AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!

ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ.

Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!
ಅಪ್ಪನನ್ನು ಗಾಡಿಯಲ್ಲಿ ತಳ್ಳಿಕೊಂಡು ಹೋಗುತ್ತಿರುವ ಬಾಲಕ
ಸುಷ್ಮಾ ಚಕ್ರೆ
|

Updated on: Feb 12, 2023 | 12:51 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಿಂಗ್ರೌಲಿ ಜಿಲ್ಲೆಯಲ್ಲಿ 6 ವರ್ಷದ ಬಾಲಕ ತನ್ನ ರೋಗಪೀಡಿತ ತಂದೆಯನ್ನು ಮರದಿಂದ ಮಾಡಿದ ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಆಸ್ಪತ್ರೆಗೆ ಸಾಗಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಅಪ್ಪನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿರುವ ಬಾಲಕನ ಹೃದಯ ವಿದ್ರಾವಕ ವಿಡಿಯೋವನ್ನು ಮಧ್ಯಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ.

ಶನಿವಾರ ಕೆಲವು ಸ್ಥಳೀಯರು ಬಾಲಕ ತನ್ನ ತಾಯಿಯೊಂದಿಗೆ ಅಪ್ಪನನ್ನು ಮಲಗಿಸಿದ ಮರದ ಗಾಡಿಯನ್ನು ತಳ್ಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಇದಾದ ನಂತರ ಈ ವಿಷಯ ಬಯಲಿಗೆ ಬಂದಿದೆ. ಸಿಂಗ್ರೌಲಿ ಜಿಲ್ಲೆಯ ಬಲಿಯಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆ ಬಾಲಕ ಹಾಗೂ ಆತನ ತಾಯಿ 1 ಗಂಟೆಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗಾಗಿ ಕಾದಿದ್ದರು. ಆದರೆ ಆ್ಯಂಬುಲೆನ್ಸ್​ ಬರಲು ತಡವಾದ ಕಾರಣ ಆ ಬಾಲಕ ತನ್ನ ತಂದೆಯನ್ನು ಮರದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ. ಆತನಿಗೆ ಆತನ ತಾಯಿಯೂ ಸಹಾಯ ಮಾಡಿದಳು.

ಇದನ್ನೂ ಓದಿ: ಮಧ್ಯಪ್ರದೇಶ: ಗರ್ಭಿಣಿ ಪತ್ನಿಯನ್ನು ತಳ್ಳುವ ಗಾಡಿಯಲ್ಲಿರಿಸಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೊ ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ಟಿ-ಶರ್ಟ್ ಮತ್ತು ನೀಲಿ ಜೀನ್ಸ್​ ಪ್ಯಾಂಟ್ ಧರಿಸಿರುವ 6 ವರ್ಷದ ಬಾಲಕ 3 ಕಿಲೋಮೀಟರ್‌ಗಳಷ್ಟು ದೂರ ತಳ್ಳಿಕೊಂಡು ಹೋಗಿರುವುದನ್ನು ಕಾಣಬಹುದು. ಆ ಗಾಡಿಯ ಇನ್ನೊಂದು ತುದಿಯನ್ನು ಆತನ ತಾಯಿ ತಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಸಿಂಗ್ರೌಲಿ ಜಿಲ್ಲಾಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಶನಿವಾರ ಸಂಜೆಯ ನಂತರ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು