AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಯ್ಯಯ್ಯೋ! 500 ರೂಪಾಯಿ ನೋಟನ್ನು ಎಗರಿಸಿದ ಖತರ್ನಾಕ್ ಕಾಗೆ, ಮುಂದೇನಾಯಿತು?

ಪ್ರಾಣಿ ಪಕ್ಷಿಗಳು ಮಾಡುವ ಕುಚೇಷ್ಟೆಗಳು ಒಂದೆರಡಲ್ಲ. ಇಂತಹ ಹಲವಾರು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುವುದನ್ನು ನೋಡುತ್ತೇವೆ. ಇದೀಗ ಇಂತಹ ವಿಡಿಯೋವೊಂದು ಕಾಗೆಯೊಂದು 500 ರೂಪಾಯಿ ಎಗರಿಸಿ, ಕೊನೆಗೆ ದ್ರಾಕ್ಷಿ ಹಣ್ಣು ಖರೀದಿ ಮಾಡಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

Viral Video : ಅಯ್ಯಯ್ಯೋ! 500 ರೂಪಾಯಿ ನೋಟನ್ನು ಎಗರಿಸಿದ ಖತರ್ನಾಕ್ ಕಾಗೆ, ಮುಂದೇನಾಯಿತು?
ಸಾಯಿನಂದಾ
| Edited By: |

Updated on: Apr 06, 2024 | 6:14 PM

Share

ದಿನಬೆಳಗಾದರೆ ಮನೆಯ ಅಂಗಳದಲ್ಲಿ ಹಾರಾಡುತ್ತಾ ಕಾ ಕಾ ಎಂದು ಕೂಗುವ ಈ ಕಾಗೆಗಳನ್ನು ನೋಡುತ್ತಲೇ ಇದೆ. ತನಗೆ ಏನಾದರೂ ಆಹಾರ ಸಿಕ್ಕರೆ ತನ್ನ ಬಳಗವನ್ನು ಕರೆದು ಒಟ್ಟಿಗೆ ತಿನ್ನುವ ಗುಣ ಕಾಗೆಯದ್ದು. ಏನಾದರೂ ಆಹಾರ ಬಿದ್ದದ್ದು ಕಂಡರೆ ಹಾರಿ ಹೋಗಿ ಕೊಕ್ಕಿನಲ್ಲಿ ಕಚ್ಚಿಕೊಂಡು ಹೋಗಿ ತಿನ್ನುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಕಾಗೆಯು ಮಹಿಳೆಯು ಇಟ್ಟಿದ್ದ 500 ರೂಪಾಯಿಯನ್ನು ಎಗರಿಸಿದೆ. ಕೊನೆಗೆ ಬುದ್ದಿವಂತಿಕೆಯಿಂದ 500 ರೂಪಾಯಿ ಕೊಟ್ಟು ದ್ರಾಕ್ಷಿ ಹಣ್ಣು ಖರೀದಿ ಮಾಡಿದೆ.

ಮಂಗಳೂರಿನ ರಜನಿ ಶೆಟ್ಟಿಯವರು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡ ವಿಡಿಯೋ ಇದಾಗಿದೆ. ಈ ವಿಡಿಯೋಗೆ “ನನ್ನ ಕಾಗೆ ಶಾಪಿಂಗ್ ಹೋಗಲು ರೆಡಿಯಾಗಿದೆ ” ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ. ರಜನಿಶೆಟ್ಟಿಯವರು, ಮರದ ದಿಮ್ಮಿಯ ಮೇಲೆ 500 ರೂಪಾಯಿ ನೋಟನ್ನು ಇಟ್ಟು ಏನೋ ಕೆಲಸ ಮಾಡಲು ಮುಂದಾಗಿದ್ದಾರೆ. ಆದರೆ ಹಾರುತ್ತಾ ಬಂದ ಕಾಗೆಯು ಆ ನೋಟನ್ನು ಕೊಕ್ಕಿನಲ್ಲಿ ಎತ್ತಿಕೊಂಡು ಹಾರಿಹೋಗಿದೆ.

ಇದನ್ನೂ ಓದಿ: ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮುಂದೇನು ಮಾಡಬೇಕೆಂದು ಗೊತ್ತಾಗದೇ 500 ರೂಪಾಯಿಯನ್ನು ಹೇಗಾದರೂ ಮಾಡಿ ಪಡೆಯಬೇಕೆಂದು ಪ್ಲಾನ್ ಮಾಡಿದ್ದಾರೆ. ಆ ಬಳಿಕ ಕಾಗೆಗೆ ಕಲ್ಲಂಗಡಿ ಹಣ್ಣನ್ನು ನೀಡಿದ್ದಾರೆ. ಆದರೆ ಈ ಕಾಗೆ ಮಾತ್ರ ಏನು ಕೊಟ್ಟರೂ 500 ರೂಪಾಯಿ ಬಿಡಲ್ಲ ಎನ್ನುವಂತೆ ಕೂತಿದೆ. ಕೊನೆಗೆ ಕಾಗೆಗೆ ದ್ರಾಕ್ಷಿ ಹಣ್ಣನ್ನು ನೀಡಿದ್ದು, ಕೊಕ್ಕಿನಲ್ಲಿದ್ದ 500 ರೂಪಾಯಿಯನ್ನು ಬಿಟ್ಟು ದ್ರಾಕ್ಷಿಯನ್ನು ತೆಗೆದುಕೊಂಡಿದೆ. 500 ರೂಪಾಯಿ ಸಿಕ್ಕಿತ್ತಲ್ಲ ಎಂದು ರಜನಿ ಶೆಟ್ಟಿಯವರು ಖುಷಿ ಪಟ್ಟಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದು, ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!