AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ
ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 04, 2023 | 4:10 PM

Share

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ. ಏಪ್ರಿಲ್​​ 3 ರಂದು ಅಮಿತಾಭ್​​​ರವರ ಅಧಿಕೃತ ಟ್ವಿಟರ್​​ ಖಾತೆಯಿಂದ ಪೋಸ್ಟ್​​​ ಮಾಡಲಾದ ಈ ವಿಡಿಯೋ ಇದೀಗಾಗಲೇ 7ಲಕ್ಷದ 17 ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಭಾರತ ಹೊಸ ಆವಿಷ್ಕಾರಗಳಿಗೆ ತಾಯಿ, ಅಂದರೆ ಅವಿಷ್ಕಾರಗಳಿಗೆ ಮೂಲ ಸ್ಪೂರ್ತಿ, ಭಾರತ್ ಮಾತಾ ಕೀ ಎಂದು ಕ್ಯಾಪ್ಷನ್​ ಕೂಡ ಬರೆಯಲಾಗಿದೆ . ಆಪೋಸ್ಟ್​​​ ಇಲ್ಲಿದೆ ನೋಡಿ.

ಬೇಸಿಗೆಯ ಸೆಕೆ ಬೆವರಿನಿಂದಾಗಿ ಬಿಸಿಲಿಗೆ ಮನೆಯಿಂದ ಹೊರಗಡೆ ಬರಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ವೃದ್ಧರೊಬ್ಬರು ಸೌರ ಶಕ್ತಿ ಚಾಲಿತ ಫ್ಯಾನ್​​ನ್ನು ತಲೆಗೆ ಸಿಕ್ಕಿಸಿಕೊಂಡು ಮಟ ಮಟ ಮಧ್ಯಾಹ್ನದ ಸುಡು ಬಿಸಿಲಿಗೂ ಬೀದಿ ಬೀದಿಯಲ್ಲಿ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋದಲ್ಲಿ ತಲೆಯ ಮುಂಭಾಗದಲ್ಲಿ ಅಂದರೆ ಮುಖಕ್ಕೆ ಸರಿಯಾಗಿ ಗಾಳಿ ಬೀಸುವಂತೆ ಫ್ಯಾನ್​​​ ಫಿಕ್ಸ್​​ ಮಾಡಲಾಗಿದೆ. ಹಾಗೆಯೇ ತಲೆಯ ಹಿಂಭಾಗದಲ್ಲಿ ಸೋಲರ್​​ ಅಳವಡಿಸಲಾಗಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ಅಮಿತಾಭ್ ಹಂಚಿಕೊಂಡಿರುವ ಈ ವಿಡಿಯೋ ಈಗಾಗಲೇ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​​ಗಳನ್ನು ಪಡೆದುಕೊಂಡಿದೆ. ಸಾಕಷ್ಟು ಬಳಕೆದಾರರು ಈ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಒಬ್ಬ ಬಳಕೆದಾರರು ಭಾರತೀಯರಲ್ಲಿ ಸಾಮರ್ಥ್ಯ ಮತ್ತು ಕೌಶಲ್ಯದ ಕೊರತೆಯಿಲ್ಲ, ಸರ್ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:01 pm, Tue, 4 April 23

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ