AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 20 ನಿಮಿಷಗಳ ಕಾಲ ಲಿಫ್ಟ್ ನಲ್ಲಿ ಸಿಲುಕಿ ಬಾಲಕಿ ಚಡಪಡಿಕೆ; ವಿಡಿಯೋ ವೈರಲ್​​​

ವಿಡಿಯೋದಲ್ಲಿ ಪುಟ್ಟ ಹುಡುಗಿ ಲಿಫ್ಟ್‌ನ ಬಾಗಿಲುಗಳನ್ನು ಬಡಿಯುವುದನ್ನು ಮತ್ತು ಒದೆಯುವುದನ್ನು ಕಾಣಬಹುದು. ಯಾರಾದರೂ ಬಾಗಿಲು ತೆರೆದು ತನ್ನನ್ನು ಹೊರಗೆ ಕರೆದೊಯ್ಯುವಂತೆ ಜೋರಾಗಿ ಕೂಗುತ್ತಿರುವುದು ಮತ್ತು ಸ್ವಲ್ಪ ಸಮಯದ ನಂತರ ಹುಡುಗಿ ಹೆದರಿ ಅಳುತ್ತಿರುವುದನ್ನು ಕಾಣಬಹುದು. ಮುಂದೇನಾಯಿತು? ಮತ್ತಷ್ಟು ವಿವರ ಇಲ್ಲಿದೆ.

Viral Video: 20 ನಿಮಿಷಗಳ ಕಾಲ  ಲಿಫ್ಟ್ ನಲ್ಲಿ ಸಿಲುಕಿ ಬಾಲಕಿ ಚಡಪಡಿಕೆ; ವಿಡಿಯೋ ವೈರಲ್​​​
Viral VideoImage Credit source: Twitter
ಅಕ್ಷತಾ ವರ್ಕಾಡಿ
|

Updated on: Oct 05, 2023 | 10:57 AM

Share

ಉತ್ತರ ಪ್ರದೇಶ: ಇತ್ತೀಚಿನ ದಿನಗಳಲ್ಲಿ ಅಪಾರ್ಟ್ ಮೆಂಟ್ ಗಳಲ್ಲಿ ಜೀವನ ನಡೆಸುವುದರಿಂದ ಹತ್ತಾರು ಅಂತಸ್ತುಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಲು ಕಷ್ಟವಾಗುವುದರಿಂದ ಲಿಫ್ಟ್‌ ಬಳಸುವುದು ಅನಿವಾರ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ಲಿಫ್ಟ್‌ನ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಕೆಲವು ಗಂಟೆಗಳ ವರೆಗೆ ಲಿಫ್ಟ್ ನಲ್ಲಿ ಸಿಲುಕಿ ತೊಂದರೆ ಅನುಭವಿಸಬೇಕಾಗುತ್ತದೆ. ಇಂತದ್ದೇ ಘಟನೆಯೊಂದು ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ತಾಂತ್ರಿಕದೋಷದಿಂದಾಗಿ 20 ನಿಮಿಷಗಳ ಕಾಲ ಪುಟ್ಟ ಬಾಲಕಿ ಲಿಫ್ಟ್ ನಲ್ಲಿ ಸಿಲುಕಿ ಚಡಪಡಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗಾ ಎಲ್ಲೆಡೆ ವೈರಲ್​​ ಆಗಿದೆ.

ಈ ಘಟನೆ ಉತ್ತರ ಪ್ರದೇಶದ ಲಕ್ನೋದ ಕುರ್ಸಿ ಜ್ಞಾನೇಶ್ವರ್ ಎನ್‌ಕ್ಲೇವ್​​​ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ್ದು, ವಿಡಿಯೋದಲ್ಲಿ ಪುಟ್ಟ ಹುಡುಗಿ ಲಿಫ್ಟ್‌ನ ಬಾಗಿಲುಗಳನ್ನು ಬಡಿಯುವುದನ್ನು ಮತ್ತು ಒದೆಯುವುದನ್ನು ಕಾಣಬಹುದು. ಯಾರಾದರೂ ಬಾಗಿಲು ತೆರೆದು ತನ್ನನ್ನು ಹೊರಗೆ ಕರೆದೊಯ್ಯುವಂತೆ ಜೋರಾಗಿ ಕೂಗುತ್ತಿರುವುದು ಮತ್ತು ಸ್ವಲ್ಪ ಸಮಯದ ನಂತರ ಹುಡುಗಿ ಹೆದರಿ ಅಳುತ್ತಿರುವುದನ್ನು ಕಾಣಬಹುದು. ಮತ್ತೆ ಮತ್ತೆ ಬಾಗಿಲು ತೆರೆಯಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುಂಬೈ; ಶಿವಾಜಿಪಾರ್ಕ್​ ಈಜುಗೊಳದಲ್ಲಿ ಮರಿಮೊಸಳೆ ಪತ್ತೆ; ಕಡಿತಕ್ಕೆ ಒಳಗಾದ ಸಿಬ್ಬಂದಿ

ಸುಮಾರು 20 ನಿಮಿಷಗಳ ಕಾಲ, ಪುಟ್ಟ ಹುಡುಗಿ ಲಿಫ್ಟ್‌ನಲ್ಲಿ ನರಕಯಾತನೆ ಅನುಭವಿಸಿ, ಬಳಿಕ ಲಿಫ್ಟ್ ಬಾಗಿಲು ತೆರೆದು ಸುರಕ್ಷಿತವಾಗಿ ಹೊರಬಂದಿರುವುದು ತಿಳಿದುಬಂದಿದೆ. ಮಗುವನ್ನು ಲಿಫ್ಟ್‌ನಲ್ಲಿ ಒಬ್ಬಂಟಿಯಾಗಿ ಯಾಕೆ ಬಿಟ್ಟಿರಿ, ಪೋಷಕರ ನಿರ್ಲಕ್ಷ್ಯವಿದು ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ಲಿಫ್ಟ್‌ನ ಸರಿಯಾದ ನಿರ್ವಹಣೆ ಇಲ್ಲದಿರುವುದಕ್ಕೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಮತ್ತೊಬ್ಬರು ಕಾಮೆಂಟ್​​​ನಲ್ಲಿ  ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್