AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್​ ಹಿಂಡಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್ ಅನ್ನು ಹಿಂಡಿದಾಗ ಏನಾಗುತ್ತದೆ ಗೊತ್ತಾ? ಆನಂದ್ ಮಹೀಂದ್ರಾ ಅವರು ಹಂಚಿಕೊಂಡಿರುವ ಈ ವಿಡಿಯೋ ನೋಡಿದರೆ ನೀವು ಅಚ್ಚರಿಗೊಳ್ಳುವಿರಿ.

Viral Video: ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್​ ಹಿಂಡಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಕ್ರಿಸ್ ಹ್ಯಾಡ್‌ಫೀಲ್ಡ್
TV9 Web
| Edited By: |

Updated on:Jun 26, 2022 | 5:14 PM

Share

ಉದ್ಯಮಿ ಆನಂದ್ ಮಹೀಂದ್ರಾ (Anand Mahindra) ಅವರು ಅತ್ಯಾಸಕ್ತಿಯ ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು. ಆನ್​ಲೈನ್​ನಲ್ಲಿ ಹೆಚ್ಚು ಆಕ್ಟಿವ್ ಆಗಿರುವ ಇವರು ಸಮಾಜಮುಖಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಬಾಹ್ಯಾಕಾಶ(Space)ದಲ್ಲಿ ಒದ್ದೆಯಾದ ಟವೆಲ್ ಅನ್ನು ಹಿಂಡಿದಾಗ ಏನಾಗುತ್ತದೆ ಎಂದು ತೋರಿಸುವ ವಿಡಿಯೋ(Video)ವೊಂದನ್ನು ಹಂಚಿಕೊಂಡಿದ್ದಾರೆ.

ಭಾನುವಾರಗಳಿಗೆ ಪರಿಪೂರ್ಣ ಸಾದೃಶ್ಯ. ವಾರದ ಎಲ್ಲಾ ಒತ್ತಡವನ್ನು ಹೊರಹಾಕಿ” ಎಂದು ಶೀರ್ಷಿಕೆಯೊಂದಿಗೆ ಆನಂದ್ ಮಹೀಂದ್ರಾ ಅವರು ಬಾಹ್ಯಾಕಾಶದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆನಡಾದ ಬಾಹ್ಯಾಕಾಶ ಸಂಸ್ಥೆ (CSA)ಯ ಕ್ರಿಸ್ ಹ್ಯಾಡ್‌ಫೀಲ್ಡ್ ಎಂಬ ಗಗನಯಾತ್ರಿ ಐಎಸ್‌ಎಸ್‌ನಲ್ಲಿ ಒದ್ದೆಯಾದ ಟವೆಲ್ ಅನ್ನು ಪ್ರಯೋಗಿಸುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ವಿಡಿಯೋದಲ್ಲಿ ಕಾಣುವಂತೆ, ಕ್ರಿಸ್ ಅವರು ಟವೆಲ್​ಗೆ ನೀರು ಹಾಕಿ ಹಿಂಡಿದಾಗ ಅದು ಗುರುತ್ವಾಕರ್ಷಣೆ ಇಲ್ಲದೆ ಅದರಲ್ಲೇ ಅಂಟಿಕೊಂಡಿರುವುದನ್ನು ಕಾಣಬಹುದು.

ವಿಡಿಯೋವನ್ನು ಆರಂಭದಲ್ಲಿ 2013ರಲ್ಲಿ ಕೆನಡಾದ ಬಾಹ್ಯಾಕಾಶ ಸಂಸ್ಥೆ (CSA) ಪೋಸ್ಟ್ ಮಾಡಿತ್ತು. ‘ಐಎಸ್‌ಎಸ್‌ನಲ್ಲಿ ನೀರನ್ನು ಹಿಂಡುವುದು – ವಿಜ್ಞಾನಕ್ಕಾಗಿ!’ ಎಂಬ ಶೀರ್ಷಿಕೆಯೊಂದಿಗೆ ಏಪ್ರಿಲ್ 17, 2013 ರಂದು ಪೋಸ್ಟ್ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಇಂಟರ್​ನೆಟ್​ನಲ್ಲಿ ಮುನ್ನೆಲೆಗೆ ಬಂದು ವೈರಲ್ ಆಗಲು ಪ್ರಾರಂಭಿಸಿದೆ. ಆನಂದ್ ಮಹೀಂದ್ರಾ ಅವರು ಪೋಸ್ಟ್ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 1,100 ಕ್ಕೂ ಹೆಚ್ಚು ಲೈಕ್ಸ್​ ಮತ್ತು 105ಕ್ಕೂ ಹೆಚ್ಚು ರೀಟ್ವೀಟ್‌ಗಳನ್ನು ಗಳಿಸಿದೆ. ಪೋಸ್ಟ್​ಗೆ ಸಾಕಷ್ಟು ಕಾಮೆಂಟ್‌ಗಳು ಬಂದಿವೆ.

ಒಂಬತ್ತು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಿದ ನಂತರ, ಕ್ರಿಸ್ ಹ್ಯಾಡ್‌ಫೀಲ್ಡ್ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಪ್ರಯೋಗವನ್ನು ಮಾಡುತ್ತಿರುವ 3 ನಿಮಿಷ ಮತ್ತು 17 ಸೆಕೆಂಡುಗಳ ವಿಡಿಯೋ 19 ಲಕ್ಷ ವೀಕ್ಷಣೆಗಳನ್ನು ಸಂಗ್ರಹಿಸಲಾಗಿದೆ.

Published On - 5:14 pm, Sun, 26 June 22

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ