AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ

ಸ್ವಾರ್ಥ ಮನುಷ್ಯನ ಪ್ರೀತಿಗಿಂತ ಮೂಕ ಪ್ರಾಣಿಗಳ ಪ್ರೀತಿಯೇ ಮೇಲು ಎನ್ನುವ ಮಾತಿದೆ. ಈ ಮೂಕ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕನಿಗೆ ಜೀವನ ಪರ್ಯಂತ ಋಣಿಯಾಗಿರುತ್ತವೆ. ಆದರೆ ಇದೀಗ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಆನೆಯ ನಿಸ್ವಾರ್ಥ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 04, 2024 | 5:12 PM

ಪ್ರಾಣಿಗಳ ಪ್ರೀತಿಯೆ ಹಾಗೆ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತ ಜೀವನಪರ್ಯಂತ ಜೊತೆಗೆ ಇರುತ್ತವೆ. ಕೇವಲ ಶ್ವಾನಗಳಷ್ಟೇ ಅಲ್ಲ ಝೆಡ್ ಆನೆಗಳು ಸಹ ತಮ್ಮ ಮಾಲೀಕರಿಗೆ ವಿಧೇಯರಾಗಿರುತ್ತವೆ. ಮಾಲೀಕನ ನೋವಿಗೆ ಮಿಡಿಯುವ ಈ ಆನೆಗಳು ಸದಾ ಜೊತೆಯಿರುತ್ತವೆ. ಇದೀಗ ನೀರು ಕುಡಿಯಲು ಮಾಲೀಕನಿಗೆ ಸಹಾಯ ಮಾಡಿದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಲ್ಲೇ ಇದೆ. ಬಿಸಿಲಿನಿಂದ ಜನರು ಮಾತ್ರವಲ್ಲದೆ ಪ್ರಾಣಿಗಳು ತತ್ತರಿಸಿ ಹೋಗಿವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ಆನೆಯೊಂದು ನೀರು ಕುಡಿಯಲು ನೆರವಾದ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿವೆ. ಬೆಂಕಿ ಟಿವಿ ಟಿ ನರಸೀಪುರ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಡವಾಗಿ ಬಂದ ಶಿಕ್ಷಕಿಯ ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್ ಪಾಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋದಲ್ಲಿ ಬೋರ್ ವೆಲ್ ನಲ್ಲಿ ಮಾಲೀಕನು ನೀರು ಕುಡಿಯುತ್ತಿದ್ದು, ಆನೆಯು ಮಾಲೀಕನಿಗೆ ನೆರವಾಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋವು ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಹಾಗೂ ಲೈಕ್ಸ್ ಪಡೆದುಕೊಂಡಿದ್ದು, ಕೆಲವರು ಆನೆಯ ಗುಣವನ್ನು ಕೊಂಡಾಡಿದ್ದಾರೆ. ಇನ್ನು ಕೆಲವರು ಸೂಪರ್ ಎಂದರೆ, ಹಲವರು ಹೃದಯದ ಸಿಂಬಲ್ ಕಳುಹಿಸುವ ಮೂಲಕ ಮೆಚ್ಚುಗೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್