AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರವಾಹದ ರಭಸಕ್ಕೆ ಕೊಚ್ಚಿಹೋದ 90 ವರ್ಷಗಳ ಹಳೆಯ ರೈಲು ಸೇತುವೆ

ಪಂಜಾಬ್ ಮತ್ತು ಹಿಮಾಚಲದ ಗಡಿಯಲ್ಲಿರುವ ಕಾಂಗ್ರಾ ಜಿಲ್ಲೆಯಲ್ಲಿ ಚಕ್ಕಿ ನದಿಯ ಮೇಲೆ ಬ್ರಿಟಿಷರು ನಿರ್ಮಿಸಿದ 800 ಮೀಟರ್ ಉದ್ದದ ರೈಲ್ವೆ ಸೇತುವೆ ಶನಿವಾರ ಬೆಳಿಗ್ಗೆ ಕುಸಿದಿದೆ.

Viral Video: ಪ್ರವಾಹದ ರಭಸಕ್ಕೆ ಕೊಚ್ಚಿಹೋದ 90 ವರ್ಷಗಳ ಹಳೆಯ ರೈಲು ಸೇತುವೆ
ಪ್ರವಾಹಕ್ಕೆ ಕೊಚ್ಚಿದ ಹೋದ 90 ವರ್ಷಗಳ ಹಳೇಯ ಚಕ್ಕಿ ರೈಲು ಸೇತುವೆ
TV9 Web
| Updated By: Rakesh Nayak Manchi|

Updated on:Aug 20, 2022 | 5:28 PM

Share

ದೇಶಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಲವೆಡೆ ಪ್ರವಾಹ ಉಂಟಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದೆ, ಬೆಳೆ, ಆಸ್ತಿ ಪಾಸ್ತಿಗಳಿಗೂ ಹಾನಿಯಾಗಿವೆ. ಅದರಂತೆ ಪಂಜಾಬ್ ಮತ್ತು ಹಿಮಾಚಲದ ಗಡಿಯಲ್ಲಿರುವ ಕಾಂಗ್ರಾ ಜಿಲ್ಲೆಯ ಚಕ್ಕಿ ನದಿಯ ಮೇಲಿನ 800 ಮೀಟರ್ ಉದ್ದದ ರೈಲ್ವೆ ಸೇತುವೆ ಶನಿವಾರ ಬೆಳಿಗ್ಗೆ ಕುಸಿದಿದೆ. ಚಕ್ಕಿ ನದಿಗೆ ಹರಿಯುವ ಪ್ರವಾಹಕ್ಕೆ ಪಿಲ್ಲರ್ ಕೊಚ್ಚಿಹೋಗಿ ಈ ಅವಘಡ ಸಂಭವಿಸಿದೆ ಎಂದು ಸಂಬಂಧಿತ ಮೂಲಗಳು ತಿಳಿಸಿವೆ. ಪರಿಣಾಮವಾಗಿ ಸೇತುವೆಗೆ ಹೊಸ ಪಿಲ್ಲರ್‌ ನಿರ್ಮಾಣವಾಗುವವರೆಗೆ ಪಠಾಣ್‌ಕೋಟ್‌ ಮತ್ತು ಜೋಗಿಂದರ್‌ ನಗರ ನಡುವಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

1928ರಲ್ಲಿ ಬ್ರಿಟಿಷರು ನಿರ್ಮಿಸಿದ ಈ ರೈಲ್ವೇ ಸೇತುವೆಯಲ್ಲಿ ಪಠಾಣ್‌ಕೋಟ್ ಮತ್ತು ಜೋಗಿಂದರ್ ನಗರ್ ನಡುವೆ ಪ್ರತಿದಿನ ಏಳು ರೈಲುಗಳು ಸಂಚರಿಸುತ್ತವೆ. ಪಾಂಗ್ ಅಣೆಕಟ್ಟಿನ ವನ್ಯಜೀವಿ ಅಭಯಾರಣ್ಯದ ನೂರಾರು ಹಳ್ಳಿಗಳಿಗೆ ರಸ್ತೆ ಸಂಪರ್ಕ, ಬಸ್​ಗಳ ಸೇವೆ ಇಲ್ಲದಿರುವ ಹಿನ್ನಲೆ ರೈಲುಗಳು ಇಲ್ಲಿನ ಜೀವನಾಡಿಯಾಗಿದೆ. ಈ ಗ್ರಾಮಗಳ ಜನರು ಕಂಗ್ರಾ ಜಿಲ್ಲಾ ಕೇಂದ್ರಕ್ಕೆ ಹೋಗಲು ರೈಲುಗಳನ್ನು ಅವಲಂಬಿಸಿದ್ದಾರೆ. ನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ 90 ವರ್ಷಗಳಷ್ಟು ಹಳೆಯದಾದ ಈ ಸೇತುವೆಗೆ ಹಾನಿಯಾಗಿದ್ದು, ಸದ್ಯ ಪ್ರವಾದ ರಭಸಕ್ಕೆ ಒಂದು ಪಿಲ್ಲರ್ ಕುಸಿದು ಬಿದ್ದಿದೆ.

ನದಿ ಪಾತ್ರದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ರೈಲ್ವೆ ಅಧಿಕಾರಿಗಳಿಗೆ ಹಲವು ದೂರುಗಳು ಬಂದಿವೆ. ಕಳೆದ ತಿಂಗಳು ಸೇತುವೆ ಪಿಲ್ಲರ್‌ ಬಿರುಕು ಬಿಟ್ಟಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿತ್ತು. ಆದರೆ ಈಗ ಪಿಲ್ಲರ್ ಕೊಚ್ಚಿ ಹೋಗಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Sat, 20 August 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ