AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ದಾರಿ ತಪ್ಪಿದ ಹೆಣ್ಮಕ್ಕಳಿಗೆ ಸರಿಯಾದ ದಾರಿ ತೋರಿಸಿದ ಅಣ್ಣ, ವಿಡಿಯೋ ವೈರಲ್

ದಿನಬೆಳಗಾದರೆ ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವು ವಿಡಿಯೋಗಳು ನಗು ತರಿಸಿದರೆ, ಕೆಲವು ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಟ್ರಾಫಿಕ್ ನಡುವೆಯೇ ಕಿರಿದಾದ ಜಾಗದಲ್ಲಿ ಯುವತಿಯರಿಬ್ಬರೂ ವಾಹನವನ್ನು ನುಗ್ಗಿಸುತ್ತಿದ್ದಾರೆ. ಈ ವೇಳೆಯಲ್ಲಿ ಅಲ್ಲೇ ಇದ್ದ ಯುವಕನೊಬ್ಬನು ಈ ಗಾಡಿಯನ್ನು ತಳ್ಳುತ್ತ ನಗುತ್ತಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ನೆಟ್ಟಿಗರ ಮುಖದಲ್ಲಿ ನಗು ತರಿಸಿದೆ.

Viral Video : ದಾರಿ ತಪ್ಪಿದ ಹೆಣ್ಮಕ್ಕಳಿಗೆ ಸರಿಯಾದ ದಾರಿ ತೋರಿಸಿದ ಅಣ್ಣ, ವಿಡಿಯೋ ವೈರಲ್
ಸಾಯಿನಂದಾ
| Edited By: |

Updated on: May 25, 2024 | 5:28 PM

Share

ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸರ್ವೇ ಸಾಮಾನ್ಯವಾಗಿರುತ್ತದೆ. ಬೆಳಗ್ಗೆ ಕೆಲಸಕ್ಕೆ ಹೋಗುವವರಂತೂ ನಡು ರಸ್ತೆಯಲ್ಲಿ ಸಿಕ್ಕಿ ಹಾಕಿಕೊಳ್ಳುವುದೇ ಹೆಚ್ಚು. ಹೀಗಾಗಿ ಈ ಟ್ರಾಫಿಕ್ ಜಾಮ್ ಕಾರಣದಿಂದ ಜನರು ಹಲವು ರೀತಿಯ ಸಮಸ್ಯೆಯನ್ನು ಎದುರಿಸುತ್ತಾರೆ. ಕೆಲವರು ಅದೇಗೋ ಗಾಡಿಯಲ್ಲಿ ಸ್ವಲ್ಪ ಜಾಗ ಸಿಕ್ಕರೂ ನುಗ್ಗಿಸಿಕೊಂಡು ಹೋಗಿ ಬಿಡುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿ ಹಾಕಿಕೊಂಡು, ಹೇಗೋ ಕಿರಿದಾದ ದಾರಿಯಲ್ಲಿ ಸ್ಕೂಟಿಯನ್ನು ನುಗ್ಗಿಸಿಕೊಂಡು ಹೋಗುವ ದೃಶ್ಯವು ನಗು ತರಿಸುತ್ತಿದೆ.

ವಿಡಿಯೋವನ್ನು ನೋಡಿದರೆ ಯುವತಿಯರಿಬ್ಬರೂ ಇವತ್ತಿಗಂತೂ ಈ ಟ್ರಾಫಿಕ್ ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಭಾವಿಸಿ ಅಲ್ಲೇ ಇದ್ದ ಕಿರಿದಾದ ದಾರಿಯಲ್ಲಿ ಸ್ಕೂಟಿಯನ್ನು ನುಗ್ಗಿಸಲು ಪ್ರಯತ್ನಿಸಿದ್ದಾರೆ. ಈ ವೇಳೆಯಲ್ಲಿ ಅಲ್ಲೇ ಇದ್ದ ಯುವಕನೊಬ್ಬನು ಈ ಯುವತಿಯರು ಇದ್ದ ಸ್ಕೂಟಿಯನ್ನು ಜೋರಾಗಿ ತಳ್ಳುತ್ತ ವಾಹನಗಳು ಇರುವಲ್ಲಿಗೇ ತಂದು ನಿಲ್ಲಿಸಿ ಜೋರಾಗಿ ನಗುತ್ತಿದ್ದಾನೆ. ಇತ್ತ ಸ್ಕೂಟಿಯಲ್ಲಿದ್ದ ಇಬ್ಬರೂ ಯುವತಿಯರು ನಗುತ್ತಿದ್ದಾರೆ.

ಇದನ್ನೂ ಓದಿ: ಎಕ್ಸ್​​​ನಲ್ಲಿ ಸಖತ್​​ ಟ್ರೆಂಡ್ ಆಗುತ್ತಿದೆ ಹಾರ್ದಿಕ್ ಪಾಂಡ್ಯ ಡೈವೋರ್ಸ್ ಸುದ್ದಿಯ ಮೀಮ್ಸ್, ಇಲ್ಲಿದೆ ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೊಡಿ:

ಈ ವಿಡಿಯೋವನ್ನು ನಮ್ಗೆಲ್ಲಾ ಯಾರ್ ಬೀಳ್ತಾರೆ ಎನ್ನುವ ಪೇಜ್ ನಲ್ಲಿ ಶೇರ್ ಮಾಡಲಾಗಿದ್ದು, ದಾರಿ ತಪ್ಪಿದ ಹೆಣ್ಣು ಮಕ್ಕಳಿಗೆ ಸರಿಯಾದ ದಾರಿ ತೋರಿಸಿದ ಅಣ್ಣ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೋಡುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿದ್ದು, ಬಳಕೆದಾರರೊಬ್ಬರು ಚಪ್ಪಾಳೆ ತಟ್ಟುವ ಇಮೋಜಿಯನ್ನು ಶೇರ್ ಮಾಡಿಕೊಂಡಿದ್ದಾರೆ. ಮತ್ತೊಬ್ಬರು ಅಣ್ಣಗೆ ಒಂದು ಎಗ್ ರೈಸ್ ಪಾರ್ಸೆಲ್ ಎಂದು ಬರೆದುಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್