AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಯ್ಯೋ.. ಟಿವಿಯಲ್ಲಿ ರೊಮ್ಯಾಂಟಿಕ್ ದೃಶ್ಯ ಕಂಡು ನಾಚಿಕೆಯಿಂದ ಕಣ್ಣು ಮುಚ್ಚಿದ ಶ್ವಾನ

ಸಾಮಾನ್ಯವಾಗಿ ಟಿವಿಯಲ್ಲಿ ಸಿನೆಮಾ ಅಥವಾ ಧಾರಾವಾಹಿ ನೋಡುತ್ತಿರುವಾಗ ಅದ್ರಲ್ಲಿ ರೊಮ್ಯಾಂಟಿಕ್ ದೃಶ್ಯ ಏನಾದ್ರೂ ಬಂದ್ರೆ, ಅದನ್ನು ನೋಡಿದಾಗ ಮನುಷ್ಯರಾದ ನಮಗೆಯೇ ಸ್ವಲ್ವ ಮುಜುಗರ ಮತ್ತು ನಾಚಿಕೆಯಾಗುತ್ತೆ. ಆದರೆ, ಇದರಿಂದ ಪ್ರಾಣಿಗಳು ಕೂಡ ಹೊರತಾಗಿಲ್ಲ ಮುದ್ದಿನ ನಾಯಿಯೇ ಸಾಕ್ಷಿ. ರೊಮ್ಯಾಂಟಿಕ್ ದೃಶ್ಯ ಪ್ರಸಾರವಾಗುತ್ತಿದ್ದಂತೆ ಶ್ವಾನದ ರಿಯಾಕ್ಷನ್ ಹೇಗಿತ್ತು ಎಂಬುದನ್ನು ನೀವೇ ನೋಡಿ.

ಅಯ್ಯಯ್ಯೋ.. ಟಿವಿಯಲ್ಲಿ ರೊಮ್ಯಾಂಟಿಕ್ ದೃಶ್ಯ ಕಂಡು ನಾಚಿಕೆಯಿಂದ ಕಣ್ಣು ಮುಚ್ಚಿದ ಶ್ವಾನ
ಟಿವಿಯಲ್ಲಿ ರೊಮ್ಯಾಂಟಿಕ್ ದೃಶ್ಯ ಕಂಡು ನಾಚಿಕೆಯಿಂದ ಕಣ್ಣು ಮುಚ್ಚಿದ ಶ್ವಾನ
ಮಾಲಾಶ್ರೀ ಅಂಚನ್​
| Edited By: |

Updated on:Jan 15, 2024 | 5:54 PM

Share

ಸಾಮಾನ್ಯವಾಗಿ ಟಿವಿಯಲ್ಲಿ ಸಿನೆಮಾ ಅಥವಾ ಧಾರಾವಾಹಿ ನೋಡುತ್ತಿರುವಾಗ ಅದರಲ್ಲಿ ರೊಮ್ಯಾಂಟಿಕ್ ದೃಶ್ಯ ಬಂದಾಗ ನಮಗೆಯೇ ಸ್ವಲ್ವ ಮುಜುಗರ ಮತ್ತು ನಾಚಿಕೆಯಾಗುತ್ತದೆ ಅಲ್ವಾ. ಅದೇ ರೀತಿ ಇಲ್ಲೊಂದು ಶ್ವಾನಕ್ಕೂ ಕೂಡಾ ರೊಮ್ಯಾಂಟಿಕ್ ದೃಶ್ಯವನ್ನು ನೋಡಿದಾಕ್ಷಣ ಮುಜುಗರವಾಗುತ್ತೆಯಂತೆ. ಇದಕ್ಕೆ ಸಂಬಂಧಿಸಿದ ಫನ್ನಿ ವಿಡಿಯವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ (Viral Video) ಆಗಿದ್ದು, “ಯಾಕ್ರೀ ಮಗುವಿಗೆ ಮುಜುಗರ ಉಂಟು ಮಾಡುತ್ತೀರಾ” ಅಂತ ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಶ್ವಾನಗಳು ಮನುಷ್ಯನ ಉತ್ತಮ ಸ್ನೇಹಿತ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇದೇ ಕಾರಣಕ್ಕೆ ಬಹುತೇಕ ಎಲ್ಲರೂ ಶ್ವಾನಗಳನ್ನು ಸಾಕಲು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಈ ಸಾಕು ನಾಯಿಗಳು ಕೆಲವೊಮ್ಮೆ ನಮ್ಮಂತೆಯೇ ವರ್ತಿಸುತ್ತವೆ. ಟಿ.ವಿಯಲ್ಲಿ ಕಾರ್ಟೂನ್ ನೋಡುವುದಿರಲಿ, ಅಮ್ಮನಿಗೆ ಮನೆ ಕೆಲಸದಲ್ಲಿ ಸಹಾಯ ಮಾಡುವುದಿರಲಿ, ಮಾಲೀಕನೊಂದಿಗೆ ವ್ಯಾಯಾಮ ಮಾಡುವುದಿರಲಿ… ಈ ರೀತಿ ಕೆಲವೊಮ್ಮೆ ಮನುಷ್ಯರಂತೆಯೇ ವರ್ತಿಸುತ್ತವೆ.

ಈ ಕುರಿತ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಅದೇ ರೀತಿ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಸಾಮಾನ್ಯವಾಗಿ ಮನುಷ್ಯರಾದ ನಾವುಗಳೇ ಟಿ.ವಿಯಲ್ಲಿ ರೊಮ್ಯಾಂಟಿಕ್ ದೃಶ್ಯವನ್ನು ನೋಡಿದಾಗ ಸ್ವಲ್ಪ ಮುಜುಗರ ಪಟ್ಟುಕೊಳ್ಳುತ್ತೇವೆ. ಅದೇ ರೀತಿ ಇಲ್ಲೊಂದು ಶ್ವಾನ ಕೂಡಾ ರೊಮ್ಯಾಂಟಿಕ್ ದೃಶ್ಯವನ್ನು ನೋಡಿ, ನಾಚಿ ಕಣ್ಣು ಮುಚ್ಚಿಕೊಂಡಿದೆ. ಈ ಹಾಸ್ಯಮಯ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಈ ವಿಡಿಯೋವನ್ನು ಫೇಸ್ಬುಕ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ಶ್ವಾನವೊಂದು ಟಿವಿಯಲ್ಲಿ ರೊಮ್ಯಾಂಟಿಕ್ ದೃಶ್ಯವನ್ನು ನೋಡಿ, ಮುಜುಗರ ಪಟ್ಟುಕೊಂಡು ಕಣ್ಣು ಮುಚ್ಚಿಕೊಂಡು ಕುಳಿತಿರುವ ತಮಾಷೆಯ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋದಲ್ಲಿ ಹಸ್ಕಿ ನಾಯಿ ಟಿವಿಯಲ್ಲಿ ಯಾವುದೋ ಕೊರಿಯನ್ ಸೀರೀಸ್ ನೋಡುತ್ತಿತ್ತು. ಆ ವೇಳೆಯಲ್ಲಿ ರೋಮ್ಯಾಂಟಿಕ್ ದೃಶ್ಯವೊಂದು ಪ್ಲೇ ಆಗುತ್ತೆ. ಇದನ್ನು ನೋಡಿದ ಶ್ವಾನ ಮುಜುಗರಕ್ಕೊಳಗಾಗಿ ಶಾಂತಂ ಪಾಪಂ.. ಶಾಂತಂ ಪಾಪಂ… ನನ್ನ ಕಣ್ಣಿಂದ ಈ ದೃಶ್ಯವನೆಲ್ಲಾ ನೋಡಲು ಸಾಧ್ಯವಿಲ್ಲ ಎನ್ನುತ್ತಾ ಸ್ವಲ್ಪ ಈ ಕಡೆ ಬಂದು ತನ್ನ ಕಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು ಕುಳಿತುಕೊಳ್ಳುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಕೆಲ ದಿನಗಳ ಹಿಂದೆ ಫೇಸ್ಬುಕ್ ಖಾತೆಯೊಂದರಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 1.2 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 36 ಸಾವಿರಕ್ಕೂ ಅಧಿಕ ಲೈಕ್​ಗಳನ್ನು ಪಡೆದುಕೊಂಡಿದೆ. ಫನ್ನಿ ವಿಡಿಯೋ ನೋಡಿದ ನೆಟ್ಟಿಗರು ಕಮೆಂಟ್ ಬಾಕ್ಸ್​ನಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಒಬ್ಬ ಬಳಕೆದಾರರು “ನಮ್ ಮಗುವಿಗೆ ಯಾಕ್ರಿ ಈ ರೀತಿ ಹಿಂಸೆ ನೀಡ್ತೀರಾ” ಅಂತ ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು “ಅಯ್ಯಯ್ಯೋ ಶ್ವಾನಕ್ಕೆ ಮುಜುಗರ ಆಯಿತೇನೋ” ಎಂದು ಹೇಳಿದ್ದಾರೆ. ಇನ್ನೂ ಕೆಲವರು ಶ್ವಾನ ತುಂಬಾ ಮುದ್ದಾಗಿ ನಟನೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Mon, 15 January 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?