AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!

ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!
ಅಪ್ಪನನ್ನು ಗಾಡಿಯಲ್ಲಿ ತಳ್ಳಿಕೊಂಡು ಹೋಗುತ್ತಿರುವ ಬಾಲಕ
ಸುಷ್ಮಾ ಚಕ್ರೆ
|

Updated on: Feb 12, 2023 | 12:51 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಿಂಗ್ರೌಲಿ ಜಿಲ್ಲೆಯಲ್ಲಿ 6 ವರ್ಷದ ಬಾಲಕ ತನ್ನ ರೋಗಪೀಡಿತ ತಂದೆಯನ್ನು ಮರದಿಂದ ಮಾಡಿದ ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಆಸ್ಪತ್ರೆಗೆ ಸಾಗಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಅಪ್ಪನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿರುವ ಬಾಲಕನ ಹೃದಯ ವಿದ್ರಾವಕ ವಿಡಿಯೋವನ್ನು ಮಧ್ಯಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ.

ಶನಿವಾರ ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ. ಸಿಂಗ್ರೌಲಿ ಜಿಲ್ಲೆಯ ಬಲಿಯಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆ ಬಾಲಕ ಹಾಗೂ ಆತನ ತಾಯಿ 1 ಗಂಟೆಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗಾಗಿ ಕಾದಿದ್ದರು. ಆದರೆ ಆ್ಯಂಬುಲೆನ್ಸ್​ ಬರಲು ತಡವಾದ ಕಾರಣ ಆ ಬಾಲಕ ತನ್ನ ತಂದೆಯನ್ನು ಮರದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ. ಆತನಿಗೆ ಆತನ ತಾಯಿಯೂ ಸಹಾಯ ಮಾಡಿದಳು.

ಇದನ್ನೂ ಓದಿ: ಮಧ್ಯಪ್ರದೇಶ: ಗರ್ಭಿಣಿ ಪತ್ನಿಯನ್ನು ತಳ್ಳುವ ಗಾಡಿಯಲ್ಲಿರಿಸಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೊ ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ಟಿ-ಶರ್ಟ್ ಮತ್ತು ನೀಲಿ ಜೀನ್ಸ್​ ಪ್ಯಾಂಟ್ ಧರಿಸಿರುವ 6 ವರ್ಷದ ಬಾಲಕ 3 ಕಿಲೋಮೀಟರ್‌ಗಳಷ್ಟು ದೂರ ತಳ್ಳಿಕೊಂಡು ಹೋಗಿರುವುದನ್ನು ಕಾಣಬಹುದು. ಆ ಗಾಡಿಯ ಇನ್ನೊಂದು ತುದಿಯನ್ನು ಆತನ ತಾಯಿ ತಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಸಿಂಗ್ರೌಲಿ ಜಿಲ್ಲಾಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶನಿವಾರ ಸಂಜೆಯ ನಂತರ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ