AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶತ್ರು ಸಂಹಾರಕ್ಕೆ ತಯಾರಿಯಲ್ಲಿದ್ದ ಯೋಧನಿಗೆ ಎದುರಾದ ನಾಗರಹಾವು; ಯೋಧ ಮಾಡಿದ್ದೇನು ಗೊತ್ತಾ?

ಸೈನಿಕನೊಬ್ಬ ಕಾಡಿನಲ್ಲಿ ಹೋಗುತ್ತಿರುವಾಗ ನಾಗರಹಾವು ತಲೆ ಎತ್ತಿ ನಿಲ್ಲುತ್ತದೆ. ಈ ವೇಳೆ ವೀರ ಸೈನಿಕ ಮಾಡಿದ್ದೇನು? ಈ ವೈರಲ್ ವಿಡಿಯೋ ನೋಡಿ.

Viral Video: ಶತ್ರು ಸಂಹಾರಕ್ಕೆ ತಯಾರಿಯಲ್ಲಿದ್ದ ಯೋಧನಿಗೆ ಎದುರಾದ ನಾಗರಹಾವು; ಯೋಧ ಮಾಡಿದ್ದೇನು ಗೊತ್ತಾ?
ನಾಗರ ಹಾವನ್ನು ಹಿಡಿದ ಸೈನಿಕ
TV9 Web
| Edited By: |

Updated on: Aug 15, 2022 | 10:04 AM

Share

ನಾಗರಹಾವು ವಿಶ್ವದ ಅತ್ಯಂತ ಮಾರಕ ಹಾವುಗಳಲ್ಲಿ ಒಂದಾಗಿದೆ, ಓರ್ವ ವ್ಯಕ್ತಿಯನ್ನು ಕೇವಲ 20 ನಿಮಿಷಗಳಲ್ಲಿ ಕೊಲ್ಲುವ ಸಾಮರ್ಥ್ಯ ಅದರ ವಿಷಕ್ಕಿದೆ. ಆದಾಗ್ಯೂ, ಅಪಾಯಕಾರಿ ಹಾವು ತನ್ನ ಬಂದಾಗಲೂ ವೀರ ಯೋಧ ಕುಗ್ಗದೆ ಅದಕ್ಕೂ ಯಾವುದೇ ತೊಂದರೆಯನ್ನು ನೀಡದೆ ಹಿಡಿದಿದ್ದಾರೆ. ಈ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಭಾರತೀಯ ಸೇನೆಯ ಯೋಧನೊಬ್ಬ ತನ್ನ ಶತ್ರುಗಳ ವಿರುದ್ಧ ಹೋರಾಡಲು ತಯಾರಿ ನಡೆಸುತ್ತಾ ಕಾಡಿನಲ್ಲಿ ತೆವಳುತ್ತಾ ಹೋಗುತ್ತಿರುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಇರುವಂತೆ, ಸೈನಿಕ ಗನ್ ಹಿಡಿದುಕೊಂಡು ಕಾಡಿನಲ್ಲಿ ತೆವಲುತ್ತಾ ಹೋಗುತ್ತಿರುವಾಗ ಸ್ವಲ್ಪ ಹೆಡೆ ಬಿಚ್ಚಿ ದಾಳಿಗೆ ಸಜ್ಜಾಗಿದ್ದ ನಾಗರ ಹಾವನ್ನು ನೋಡುತ್ತಾನೆ. ಅಷ್ಟಕ್ಕೂ ಎದೆಗುಂದದ ಆ ವೀರ ಸೈನಿಕ ಹಾವಿನ ತಲೆಯ ಮೇಲೆ ತನ್ನ ಕೈಯನ್ನು ಕೊಂಡೊಯ್ಯುತ್ತಾನೆ. ನಂತರ ನಿಧಾನವಾಗಿ ಕೈಯನ್ನು ಕೆಳಗೆ ತರುತ್ತಾ ಅದು ಮುಖವನ್ನು ಹಿಡಿಯುತ್ತಾನೆ. ತದನಂತರ ಒಂದು ಕೈಯಲ್ಲಿ ನಾಗರ ಹಾವು ಇನ್ನೊಂದು ಕೈಯಲ್ಲಿ ಬಂದೂಕನ್ನು ಹಿಡಿದುಕೊಂಡು ತೆವಲುತ್ತಲೇ ಮುಂದೆ ಸಾಗುವುದನ್ನು ನೋಡಬಹುದು. ಯಾವುದೇ ನಿರ್ಭೀತಿಯಿಂದ ಹಾವಿನ ತಲೆಯ ಮೇಲೆ ಕೈ ಹಾಕುವ ಆ ಸೈನಿಕನು ಹಾವು ಹಿಡಿಯುವ ತರಬೇತಿಯನ್ನೂ ಪಡೆದಿರುವಂತೆ ಕಾಣುತ್ತದೆ.

ಈ ವಿಡಿಯೋವನ್ನು official_viralclips ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ದಿನಗಳ ಹಿಂದೆ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಪಡೆದಿದೆ. ಹಾವನ್ನು ಹಿಡಿಯುವ ಈ ಯೋಧನ ವಿಡಿಯೋ ಇತರೆ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ. ಅಷ್ಟೇ ಅಲ್ಲದೆ ಸೈನಿಕನಿಗೆ ಸಂಬಂಧಪಟ್ಟ ಬೇರೆಬೇರೆ ಸಾಹಸದ, ಮಾನವೀಯತೆ ಮರೆಯುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್