AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ
ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 04, 2023 | 4:10 PM

Share

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ. ಏಪ್ರಿಲ್​​ 3 ರಂದು ಅಮಿತಾಭ್​​​ರವರ ಅಧಿಕೃತ ಟ್ವಿಟರ್​​ ಖಾತೆಯಿಂದ ಪೋಸ್ಟ್​​​ ಮಾಡಲಾದ ಈ ವಿಡಿಯೋ ಇದೀಗಾಗಲೇ 7ಲಕ್ಷದ 17 ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಭಾರತ ಹೊಸ ಆವಿಷ್ಕಾರಗಳಿಗೆ ತಾಯಿ, ಅಂದರೆ ಅವಿಷ್ಕಾರಗಳಿಗೆ ಮೂಲ ಸ್ಪೂರ್ತಿ, ಭಾರತ್ ಮಾತಾ ಕೀ ಎಂದು ಕ್ಯಾಪ್ಷನ್​ ಕೂಡ ಬರೆಯಲಾಗಿದೆ . ಆಪೋಸ್ಟ್​​​ ಇಲ್ಲಿದೆ ನೋಡಿ.

ಬೇಸಿಗೆಯ ಸೆಕೆ ಬೆವರಿನಿಂದಾಗಿ ಬಿಸಿಲಿಗೆ ಮನೆಯಿಂದ ಹೊರಗಡೆ ಬರಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ವೃದ್ಧರೊಬ್ಬರು ಸೌರ ಶಕ್ತಿ ಚಾಲಿತ ಫ್ಯಾನ್​​ನ್ನು ತಲೆಗೆ ಸಿಕ್ಕಿಸಿಕೊಂಡು ಮಟ ಮಟ ಮಧ್ಯಾಹ್ನದ ಸುಡು ಬಿಸಿಲಿಗೂ ಬೀದಿ ಬೀದಿಯಲ್ಲಿ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋದಲ್ಲಿ ತಲೆಯ ಮುಂಭಾಗದಲ್ಲಿ ಅಂದರೆ ಮುಖಕ್ಕೆ ಸರಿಯಾಗಿ ಗಾಳಿ ಬೀಸುವಂತೆ ಫ್ಯಾನ್​​​ ಫಿಕ್ಸ್​​ ಮಾಡಲಾಗಿದೆ. ಹಾಗೆಯೇ ತಲೆಯ ಹಿಂಭಾಗದಲ್ಲಿ ಸೋಲರ್​​ ಅಳವಡಿಸಲಾಗಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ಅಮಿತಾಭ್ ಹಂಚಿಕೊಂಡಿರುವ ಈ ವಿಡಿಯೋ ಈಗಾಗಲೇ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​​ಗಳನ್ನು ಪಡೆದುಕೊಂಡಿದೆ. ಸಾಕಷ್ಟು ಬಳಕೆದಾರರು ಈ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಒಬ್ಬ ಬಳಕೆದಾರರು ಭಾರತೀಯರಲ್ಲಿ ಸಾಮರ್ಥ್ಯ ಮತ್ತು ಕೌಶಲ್ಯದ ಕೊರತೆಯಿಲ್ಲ, ಸರ್ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:01 pm, Tue, 4 April 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ