Viral Video : ನೋಡನೋಡುತ್ತಿದ್ದಂತೆ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ, ವೈರಲ್ ಆಯ್ತು ವಿಡಿಯೋ

ಕೆಲವೊಂದು ವಿಡಿಯೋಗಳನ್ನು ನೋಡುವಾಗ ಎದೆಝಲ್ ಎನ್ನುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸುವಂತಹ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರ ಎದೆ ಒಂದು ಕ್ಷಣ ಝಲ್ ಎಂದಿದೆ.

Viral Video : ನೋಡನೋಡುತ್ತಿದ್ದಂತೆ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ, ವೈರಲ್ ಆಯ್ತು ವಿಡಿಯೋ
Follow us
| Updated By: ಅಕ್ಷತಾ ವರ್ಕಾಡಿ

Updated on: May 18, 2024 | 7:12 PM

ಕೆಲವೊಮ್ಮೆ ನಾವು ಮಾಡುವ ಸಣ್ಣ ಪುಟ್ಟ ಎಡವಟ್ಟುಗಳು ಇನ್ನೊಬ್ಬರ ಜೀವಕ್ಕೆ ಕಂಟಕವಾಗುತ್ತದೆ. ಗೊತ್ತೋ ಗೊತ್ತಿಲ್ಲದೇ ಮಾಡುವ ಕೆಲಸದಿಂದ ವ್ಯಕ್ತಿಯ ಪ್ರಾಣವು ಹೋಗಬಹುದು. ಹೌದು, ವಿಮಾನದಿಂದ ಕೆಳಗೆ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಘಟನೆಯು ಮೇ 16 ರಂರು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋವನ್ನು ನೋಡಿದಾಗ ವಿಮಾನದಿಂದ ವ್ಯಕ್ತಿ ಹೊರಬರುತ್ತಿದ್ದಂತೆಯೇ ಕೆಳಗಡೆ ಇದ್ದಂತಹ ಇಬ್ಬರು ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದು, ಈ ಘಟನೆ ನಡೆಯಲು ಕಾರಣವಾಗಿದೆ. ಆದರೆ ಅದೃಷ್ಟವಶಾತ್ ಕೆಳಗೆ ಬಿದ್ದ ಸಿಬ್ಬಂದಿಯು ಪ್ರಾಣಾಪಾಯದಿಂದಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಧಗಧಗನೆ ಹೊತ್ತಿ ಉರಿದ ಬುಲೆಟ್ ಬೈಕ್, ಬೆಂಕಿ ನಂದಿಸುವಾಗ ಪೆಟ್ರೋಲ್ ಟ್ಯಾಂಕ್ ಸ್ಫೋಟ, 10 ಮಂದಿಗೆ ಗಾಯ

ಈ ವಿಡಿಯೋವನ್ನು ದ್ರಶಶಿ ಶೇಖರ್ ಸಿಂಗ್ ಎನ್ನುವ ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕೆಳಗಡೆಯಿದ್ದ ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದಾರೆ. ಆದರೆ ವಿಮಾನದ ಒಳಗಡೆಯಿದ್ದ ಸಿಬ್ಬಂದಿಯು ಮೆಟ್ಟಿಲುಯಿದೆ ಎಂದುಕೊಂಡು ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವಿಡಿಯೋವನ್ನು ಐದು ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ