AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ 21ವರ್ಷದ ಯುವಕ ಕುಸಿದು ಬಿದ್ದು ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ವಾಕಿಂಗ್​​​ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಫಟನೆ ನಡೆದಿದೆ. ಯುವಕ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ 21ವರ್ಷದ ಯುವಕ ಕುಸಿದು ಬಿದ್ದು ಸಾವು
Viral Video
ಅಕ್ಷತಾ ವರ್ಕಾಡಿ
|

Updated on: Sep 17, 2023 | 4:53 PM

Share

ಉತ್ತರ ಪ್ರದೇಶ: ಯುವಕನೊರ್ವ ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ವಾಕಿಂಗ್​​​ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಈ ಸಿಸಿಟಿವಿ ದೃಶ್ಯಾವಳಿಗಳು ನೆಟ್ಟಿಗರಲ್ಲಿ ನಡುಕ ಉಂಟಾಗಿಸಿದೆ. ಸರಸ್ವತಿ ವಿಹಾರದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಮೃತ ಯುವಕ ಸಿದ್ಧಾರ್ಥ್ ಕುಮಾರ್ ಸಿಂಗ್(21) ಎಂದು ತಿಳಿದುಬಂದಿದೆ. ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ಪ್ರಾಪರ್ಟಿ ಡೀಲರ್ ಕಚೇರಿಯಲ್ಲಿ ಕಾಯುತ್ತಿರುವಾಗ ಒಬ್ಬರು ಸಾವನ್ನಪ್ಪಿದ ಹಾಗೂ ಇನ್ನೊಬ್ಬರು ಮದುವೆಯಲ್ಲಿ ನೃತ್ಯ ಮಾಡುವಾಗ ಕುಸಿದುಬಿದ್ದು ಮೃತಪಟ್ಟಿದ್ದರು.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ಸಿದ್ಧಾರ್ಥ್ ಕುಮಾರ್ ಜಿಮ್‌ನಲ್ಲಿ ಕುಸಿದುಬಿದ್ದ ಕೂಡಲೇ ಇಬ್ಬರು ಆತನ ಸಹಾಯಕ್ಕೆ ಧಾವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಆದರೆ ದುರದೃಷ್ಟವಶಾತ್,ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಸಿದ್ಧಾರ್ಥ್ ನೋಯ್ಡಾದ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ತಮ್ಮ ತಂದೆಯೊಂದಿಗೆ ನೋಯ್ಡಾದಲ್ಲಿ ವಾಸಿಸುತ್ತಿದ್ದರು. ಯುವಕನ ತಾಯಿ ಬಿಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ದುರಂತ ಘಟನೆಗೆ 10 ನಿಮಿಷಗಳ ಮೊದಲು ಸಿಂಗ್ ತನ್ನ ತಾಯಿಯೊಂದಿಗೆ ಮಾತನಾಡಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಬಿಹಾರದ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ