AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್
ಸೇತುವೆಯಿಂದ ಹಾರಿದ ಅಜ್ಜಿಯ ವಿಡಿಯೋ ವೈರಲ್Image Credit source: India.com
TV9 Web
| Edited By: |

Updated on:Jun 29, 2022 | 1:06 PM

Share

ಹರಿದ್ವಾರ: ಏನಾದರೂ ಸಾಧಿಸಬೇಕು ಎಂಬ ಹಠವಿದ್ದರೆ ಅದಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬ ಮಾತಿದೆ. 70 ವರ್ಷದ ವೃದ್ಧೆಯೊಬ್ಬರು ತಮ್ಮ ಧೈರ್ಯದಿಂದ ನೆಟ್ಟಿಗರ ಗಮನ ಸೆಳೆದಿದ್ದಾರೆ. ವಯಸ್ಸಾದ ಮೇಲೆ ಎಲ್ಲರಿಗೂ ತೀರ್ಥಯಾತ್ರೆಗೆ ಹೋಗಬೇಕೆಂಬ ಆಸೆ ಸಹಜ. ಆದರೆ, ಸಾಹಸ ಕ್ರೀಡೆಗಳಲ್ಲಿ ಅಪಾರವಾದ ಆಸಕ್ತಿ ಹೊಂದಿದ್ದ ಈ 70 ವರ್ಷದ ಅಜ್ಜಿ ಹರಿದ್ವಾರದ (Haridwar) ಎತ್ತರದ ಸೇತುವೆಯಿಂದ ಗಂಗಾನದಿಗೆ ಹಾರಿ, ಅಲ್ಲಿನ ಪವಿತ್ರ ನೀರಿನಲ್ಲಿ ಸ್ನಾನ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಈ ವೃದ್ಧೆ ಗಂಗಾ ನದಿಗೆ ಹಾರುವ ಮೊದಲು ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿರುವ ಸೇತುವೆಯಿಂದ ಮುಂದೆ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ನದಿಗೆ ಹಾರುವಾಗ ಸುತ್ತಲೂ ಇದ್ದ ನೋಡುಗರು ಆ ಅಜ್ಜಿಯನ್ನು ಹುರಿದುಂಬಿಸುತ್ತಾರೆ. ಆಗ ಸೇತುವೆಯಿಂದ ಹಾರಿದ ಅಜ್ಜಿ ತುಂಬಿ ಹರಿಯುತ್ತಿದ್ದ ಗಂಗಾ ನದಿಯ ಪ್ರವಾಹದ ಉದ್ದಕ್ಕೂ ಈಜುತ್ತಾ, ತನ್ನ ಪವಿತ್ರ ಸ್ನಾನವನ್ನು ಆನಂದಿಸುತ್ತಾರೆ.

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

ಅನೇಕರು ಅವಳ ಆತ್ಮವನ್ನು ಶ್ಲಾಘಿಸಿದ್ದಾರೆ. ಈ ವಯಸ್ಸಿನಲ್ಲೂ ಹೆದರದೆ ಅಷ್ಟು ಎತ್ತರದಿಂದ ಜಿಗಿದ ಅಜ್ಜಿಯ ಹಠಕ್ಕೆ ಅನೇಕರು ಅಭಿನಂದಿಸಿದ್ದಾರೆ.

Published On - 1:05 pm, Wed, 29 June 22

Follow Us
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ