Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರವಾಹದ ರಭಸಕ್ಕೆ ಕೊಚ್ಚಿಹೋದ 90 ವರ್ಷಗಳ ಹಳೆಯ ರೈಲು ಸೇತುವೆ

ಪಂಜಾಬ್ ಮತ್ತು ಹಿಮಾಚಲದ ಗಡಿಯಲ್ಲಿರುವ ಕಾಂಗ್ರಾ ಜಿಲ್ಲೆಯಲ್ಲಿ ಚಕ್ಕಿ ನದಿಯ ಮೇಲೆ ಬ್ರಿಟಿಷರು ನಿರ್ಮಿಸಿದ 800 ಮೀಟರ್ ಉದ್ದದ ರೈಲ್ವೆ ಸೇತುವೆ ಶನಿವಾರ ಬೆಳಿಗ್ಗೆ ಕುಸಿದಿದೆ.

Viral Video: ಪ್ರವಾಹದ ರಭಸಕ್ಕೆ ಕೊಚ್ಚಿಹೋದ 90 ವರ್ಷಗಳ ಹಳೆಯ ರೈಲು ಸೇತುವೆ
ಪ್ರವಾಹಕ್ಕೆ ಕೊಚ್ಚಿದ ಹೋದ 90 ವರ್ಷಗಳ ಹಳೇಯ ಚಕ್ಕಿ ರೈಲು ಸೇತುವೆ
Follow us
TV9 Web
| Updated By: Rakesh Nayak Manchi

Updated on:Aug 20, 2022 | 5:28 PM

ದೇಶಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಲವೆಡೆ ಪ್ರವಾಹ ಉಂಟಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದೆ, ಬೆಳೆ, ಆಸ್ತಿ ಪಾಸ್ತಿಗಳಿಗೂ ಹಾನಿಯಾಗಿವೆ. ಅದರಂತೆ ಪಂಜಾಬ್ ಮತ್ತು ಹಿಮಾಚಲದ ಗಡಿಯಲ್ಲಿರುವ ಕಾಂಗ್ರಾ ಜಿಲ್ಲೆಯ ಚಕ್ಕಿ ನದಿಯ ಮೇಲಿನ 800 ಮೀಟರ್ ಉದ್ದದ ರೈಲ್ವೆ ಸೇತುವೆ ಶನಿವಾರ ಬೆಳಿಗ್ಗೆ ಕುಸಿದಿದೆ. ಚಕ್ಕಿ ನದಿಗೆ ಹರಿಯುವ ಪ್ರವಾಹಕ್ಕೆ ಪಿಲ್ಲರ್ ಕೊಚ್ಚಿಹೋಗಿ ಈ ಅವಘಡ ಸಂಭವಿಸಿದೆ ಎಂದು ಸಂಬಂಧಿತ ಮೂಲಗಳು ತಿಳಿಸಿವೆ. ಪರಿಣಾಮವಾಗಿ ಸೇತುವೆಗೆ ಹೊಸ ಪಿಲ್ಲರ್‌ ನಿರ್ಮಾಣವಾಗುವವರೆಗೆ ಪಠಾಣ್‌ಕೋಟ್‌ ಮತ್ತು ಜೋಗಿಂದರ್‌ ನಗರ ನಡುವಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

1928ರಲ್ಲಿ ಬ್ರಿಟಿಷರು ನಿರ್ಮಿಸಿದ ಈ ರೈಲ್ವೇ ಸೇತುವೆಯಲ್ಲಿ ಪಠಾಣ್‌ಕೋಟ್ ಮತ್ತು ಜೋಗಿಂದರ್ ನಗರ್ ನಡುವೆ ಪ್ರತಿದಿನ ಏಳು ರೈಲುಗಳು ಸಂಚರಿಸುತ್ತವೆ. ಪಾಂಗ್ ಅಣೆಕಟ್ಟಿನ ವನ್ಯಜೀವಿ ಅಭಯಾರಣ್ಯದ ನೂರಾರು ಹಳ್ಳಿಗಳಿಗೆ ರಸ್ತೆ ಸಂಪರ್ಕ, ಬಸ್​ಗಳ ಸೇವೆ ಇಲ್ಲದಿರುವ ಹಿನ್ನಲೆ ರೈಲುಗಳು ಇಲ್ಲಿನ ಜೀವನಾಡಿಯಾಗಿದೆ. ಈ ಗ್ರಾಮಗಳ ಜನರು ಕಂಗ್ರಾ ಜಿಲ್ಲಾ ಕೇಂದ್ರಕ್ಕೆ ಹೋಗಲು ರೈಲುಗಳನ್ನು ಅವಲಂಬಿಸಿದ್ದಾರೆ. ನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ 90 ವರ್ಷಗಳಷ್ಟು ಹಳೆಯದಾದ ಈ ಸೇತುವೆಗೆ ಹಾನಿಯಾಗಿದ್ದು, ಸದ್ಯ ಪ್ರವಾದ ರಭಸಕ್ಕೆ ಒಂದು ಪಿಲ್ಲರ್ ಕುಸಿದು ಬಿದ್ದಿದೆ.

ನದಿ ಪಾತ್ರದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ರೈಲ್ವೆ ಅಧಿಕಾರಿಗಳಿಗೆ ಹಲವು ದೂರುಗಳು ಬಂದಿವೆ. ಕಳೆದ ತಿಂಗಳು ಸೇತುವೆ ಪಿಲ್ಲರ್‌ ಬಿರುಕು ಬಿಟ್ಟಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿತ್ತು. ಆದರೆ ಈಗ ಪಿಲ್ಲರ್ ಕೊಚ್ಚಿ ಹೋಗಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Sat, 20 August 22

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ