AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್
ಸೇತುವೆಯಿಂದ ಹಾರಿದ ಅಜ್ಜಿಯ ವಿಡಿಯೋ ವೈರಲ್Image Credit source: India.com
TV9 Web
| Edited By: |

Updated on:Jun 29, 2022 | 1:06 PM

Share

ಹರಿದ್ವಾರ: ಏನಾದರೂ ಸಾಧಿಸಬೇಕು ಎಂಬ ಹಠವಿದ್ದರೆ ಅದಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬ ಮಾತಿದೆ. 70 ವರ್ಷದ ವೃದ್ಧೆಯೊಬ್ಬರು ತಮ್ಮ ಧೈರ್ಯದಿಂದ ನೆಟ್ಟಿಗರ ಗಮನ ಸೆಳೆದಿದ್ದಾರೆ. ವಯಸ್ಸಾದ ಮೇಲೆ ಎಲ್ಲರಿಗೂ ತೀರ್ಥಯಾತ್ರೆಗೆ ಹೋಗಬೇಕೆಂಬ ಆಸೆ ಸಹಜ. ಆದರೆ, ಸಾಹಸ ಕ್ರೀಡೆಗಳಲ್ಲಿ ಅಪಾರವಾದ ಆಸಕ್ತಿ ಹೊಂದಿದ್ದ ಈ 70 ವರ್ಷದ ಅಜ್ಜಿ ಹರಿದ್ವಾರದ (Haridwar) ಎತ್ತರದ ಸೇತುವೆಯಿಂದ ಗಂಗಾನದಿಗೆ ಹಾರಿ, ಅಲ್ಲಿನ ಪವಿತ್ರ ನೀರಿನಲ್ಲಿ ಸ್ನಾನ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಈ ವೃದ್ಧೆ ಗಂಗಾ ನದಿಗೆ ಹಾರುವ ಮೊದಲು ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿರುವ ಸೇತುವೆಯಿಂದ ಮುಂದೆ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ನದಿಗೆ ಹಾರುವಾಗ ಸುತ್ತಲೂ ಇದ್ದ ನೋಡುಗರು ಆ ಅಜ್ಜಿಯನ್ನು ಹುರಿದುಂಬಿಸುತ್ತಾರೆ. ಆಗ ಸೇತುವೆಯಿಂದ ಹಾರಿದ ಅಜ್ಜಿ ತುಂಬಿ ಹರಿಯುತ್ತಿದ್ದ ಗಂಗಾ ನದಿಯ ಪ್ರವಾಹದ ಉದ್ದಕ್ಕೂ ಈಜುತ್ತಾ, ತನ್ನ ಪವಿತ್ರ ಸ್ನಾನವನ್ನು ಆನಂದಿಸುತ್ತಾರೆ.

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

ಅನೇಕರು ಅವಳ ಆತ್ಮವನ್ನು ಶ್ಲಾಘಿಸಿದ್ದಾರೆ. ಈ ವಯಸ್ಸಿನಲ್ಲೂ ಹೆದರದೆ ಅಷ್ಟು ಎತ್ತರದಿಂದ ಜಿಗಿದ ಅಜ್ಜಿಯ ಹಠಕ್ಕೆ ಅನೇಕರು ಅಭಿನಂದಿಸಿದ್ದಾರೆ.

Published On - 1:05 pm, Wed, 29 June 22

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ