AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ 21ವರ್ಷದ ಯುವಕ ಕುಸಿದು ಬಿದ್ದು ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ವಾಕಿಂಗ್​​​ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಫಟನೆ ನಡೆದಿದೆ. ಯುವಕ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ 21ವರ್ಷದ ಯುವಕ ಕುಸಿದು ಬಿದ್ದು ಸಾವು
Viral Video
ಅಕ್ಷತಾ ವರ್ಕಾಡಿ
|

Updated on: Sep 17, 2023 | 4:53 PM

Share

ಉತ್ತರ ಪ್ರದೇಶ: ಯುವಕನೊರ್ವ ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ವಾಕಿಂಗ್​​​ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಈ ಸಿಸಿಟಿವಿ ದೃಶ್ಯಾವಳಿಗಳು ನೆಟ್ಟಿಗರಲ್ಲಿ ನಡುಕ ಉಂಟಾಗಿಸಿದೆ. ಸರಸ್ವತಿ ವಿಹಾರದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಮೃತ ಯುವಕ ಸಿದ್ಧಾರ್ಥ್ ಕುಮಾರ್ ಸಿಂಗ್(21) ಎಂದು ತಿಳಿದುಬಂದಿದೆ. ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ಪ್ರಾಪರ್ಟಿ ಡೀಲರ್ ಕಚೇರಿಯಲ್ಲಿ ಕಾಯುತ್ತಿರುವಾಗ ಒಬ್ಬರು ಸಾವನ್ನಪ್ಪಿದ ಹಾಗೂ ಇನ್ನೊಬ್ಬರು ಮದುವೆಯಲ್ಲಿ ನೃತ್ಯ ಮಾಡುವಾಗ ಕುಸಿದುಬಿದ್ದು ಮೃತಪಟ್ಟಿದ್ದರು.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ಸಿದ್ಧಾರ್ಥ್ ಕುಮಾರ್ ಜಿಮ್‌ನಲ್ಲಿ ಕುಸಿದುಬಿದ್ದ ಕೂಡಲೇ ಇಬ್ಬರು ಆತನ ಸಹಾಯಕ್ಕೆ ಧಾವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಆದರೆ ದುರದೃಷ್ಟವಶಾತ್,ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಸಿದ್ಧಾರ್ಥ್ ನೋಯ್ಡಾದ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ತಮ್ಮ ತಂದೆಯೊಂದಿಗೆ ನೋಯ್ಡಾದಲ್ಲಿ ವಾಸಿಸುತ್ತಿದ್ದರು. ಯುವಕನ ತಾಯಿ ಬಿಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ದುರಂತ ಘಟನೆಗೆ 10 ನಿಮಿಷಗಳ ಮೊದಲು ಸಿಂಗ್ ತನ್ನ ತಾಯಿಯೊಂದಿಗೆ ಮಾತನಾಡಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಬಿಹಾರದ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ