AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್
ಸೇತುವೆಯಿಂದ ಹಾರಿದ ಅಜ್ಜಿಯ ವಿಡಿಯೋ ವೈರಲ್Image Credit source: India.com
TV9 Web
| Edited By: |

Updated on:Jun 29, 2022 | 1:06 PM

Share

ಹರಿದ್ವಾರ: ಏನಾದರೂ ಸಾಧಿಸಬೇಕು ಎಂಬ ಹಠವಿದ್ದರೆ ಅದಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬ ಮಾತಿದೆ. 70 ವರ್ಷದ ವೃದ್ಧೆಯೊಬ್ಬರು ತಮ್ಮ ಧೈರ್ಯದಿಂದ ನೆಟ್ಟಿಗರ ಗಮನ ಸೆಳೆದಿದ್ದಾರೆ. ವಯಸ್ಸಾದ ಮೇಲೆ ಎಲ್ಲರಿಗೂ ತೀರ್ಥಯಾತ್ರೆಗೆ ಹೋಗಬೇಕೆಂಬ ಆಸೆ ಸಹಜ. ಆದರೆ, ಸಾಹಸ ಕ್ರೀಡೆಗಳಲ್ಲಿ ಅಪಾರವಾದ ಆಸಕ್ತಿ ಹೊಂದಿದ್ದ ಈ 70 ವರ್ಷದ ಅಜ್ಜಿ ಹರಿದ್ವಾರದ (Haridwar) ಎತ್ತರದ ಸೇತುವೆಯಿಂದ ಗಂಗಾನದಿಗೆ ಹಾರಿ, ಅಲ್ಲಿನ ಪವಿತ್ರ ನೀರಿನಲ್ಲಿ ಸ್ನಾನ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಈ ವೃದ್ಧೆ ಗಂಗಾ ನದಿಗೆ ಹಾರುವ ಮೊದಲು ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿರುವ ಸೇತುವೆಯಿಂದ ಮುಂದೆ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ನದಿಗೆ ಹಾರುವಾಗ ಸುತ್ತಲೂ ಇದ್ದ ನೋಡುಗರು ಆ ಅಜ್ಜಿಯನ್ನು ಹುರಿದುಂಬಿಸುತ್ತಾರೆ. ಆಗ ಸೇತುವೆಯಿಂದ ಹಾರಿದ ಅಜ್ಜಿ ತುಂಬಿ ಹರಿಯುತ್ತಿದ್ದ ಗಂಗಾ ನದಿಯ ಪ್ರವಾಹದ ಉದ್ದಕ್ಕೂ ಈಜುತ್ತಾ, ತನ್ನ ಪವಿತ್ರ ಸ್ನಾನವನ್ನು ಆನಂದಿಸುತ್ತಾರೆ.

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

ಅನೇಕರು ಅವಳ ಆತ್ಮವನ್ನು ಶ್ಲಾಘಿಸಿದ್ದಾರೆ. ಈ ವಯಸ್ಸಿನಲ್ಲೂ ಹೆದರದೆ ಅಷ್ಟು ಎತ್ತರದಿಂದ ಜಿಗಿದ ಅಜ್ಜಿಯ ಹಠಕ್ಕೆ ಅನೇಕರು ಅಭಿನಂದಿಸಿದ್ದಾರೆ.

Published On - 1:05 pm, Wed, 29 June 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್