viral video: ಕೊಳದಲ್ಲಿ ಮೊಸಳೆಯನ್ನು ತಬ್ಬಿಕೊಂಡು ಡ್ಯಾನ್ಸ್ ಮಾಡಿದ ಭೂಪ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ಫ್ಲೋರಿಡಾದಲ್ಲಿ ಮಾತ್ರ ನೀವು ಮೊಸಳೆಯೊಂದಿಗೆ ನೃತ್ಯ ಮಾಡುವ ವ್ಯಕ್ತಿಯನ್ನು ನೋಡುತ್ತೀರಿ ಎಂದು ಬರೆಯಲಾಗಿದೆ. ಈ ವಿಡಿಯೋವನ್ನು ಬಿಚ್ ರಿಜೆಕ್ಟ್ ಎಂಬ ಪೇಜ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ.

viral video: ಕೊಳದಲ್ಲಿ ಮೊಸಳೆಯನ್ನು ತಬ್ಬಿಕೊಂಡು ಡ್ಯಾನ್ಸ್ ಮಾಡಿದ ಭೂಪ; ಶಾಕಿಂಗ್ ವಿಡಿಯೋ ವೈರಲ್
ಮೊಸಳೆ ಜೊತೆ ಡ್ಯಾನ್ಸ್ ಮಾಡುತ್ತಿರುವ ಮನುಷ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 31, 2022 | 10:18 AM

ನೀವು ಮತ್ತು ನಾವು ಕಾಡು ಸರೀಸೃಪಗಳನ್ನು ನೋಡಿ ಮಾರು ದೂರ ಹೋಡಿ ಹೋಗುತ್ತೇವೆ. ಆದರೆ ಇಲ್ಲಿ ಒಬ್ಬ ವ್ಯಕ್ತಿ ಮೊಸಳೆ (Crocodile) ಯನ್ನು ತಬ್ಬಿಕೊಂಡು ಕೊಳದಲ್ಲಿ ಡ್ಯಾನ್ಸ್​ ಮಾಡುತ್ತಿರುವಂತಹ ಆಘಾತಕಾರಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಮನುಷ್ಯ ತನ್ನ ಜೀವನವನ್ನು ಮೊಸಳೆ ಜೊತೆ ಕಳೆಯುತ್ತಿದ್ದಾನೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮನುಷ್ಯ ನೀರಿನಲ್ಲಿ ಮೊಸಳೆಯೊಂದಿಗೆ ಡ್ಯಾನ್ಸ್ ಮಾಡುತ್ತ, ಆನಂದಿಸುತ್ತಿರುವುದನ್ನು ಕಾಣಬಹುದಾಗಿದೆ. ವೈರಲ್ ವಿಡಿಯೋದಲ್ಲಿ, ವ್ಯಕ್ತಿ ಸೊಂಟದಾಳದಷ್ಟು ನೀರಿನಲ್ಲಿ ಕೊಳದ ಮಧ್ಯದಲ್ಲಿ ಮೊಸಳೆಯೊಂದದಿಗೆ ತಬ್ಬಿಕೊಂಡು ನೃತ್ಯ ಮಾಡುತ್ತಾನೆ. ಮನುಷ್ಯನು ನಿಜವಾಗಿಯೂ ಅಪಾಯಕಾರಿ ಸರೀಸೃಪಕ್ಕೆ ಹತ್ತಿರವಾಗಿದ್ದೇನೆ ಎಂದು ಹೆದರುವುದಿಲ್ಲ ಮತ್ತು ಮೊಸಳೆ ಕೂಡ ನಿರಾಳವಾಗಿದೆ. ಮೊಸಳೆ ಮನುಷ್ಯನ ಸಹವಾಸದಲ್ಲಿ ಆರಾಮದಾಯಕವಾಗಿದ್ದು, ಆತನಿಗೆ ಯಾವುದೇ ಹಾನಿ ಮಾಡುವುದಿಲ್ಲ.

ಈ ವಿಡಿಯೋ ಫ್ಲೋರಿಡಾದಲ್ಲಿ ಮಾತ್ರ ನೀವು ಮೊಸಳೆಯೊಂದಿಗೆ ನೃತ್ಯ ಮಾಡುವ ವ್ಯಕ್ತಿಯನ್ನು ನೋಡುತ್ತೀರಿ ಎಂದು ಬರೆಯಲಾಗಿದೆ. ಈ ವಿಡಿಯೋವನ್ನು ಬಿಚ್ ರಿಜೆಕ್ಟ್ ಎಂಬ ಪೇಜ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಶೇರ್ ಆದ ಕೆಲವೇ ದಿನಗಳಲ್ಲಿ ವೀಡಿಯೋ 14K ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

ವಿಡಿಯೋ ನೋಡಿದ ನೆಟಿಗರು ಶಾಕ್ ಆಗಿದ್ದು, ಈ ವಿಡಿಯೋ ಅಸಲಿಯೇ ಎಂದು ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲವರು ವಿಡಿಯೋವನ್ನು ನೋಡಿ ಉಲ್ಲಾಸದಾಯಕವಾಗಿದೆ ಎಂದಿದ್ದಾರೆ. ಜೊತೆಗೆ ತಮಾಷೆಯ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು, ನೀವು ಅವಳನ್ನು ಮೊಸಳೆಯೆಂದು ಪ್ರೀತಿಸುತ್ತೀರಾ ಅಥವಾ ಗೆಳತಿಯಾಗಿನಾ? ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರನು ಮದುವೆ ಯಾವಾಗ ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರ ಜಸ್ಟ್ ವಾವ್, ಉತ್ತಮ ಹೊಂದಾಣಿಕೆ ಎಂದು ಬರೆದಿದ್ದಾರೆ.

ಇದನ್ನೂ ಓದಿ;

viral video: ಇದು ಮುಖವಾಡವೋ ಅಥವಾ ಗಡ್ಡವೋ..! ಗೊಂದಕ್ಕೀಡಾದ ಸಭಾಪತಿ ವೆಂಕಯ್ಯ ನಾಯ್ಡು

Viral News: ಪ್ರೀತಿಯ ನಾಯಿಯ ನೆನಪಿನಲ್ಲಿ ಅಮೃತಶಿಲೆಯಿಂದ ದೇವಸ್ಥಾನ ಕಟ್ಟಿದ ವೃದ್ಧ!

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್