AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್
ಸೇತುವೆಯಿಂದ ಹಾರಿದ ಅಜ್ಜಿಯ ವಿಡಿಯೋ ವೈರಲ್Image Credit source: India.com
TV9 Web
| Edited By: |

Updated on:Jun 29, 2022 | 1:06 PM

Share

ಹರಿದ್ವಾರ: ಏನಾದರೂ ಸಾಧಿಸಬೇಕು ಎಂಬ ಹಠವಿದ್ದರೆ ಅದಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬ ಮಾತಿದೆ. 70 ವರ್ಷದ ವೃದ್ಧೆಯೊಬ್ಬರು ತಮ್ಮ ಧೈರ್ಯದಿಂದ ನೆಟ್ಟಿಗರ ಗಮನ ಸೆಳೆದಿದ್ದಾರೆ. ವಯಸ್ಸಾದ ಮೇಲೆ ಎಲ್ಲರಿಗೂ ತೀರ್ಥಯಾತ್ರೆಗೆ ಹೋಗಬೇಕೆಂಬ ಆಸೆ ಸಹಜ. ಆದರೆ, ಸಾಹಸ ಕ್ರೀಡೆಗಳಲ್ಲಿ ಅಪಾರವಾದ ಆಸಕ್ತಿ ಹೊಂದಿದ್ದ ಈ 70 ವರ್ಷದ ಅಜ್ಜಿ ಹರಿದ್ವಾರದ (Haridwar) ಎತ್ತರದ ಸೇತುವೆಯಿಂದ ಗಂಗಾನದಿಗೆ ಹಾರಿ, ಅಲ್ಲಿನ ಪವಿತ್ರ ನೀರಿನಲ್ಲಿ ಸ್ನಾನ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಈ ವೃದ್ಧೆ ಗಂಗಾ ನದಿಗೆ ಹಾರುವ ಮೊದಲು ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿರುವ ಸೇತುವೆಯಿಂದ ಮುಂದೆ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ನದಿಗೆ ಹಾರುವಾಗ ಸುತ್ತಲೂ ಇದ್ದ ನೋಡುಗರು ಆ ಅಜ್ಜಿಯನ್ನು ಹುರಿದುಂಬಿಸುತ್ತಾರೆ. ಆಗ ಸೇತುವೆಯಿಂದ ಹಾರಿದ ಅಜ್ಜಿ ತುಂಬಿ ಹರಿಯುತ್ತಿದ್ದ ಗಂಗಾ ನದಿಯ ಪ್ರವಾಹದ ಉದ್ದಕ್ಕೂ ಈಜುತ್ತಾ, ತನ್ನ ಪವಿತ್ರ ಸ್ನಾನವನ್ನು ಆನಂದಿಸುತ್ತಾರೆ.

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

ಅನೇಕರು ಅವಳ ಆತ್ಮವನ್ನು ಶ್ಲಾಘಿಸಿದ್ದಾರೆ. ಈ ವಯಸ್ಸಿನಲ್ಲೂ ಹೆದರದೆ ಅಷ್ಟು ಎತ್ತರದಿಂದ ಜಿಗಿದ ಅಜ್ಜಿಯ ಹಠಕ್ಕೆ ಅನೇಕರು ಅಭಿನಂದಿಸಿದ್ದಾರೆ.

Published On - 1:05 pm, Wed, 29 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ