AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಕ್ಕಿ ಹರಿಯುತ್ತಿದ್ದ ನದಿಗೆ ಹಾರಿದ ಯುವಕ ನಾಪತ್ತೆ, ವೈರಲ್ ವಿಡಿಯೋ ಇಲ್ಲಿದೆ

ಬಿಸಿ ರಕ್ತದ ಯುವಕ ಉಕ್ಕಿ ಹರಿಯುವ ನದಿಗೆ ಹಾರಿ ನಾಪತ್ತೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸದ್ಯ ಯುವಕ ನದಿಗೆ ಹಾರುವ ವಿಡಿಯೋ ವೈರಲ್ ಆಗುತ್ತಿದೆ.

Viral Video: ಉಕ್ಕಿ ಹರಿಯುತ್ತಿದ್ದ ನದಿಗೆ ಹಾರಿದ ಯುವಕ ನಾಪತ್ತೆ, ವೈರಲ್ ವಿಡಿಯೋ ಇಲ್ಲಿದೆ
ಗಿರ್ನಾ ನದಿಗೆ ಹಾರಿದ ಯುವಕ ನಾಪತ್ತೆ
TV9 Web
| Edited By: |

Updated on:Jul 15, 2022 | 6:32 PM

Share

ಕೆಲವರು ಬಿಸಿ ರಕ್ತ ಇದೆ ಎಂದು ಸಾಹಡ ಮಾಡಲು ಹೋಗಿ ಜೀವಕ್ಕೆ ಕುತ್ತು ತರುತ್ತಾರೆ. ಇಂತಹ ಅನೇಕ ನಿದರ್ಶನಗಳು ನಮ್ಮ ಕಣ್ಣ ಮುಂದೆಯೇ ನಡೆದಿವೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಡಿಯೋಗಳನ್ನು ಕಾಣಬಹುದು. ಇದೀಗ ಯುವಕನೊಬ್ಬ ಉಕ್ಕಿ ಹರಿಯುತ್ತಿರುವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದ್ದು, ಯುವಕ ನದಿಗೆ ಹಾರುವ ವಿಡಿಯೋ ವೈರಲ್ ಆಗುತ್ತಿದೆ. ವೈರಲ್ ವಿಡಿಯೋ(Viral Video), ಯುವಕನೊಬ್ಬ ಸೇತುವೆ ಮೇಲೆ ನಿಂತು ಉಕ್ಕಿ ಹರಿಯುತ್ತಿರುವ ನದಿಗೆ ಹಾರುವುದನ್ನು ತೋರಿಸುತ್ತದೆ.

ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಭಾರೀ ಮಳೆಯಿಂದಾಗಿ ಗಿರ್ನಾ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಈ ವೇಳೆ ಬಿಸಿ ರಕ್ತದ ಯುವಕ ದುಸ್ಸಾಹಸಕ್ಕೆ ಇಳಿದು ಜೀವಕ್ಕೆ ಕುತ್ತು ತಂದಿದ್ದಾನೆ. ಯುವಕ ನದಿಗೆ ಹಾರುವುದನ್ನು ವಿಡಿಯೋ ಮಾಡಲಾಗಿದ್ದು, ಒಂದಷ್ಟು ಮಂದಿ ಆತನ ಸಾಹಸವನ್ನು ನೋಡಲು ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಯುವಕ ಹಾರುವಾಗ ಓಹ್ ಎಂದು ಹುರಿದುಂಬಿಸುವಂತೆ ಚೀರಾಡುವುದನ್ನು ವಿಡಿಯೋದಲ್ಲಿ ಕೇಳಿಸಬಹುದು.

ನದಿಗೆ ಹಾರಿದ ನಂತರ ಯುವಕ ಮೇಲೆಬರದೆ ನಾಪತ್ತೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ನದಿಯಲ್ಲಿ ನಾಪತ್ತೆಯಾದವನನ್ನು ನಯೀಮ್ ಅಮೀನ್ ಎಂದು ಗುರುತಿಸಲಾಗಿದ್ದು, ಅಧಿಕಾರಿಗಳು ಈತನ ಪತ್ತೆಗಾಗಿ ಗುರುವಾರ ತಡರಾತ್ರಿಯವರೆಗೂ ಹುಡುಕಾಡಿದರೂ ಪತ್ತೆಯಾಗಲಿಲ್ಲ.

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಪುಣೆ, ನಾಸಿಕ್ ಮತ್ತು ಇತರ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಪಾಲ್ಘರ್ ಜಿಲ್ಲೆಯ ವಸಾಯಿ ನಗರದಲ್ಲಿ ನಿನ್ನೆ ಸಂಭವಿಸಿದ ಭೂಕುಸಿತದಲ್ಲಿ ತಂದೆ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಅಲ್ಲದೆ ಗೊಂಡಿಯಾ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿದ ನಾಲ್ಕು ಜನರು ಕೊಚ್ಚಿ ಹೋಗಿದ್ದಾರೆ.

Published On - 6:29 pm, Fri, 15 July 22

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್