AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೋಡನೋಡುತ್ತಿದ್ದಂತೆ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ, ವೈರಲ್ ಆಯ್ತು ವಿಡಿಯೋ

ಕೆಲವೊಂದು ವಿಡಿಯೋಗಳನ್ನು ನೋಡುವಾಗ ಎದೆಝಲ್ ಎನ್ನುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸುವಂತಹ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರ ಎದೆ ಒಂದು ಕ್ಷಣ ಝಲ್ ಎಂದಿದೆ.

Viral Video : ನೋಡನೋಡುತ್ತಿದ್ದಂತೆ ವಿಮಾನದಿಂದ ಕೆಳಗೆ ಬಿದ್ದ ಸಿಬ್ಬಂದಿ, ವೈರಲ್ ಆಯ್ತು ವಿಡಿಯೋ
ಸಾಯಿನಂದಾ
| Edited By: |

Updated on: May 18, 2024 | 7:12 PM

Share

ಕೆಲವೊಮ್ಮೆ ನಾವು ಮಾಡುವ ಸಣ್ಣ ಪುಟ್ಟ ಎಡವಟ್ಟುಗಳು ಇನ್ನೊಬ್ಬರ ಜೀವಕ್ಕೆ ಕಂಟಕವಾಗುತ್ತದೆ. ಗೊತ್ತೋ ಗೊತ್ತಿಲ್ಲದೇ ಮಾಡುವ ಕೆಲಸದಿಂದ ವ್ಯಕ್ತಿಯ ಪ್ರಾಣವು ಹೋಗಬಹುದು. ಹೌದು, ವಿಮಾನದಿಂದ ಕೆಳಗೆ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ ಪರಿಣಾಮ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಘಟನೆಯು ಮೇ 16 ರಂರು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋವನ್ನು ನೋಡಿದಾಗ ವಿಮಾನದಿಂದ ವ್ಯಕ್ತಿ ಹೊರಬರುತ್ತಿದ್ದಂತೆಯೇ ಕೆಳಗಡೆ ಇದ್ದಂತಹ ಇಬ್ಬರು ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದು, ಈ ಘಟನೆ ನಡೆಯಲು ಕಾರಣವಾಗಿದೆ. ಆದರೆ ಅದೃಷ್ಟವಶಾತ್ ಕೆಳಗೆ ಬಿದ್ದ ಸಿಬ್ಬಂದಿಯು ಪ್ರಾಣಾಪಾಯದಿಂದಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಧಗಧಗನೆ ಹೊತ್ತಿ ಉರಿದ ಬುಲೆಟ್ ಬೈಕ್, ಬೆಂಕಿ ನಂದಿಸುವಾಗ ಪೆಟ್ರೋಲ್ ಟ್ಯಾಂಕ್ ಸ್ಫೋಟ, 10 ಮಂದಿಗೆ ಗಾಯ

ಈ ವಿಡಿಯೋವನ್ನು ದ್ರಶಶಿ ಶೇಖರ್ ಸಿಂಗ್ ಎನ್ನುವ ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕೆಳಗಡೆಯಿದ್ದ ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದಾರೆ. ಆದರೆ ವಿಮಾನದ ಒಳಗಡೆಯಿದ್ದ ಸಿಬ್ಬಂದಿಯು ಮೆಟ್ಟಿಲುಯಿದೆ ಎಂದುಕೊಂಡು ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವಿಡಿಯೋವನ್ನು ಐದು ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ