬಾತ್​ ರೂಂನಿಂದ ಕೆಳಗೆ ಜೈಲಿನಿಂದ ಹೊರಗೆ ಸಂಪರ್ಕ ಕಲ್ಪಿಸುವ ಗೋಡೆಯಾಚೆ ಸಣ್ಣದಾದ ಕಂದಕ ಕೊರೆದ ಉಗ್ರರು ಅದರ ಮೂಲಕ ಜೈಲಿನಿಂದ ಹೊರಗೆ ಹೋಗಿದ್ದಾರೆ. ಉಗ್ರರು ಮಾಡಿರುವ ಈ ಕೃತ್ಯದ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಜೈಲಿನ ಪಕ್ಕದ ತೋಟದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಿ ಹೋಗುತ್ತಿದ್ದುದನ್ನು ನೋಡಿದ ರೈತರು ಜೈಲಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗ ಪರಿಶೀಲನೆ ಮಾಡಿದಾಗ 6 ಉಗ್ರರಿದ್ದ ಸೆಲ್​ ಖಾಲಿಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: Viral Video: ಹೋಟೆಲ್ ರೂಮಿನಲ್ಲಿ ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡ; ಎಲ್ಲರೆದುರೇ ಗ್ರಹಚಾರ ಬಿಡಿಸಿದ ಹೆಂಡತಿ

Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

(Viral Video 6 Prisoners Dig Hole in Toilet Floor With Spoon Escape from High Security Israel Jail)

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್