AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!

ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!
ಅಪ್ಪನನ್ನು ಗಾಡಿಯಲ್ಲಿ ತಳ್ಳಿಕೊಂಡು ಹೋಗುತ್ತಿರುವ ಬಾಲಕ
ಸುಷ್ಮಾ ಚಕ್ರೆ
|

Updated on: Feb 12, 2023 | 12:51 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಿಂಗ್ರೌಲಿ ಜಿಲ್ಲೆಯಲ್ಲಿ 6 ವರ್ಷದ ಬಾಲಕ ತನ್ನ ರೋಗಪೀಡಿತ ತಂದೆಯನ್ನು ಮರದಿಂದ ಮಾಡಿದ ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಆಸ್ಪತ್ರೆಗೆ ಸಾಗಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಅಪ್ಪನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿರುವ ಬಾಲಕನ ಹೃದಯ ವಿದ್ರಾವಕ ವಿಡಿಯೋವನ್ನು ಮಧ್ಯಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ.

ಶನಿವಾರ ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ. ಸಿಂಗ್ರೌಲಿ ಜಿಲ್ಲೆಯ ಬಲಿಯಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆ ಬಾಲಕ ಹಾಗೂ ಆತನ ತಾಯಿ 1 ಗಂಟೆಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗಾಗಿ ಕಾದಿದ್ದರು. ಆದರೆ ಆ್ಯಂಬುಲೆನ್ಸ್​ ಬರಲು ತಡವಾದ ಕಾರಣ ಆ ಬಾಲಕ ತನ್ನ ತಂದೆಯನ್ನು ಮರದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ. ಆತನಿಗೆ ಆತನ ತಾಯಿಯೂ ಸಹಾಯ ಮಾಡಿದಳು.

ಇದನ್ನೂ ಓದಿ: ಮಧ್ಯಪ್ರದೇಶ: ಗರ್ಭಿಣಿ ಪತ್ನಿಯನ್ನು ತಳ್ಳುವ ಗಾಡಿಯಲ್ಲಿರಿಸಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೊ ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ಟಿ-ಶರ್ಟ್ ಮತ್ತು ನೀಲಿ ಜೀನ್ಸ್​ ಪ್ಯಾಂಟ್ ಧರಿಸಿರುವ 6 ವರ್ಷದ ಬಾಲಕ 3 ಕಿಲೋಮೀಟರ್‌ಗಳಷ್ಟು ದೂರ ತಳ್ಳಿಕೊಂಡು ಹೋಗಿರುವುದನ್ನು ಕಾಣಬಹುದು. ಆ ಗಾಡಿಯ ಇನ್ನೊಂದು ತುದಿಯನ್ನು ಆತನ ತಾಯಿ ತಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಸಿಂಗ್ರೌಲಿ ಜಿಲ್ಲಾಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶನಿವಾರ ಸಂಜೆಯ ನಂತರ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!