AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ

ಸ್ವಾರ್ಥ ಮನುಷ್ಯನ ಪ್ರೀತಿಗಿಂತ ಮೂಕ ಪ್ರಾಣಿಗಳ ಪ್ರೀತಿಯೇ ಮೇಲು ಎನ್ನುವ ಮಾತಿದೆ. ಈ ಮೂಕ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕನಿಗೆ ಜೀವನ ಪರ್ಯಂತ ಋಣಿಯಾಗಿರುತ್ತವೆ. ಆದರೆ ಇದೀಗ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಆನೆಯ ನಿಸ್ವಾರ್ಥ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ
ಸಾಯಿನಂದಾ
| Edited By: |

Updated on: May 04, 2024 | 5:12 PM

Share

ಪ್ರಾಣಿಗಳ ಪ್ರೀತಿಯೆ ಹಾಗೆ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತ ಜೀವನಪರ್ಯಂತ ಜೊತೆಗೆ ಇರುತ್ತವೆ. ಕೇವಲ ಶ್ವಾನಗಳಷ್ಟೇ ಅಲ್ಲ ಝೆಡ್ ಆನೆಗಳು ಸಹ ತಮ್ಮ ಮಾಲೀಕರಿಗೆ ವಿಧೇಯರಾಗಿರುತ್ತವೆ. ಮಾಲೀಕನ ನೋವಿಗೆ ಮಿಡಿಯುವ ಈ ಆನೆಗಳು ಸದಾ ಜೊತೆಯಿರುತ್ತವೆ. ಇದೀಗ ನೀರು ಕುಡಿಯಲು ಮಾಲೀಕನಿಗೆ ಸಹಾಯ ಮಾಡಿದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಲ್ಲೇ ಇದೆ. ಬಿಸಿಲಿನಿಂದ ಜನರು ಮಾತ್ರವಲ್ಲದೆ ಪ್ರಾಣಿಗಳು ತತ್ತರಿಸಿ ಹೋಗಿವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ಆನೆಯೊಂದು ನೀರು ಕುಡಿಯಲು ನೆರವಾದ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿವೆ. ಬೆಂಕಿ ಟಿವಿ ಟಿ ನರಸೀಪುರ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಡವಾಗಿ ಬಂದ ಶಿಕ್ಷಕಿಯ ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್ ಪಾಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋದಲ್ಲಿ ಬೋರ್ ವೆಲ್ ನಲ್ಲಿ ಮಾಲೀಕನು ನೀರು ಕುಡಿಯುತ್ತಿದ್ದು, ಆನೆಯು ಮಾಲೀಕನಿಗೆ ನೆರವಾಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋವು ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಹಾಗೂ ಲೈಕ್ಸ್ ಪಡೆದುಕೊಂಡಿದ್ದು, ಕೆಲವರು ಆನೆಯ ಗುಣವನ್ನು ಕೊಂಡಾಡಿದ್ದಾರೆ. ಇನ್ನು ಕೆಲವರು ಸೂಪರ್ ಎಂದರೆ, ಹಲವರು ಹೃದಯದ ಸಿಂಬಲ್ ಕಳುಹಿಸುವ ಮೂಲಕ ಮೆಚ್ಚುಗೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ