Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಮಚದಿಂದ ಜೈಲಿನ ಟಾಯ್ಲೆಟ್​ ನೆಲ ಕೊರೆದು ಹಾಲಿವುಡ್​ ಸ್ಟೈಲಲ್ಲಿ ಉಗ್ರರು ಪರಾರಿ!

Trending Video: ಬಂಧಿತರಾಗಿದ್ದ ಉಗ್ರರು ಜೈಲಿನಲ್ಲಿದ್ದ ತಮ್ಮ ಬಾತ್​ ರೂಂನ ನೆಲವನ್ನು ಅಗೆದು, ಗುಪ್ತ ಮಾರ್ಗ ಸಿದ್ದಪಡಿಸಿಕೊಂಡಿದ್ದರು. ಆ ಬಾತ್​ ರೂಂ ಕ್ಲೀನ್ ಮಾಡಲು ಬೇರೆ ಯಾರೂ ಬರುತ್ತಿರಲಿಲ್ಲವಾದ್ದರಿಂದ ಇವರು ಹಲವು ದಿನಗಳಿಂದ ನೆಲವನ್ನು ಅಗೆದಿದ್ದು ಯಾರಿಗೂ ಗೊತ್ತಾಗಿರಲಿಲ್ಲ.

Viral Video: ಚಮಚದಿಂದ ಜೈಲಿನ ಟಾಯ್ಲೆಟ್​ ನೆಲ ಕೊರೆದು ಹಾಲಿವುಡ್​ ಸ್ಟೈಲಲ್ಲಿ ಉಗ್ರರು ಪರಾರಿ!
ಇಸ್ರೇಲ್​ನ ಜೈಲಿನಿಂದ ಉಗ್ರರು ಪರಾರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 08, 2021 | 7:37 PM

ಜೆರುಸಲೆಂ: ಬಿಗಿ ಭದ್ರತೆಯಿದ್ದ ಜೈಲಿನಲ್ಲಿದ್ದ 6 ಪ್ಯಾಲೆಸ್ತೀನ್ ಉಗ್ರರು (Palestinian Militants) ಚಮಚಗಳಿಂದಲೇ ಟಾಯ್ಲೆಟ್​ ನೆಲವನ್ನು ಕೊರೆದು ಪರಾರಿಯಾಗಿದ್ದಾರೆ. ಹಾಲಿವುಡ್​ (Hollywood) ಸ್ಟೈಲ್​ನಲ್ಲಿ ಇಸ್ರೇಲ್​ನಲ್ಲಿ ಈ ಘಟನೆ ನಡೆದಿದೆ. ತಮ್ಮ ಸೆಲ್​ನ ನೆಲವನ್ನು ಅಗೆದು ಜೈಲಿನಿಂದ ಪರಾರಿಯಾಗಿರುವ ಕೈದಿಗಳ ವರ್ತನೆಯಿಂದ ಜೈಲಧಿಕಾರಿಗಳು ಶಾಕ್ ಆಗಿದ್ದಾರೆ. ಈ ಕೈದಿಗಳ ಪೈಕಿ ಅಲ್​-ಅಕ್ಸಾ ಬ್ರಿಗೇಡ್ (Al-Aqsa Martyrs’ Brigade) ಉಗ್ರ ಸಂಘಟನೆಯ ಮಾಜಿ ನಾಯಕ ಕೂಡ ಇದ್ದ ಎನ್ನಲಾಗಿದೆ.

ಬಂಧಿತರಾಗಿದ್ದ ಉಗ್ರರು ಜೈಲಿನಲ್ಲಿದ್ದ ತಮ್ಮ ಬಾತ್​ ರೂಂನ ನೆಲವನ್ನು ಅಗೆದು, ಗುಪ್ತ ಮಾರ್ಗ ಸಿದ್ದಪಡಿಸಿಕೊಂಡಿದ್ದರು. ಆ ಬಾತ್​ ರೂಂ ಕ್ಲೀನ್ ಮಾಡಲು ಬೇರೆ ಯಾರೂ ಬರುತ್ತಿರಲಿಲ್ಲವಾದ್ದರಿಂದ ಇವರು ಹಲವು ದಿನಗಳಿಂದ ನೆಲವನ್ನು ಅಗೆದಿದ್ದು ಯಾರಿಗೂ ಗೊತ್ತಾಗಿರಲಿಲ್ಲ. ತಮ್ಮ ಬಳಿಯಿದ್ದ ಚಮಚ, ಲೋಟಗಳನ್ನೇ ಬಳಸಿ ಹೊಂಡ ತೋಡಿ ಉಗ್ರರು ಪರಾರಿಯಾಗಿದ್ದಾರೆ.

ಬಾತ್​ ರೂಂನಿಂದ ಕೆಳಗೆ ಜೈಲಿನಿಂದ ಹೊರಗೆ ಸಂಪರ್ಕ ಕಲ್ಪಿಸುವ ಗೋಡೆಯಾಚೆ ಸಣ್ಣದಾದ ಕಂದಕ ಕೊರೆದ ಉಗ್ರರು ಅದರ ಮೂಲಕ ಜೈಲಿನಿಂದ ಹೊರಗೆ ಹೋಗಿದ್ದಾರೆ. ಉಗ್ರರು ಮಾಡಿರುವ ಈ ಕೃತ್ಯದ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಜೈಲಿನ ಪಕ್ಕದ ತೋಟದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಿ ಹೋಗುತ್ತಿದ್ದುದನ್ನು ನೋಡಿದ ರೈತರು ಜೈಲಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗ ಪರಿಶೀಲನೆ ಮಾಡಿದಾಗ 6 ಉಗ್ರರಿದ್ದ ಸೆಲ್​ ಖಾಲಿಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: Viral Video: ಹೋಟೆಲ್ ರೂಮಿನಲ್ಲಿ ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡ; ಎಲ್ಲರೆದುರೇ ಗ್ರಹಚಾರ ಬಿಡಿಸಿದ ಹೆಂಡತಿ

Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

(Viral Video 6 Prisoners Dig Hole in Toilet Floor With Spoon Escape from High Security Israel Jail)

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ