AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!

ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!
ಅಪ್ಪನನ್ನು ಗಾಡಿಯಲ್ಲಿ ತಳ್ಳಿಕೊಂಡು ಹೋಗುತ್ತಿರುವ ಬಾಲಕ
Follow us
ಸುಷ್ಮಾ ಚಕ್ರೆ
|

Updated on: Feb 12, 2023 | 12:51 PM

ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಿಂಗ್ರೌಲಿ ಜಿಲ್ಲೆಯಲ್ಲಿ 6 ವರ್ಷದ ಬಾಲಕ ತನ್ನ ರೋಗಪೀಡಿತ ತಂದೆಯನ್ನು ಮರದಿಂದ ಮಾಡಿದ ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಆಸ್ಪತ್ರೆಗೆ ಸಾಗಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಅಪ್ಪನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿರುವ ಬಾಲಕನ ಹೃದಯ ವಿದ್ರಾವಕ ವಿಡಿಯೋವನ್ನು ಮಧ್ಯಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ.

ಶನಿವಾರ ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ. ಸಿಂಗ್ರೌಲಿ ಜಿಲ್ಲೆಯ ಬಲಿಯಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆ ಬಾಲಕ ಹಾಗೂ ಆತನ ತಾಯಿ 1 ಗಂಟೆಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗಾಗಿ ಕಾದಿದ್ದರು. ಆದರೆ ಆ್ಯಂಬುಲೆನ್ಸ್​ ಬರಲು ತಡವಾದ ಕಾರಣ ಆ ಬಾಲಕ ತನ್ನ ತಂದೆಯನ್ನು ಮರದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ. ಆತನಿಗೆ ಆತನ ತಾಯಿಯೂ ಸಹಾಯ ಮಾಡಿದಳು.

ಇದನ್ನೂ ಓದಿ: ಮಧ್ಯಪ್ರದೇಶ: ಗರ್ಭಿಣಿ ಪತ್ನಿಯನ್ನು ತಳ್ಳುವ ಗಾಡಿಯಲ್ಲಿರಿಸಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೊ ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ಟಿ-ಶರ್ಟ್ ಮತ್ತು ನೀಲಿ ಜೀನ್ಸ್​ ಪ್ಯಾಂಟ್ ಧರಿಸಿರುವ 6 ವರ್ಷದ ಬಾಲಕ 3 ಕಿಲೋಮೀಟರ್‌ಗಳಷ್ಟು ದೂರ ತಳ್ಳಿಕೊಂಡು ಹೋಗಿರುವುದನ್ನು ಕಾಣಬಹುದು. ಆ ಗಾಡಿಯ ಇನ್ನೊಂದು ತುದಿಯನ್ನು ಆತನ ತಾಯಿ ತಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಸಿಂಗ್ರೌಲಿ ಜಿಲ್ಲಾಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶನಿವಾರ ಸಂಜೆಯ ನಂತರ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ