AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ
ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 04, 2023 | 4:10 PM

Share

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ. ಏಪ್ರಿಲ್​​ 3 ರಂದು ಅಮಿತಾಭ್​​​ರವರ ಅಧಿಕೃತ ಟ್ವಿಟರ್​​ ಖಾತೆಯಿಂದ ಪೋಸ್ಟ್​​​ ಮಾಡಲಾದ ಈ ವಿಡಿಯೋ ಇದೀಗಾಗಲೇ 7ಲಕ್ಷದ 17 ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಭಾರತ ಹೊಸ ಆವಿಷ್ಕಾರಗಳಿಗೆ ತಾಯಿ, ಅಂದರೆ ಅವಿಷ್ಕಾರಗಳಿಗೆ ಮೂಲ ಸ್ಪೂರ್ತಿ, ಭಾರತ್ ಮಾತಾ ಕೀ ಎಂದು ಕ್ಯಾಪ್ಷನ್​ ಕೂಡ ಬರೆಯಲಾಗಿದೆ . ಆಪೋಸ್ಟ್​​​ ಇಲ್ಲಿದೆ ನೋಡಿ.

ಬೇಸಿಗೆಯ ಸೆಕೆ ಬೆವರಿನಿಂದಾಗಿ ಬಿಸಿಲಿಗೆ ಮನೆಯಿಂದ ಹೊರಗಡೆ ಬರಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ವೃದ್ಧರೊಬ್ಬರು ಸೌರ ಶಕ್ತಿ ಚಾಲಿತ ಫ್ಯಾನ್​​ನ್ನು ತಲೆಗೆ ಸಿಕ್ಕಿಸಿಕೊಂಡು ಮಟ ಮಟ ಮಧ್ಯಾಹ್ನದ ಸುಡು ಬಿಸಿಲಿಗೂ ಬೀದಿ ಬೀದಿಯಲ್ಲಿ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋದಲ್ಲಿ ತಲೆಯ ಮುಂಭಾಗದಲ್ಲಿ ಅಂದರೆ ಮುಖಕ್ಕೆ ಸರಿಯಾಗಿ ಗಾಳಿ ಬೀಸುವಂತೆ ಫ್ಯಾನ್​​​ ಫಿಕ್ಸ್​​ ಮಾಡಲಾಗಿದೆ. ಹಾಗೆಯೇ ತಲೆಯ ಹಿಂಭಾಗದಲ್ಲಿ ಸೋಲರ್​​ ಅಳವಡಿಸಲಾಗಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ಅಮಿತಾಭ್ ಹಂಚಿಕೊಂಡಿರುವ ಈ ವಿಡಿಯೋ ಈಗಾಗಲೇ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​​ಗಳನ್ನು ಪಡೆದುಕೊಂಡಿದೆ. ಸಾಕಷ್ಟು ಬಳಕೆದಾರರು ಈ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಒಬ್ಬ ಬಳಕೆದಾರರು ಭಾರತೀಯರಲ್ಲಿ ಸಾಮರ್ಥ್ಯ ಮತ್ತು ಕೌಶಲ್ಯದ ಕೊರತೆಯಿಲ್ಲ, ಸರ್ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:01 pm, Tue, 4 April 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ