AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಂದೊಂದು ಮುಂದೊಂದು ಹುಡುಗಿಯರನ್ನು ಕೂರಿಸಿ ಬೈಕ್​​​ ವೀಲಿಂಗ್ ಮಾಡಿದ ಯುವಕ, ಇಲ್ಲಿದೆ ನೋಡಿ ವಿಡಿಯೋ

ಇಲ್ಲೊಬ್ಬ ಒಂದಲ್ಲ, ಇಬ್ಬರು ಹುಡುಗಿಯರನ್ನು ತನ್ನ ಬೈಕ್​​ನಲ್ಲಿ ಕೂರಿಸಿಕೊಂಡು ವೀಲಿಂಗ್​​ ಮಾಡಿದ್ದಾನೆ. ಇದಲ್ಲದೇ ಈ ಹುಡುಗಿಯರೂ ಕೂಡ ಯಾವುದೇ ಭಯ ಇಲ್ಲದೇ ವಿಡಿಯೋಗೆ ಪೋಸ್​​ ಕೊಡುತ್ತಿರುವುದನ್ನು ಕಾಣಬಹುದು.

Viral Video: ಹಿಂದೊಂದು ಮುಂದೊಂದು ಹುಡುಗಿಯರನ್ನು ಕೂರಿಸಿ ಬೈಕ್​​​ ವೀಲಿಂಗ್ ಮಾಡಿದ ಯುವಕ, ಇಲ್ಲಿದೆ ನೋಡಿ ವಿಡಿಯೋ
ಹುಡುಗಿಯರನ್ನು ಕೂರಿಸಿ ಬೈಕ್​​​ ವೀಲಿಂಗ್Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 01, 2023 | 3:59 PM

Share

ಇತ್ತೀಚಿನ ದಿನಗಳಲ್ಲಿ ಬೈಕ್​​ ವೀಲಿಂಗ್  ಹೆಚ್ಚಾಗಿ ಕಂಡುಬರುತ್ತಿದ್ದು, ತಮ್ಮ ಜೀವದ ಆಸೆಯನ್ನು ತೊರೆದು ಇಂತಹ ಕೆಟ್ಟ ಸಾಹಸಕ್ಕೆ ಇಳಿದು ಪ್ರಾಣ ಕಳೆದುಕೊಂಡ ಅದೆಷ್ಟೋ ಪ್ರಕರಣಗಳಿವೆ. ಆದರೆ ಇಲ್ಲೊಬ್ಬ ಒಂದಲ್ಲ, ಇಬ್ಬರು ಹುಡುಗಿಯರನ್ನು ತನ್ನ ಬೈಕ್​​ನಲ್ಲಿ ಕೂರಿಸಿಕೊಂಡು ವೀಲಿಂಗ್​​ ಮಾಡಿದ್ದಾನೆ. ಇದಲ್ಲದೇ ಈ ಹುಡುಗಿಯರೂ ಕೂಡ ಯಾವುದೇ ಭಯ ಇಲ್ಲದೇ ವಿಡಿಯೋಗೆ ಪೋಸ್​​ ಕೊಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಈ ವಿಡಿಯೋವನ್ನು ಟ್ವಿಟರ್​​ ಖಾತೆಯಲ್ಲಿ @PotholeWarriors ಬಳಕೆದಾರರು ಹಂಚಿಕೊಂಡಿದ್ದು, ಈ ಟ್ವೀಟ್​​ಗೆ ಮುಂಬೈನ ಟ್ರಾಫಿಕ್​​​ ಪೊಲೀಸರ ಟ್ವಿಟರ್​​​ ಖಾತೆಯಿಂದ  ರೀಟ್ವೀಟ್​​ ಮಾಡಲಾಗಿದೆ. ಈ ವಿಡಿಯೋದಲ್ಲಿರುವ ಮೂರು ಜನರ ವಿರುದ್ಧ ಇದೀಗಾಗಲೇ ಕೇಸು ದಾಖಲಾಗಿದೆ. ಈ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸರು ಈ ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 279, 336 ಮತ್ತು ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ಎಫ್‌ಐಆರ್‌ನಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 114 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ವಿಶ್ವ ದಾಖಲೆ ನಿರ್ಮಿಸಲು ಹಿಮದ ಮೇಲೆ ವಾಸ ಮಾಡುತ್ತಿರುವ ಮಹಿಳೆ

ಮುಂಬೈ ಪೊಲೀಸರು ಮತ್ತೊಂದು ಟ್ವೀಟ್‌ನಲ್ಲಿ, “ಕೇವಲ ದಂಡ ಮಾತ್ರವಲ್ಲ, ಈ ವೀಡಿಯೊದಲ್ಲಿ ಕಂಡುಬರುವ ಆರೋಪಿಗಳ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ ಮತ್ತು ಅವರು ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:57 pm, Sat, 1 April 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!