AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್​ ಹಿಂಡಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ

ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್ ಅನ್ನು ಹಿಂಡಿದಾಗ ಏನಾಗುತ್ತದೆ ಗೊತ್ತಾ? ಆನಂದ್ ಮಹೀಂದ್ರಾ ಅವರು ಹಂಚಿಕೊಂಡಿರುವ ಈ ವಿಡಿಯೋ ನೋಡಿದರೆ ನೀವು ಅಚ್ಚರಿಗೊಳ್ಳುವಿರಿ.

Viral Video: ಬಾಹ್ಯಾಕಾಶದಲ್ಲಿ ಒದ್ದೆಯಾದ ಟವೆಲ್​ ಹಿಂಡಿದರೆ ಏನಾಗುತ್ತದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಕ್ರಿಸ್ ಹ್ಯಾಡ್‌ಫೀಲ್ಡ್
TV9 Web
| Updated By: Rakesh Nayak Manchi|

Updated on:Jun 26, 2022 | 5:14 PM

Share

ಉದ್ಯಮಿ ಆನಂದ್ ಮಹೀಂದ್ರಾ (Anand Mahindra) ಅವರು ಅತ್ಯಾಸಕ್ತಿಯ ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು. ಆನ್​ಲೈನ್​ನಲ್ಲಿ ಹೆಚ್ಚು ಆಕ್ಟಿವ್ ಆಗಿರುವ ಇವರು ಸಮಾಜಮುಖಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಬಾಹ್ಯಾಕಾಶ(Space)ದಲ್ಲಿ ಒದ್ದೆಯಾದ ಟವೆಲ್ ಅನ್ನು ಹಿಂಡಿದಾಗ ಏನಾಗುತ್ತದೆ ಎಂದು ತೋರಿಸುವ ವಿಡಿಯೋ(Video)ವೊಂದನ್ನು ಹಂಚಿಕೊಂಡಿದ್ದಾರೆ.

ಭಾನುವಾರಗಳಿಗೆ ಪರಿಪೂರ್ಣ ಸಾದೃಶ್ಯ. ವಾರದ ಎಲ್ಲಾ ಒತ್ತಡವನ್ನು ಹೊರಹಾಕಿ” ಎಂದು ಶೀರ್ಷಿಕೆಯೊಂದಿಗೆ ಆನಂದ್ ಮಹೀಂದ್ರಾ ಅವರು ಬಾಹ್ಯಾಕಾಶದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆನಡಾದ ಬಾಹ್ಯಾಕಾಶ ಸಂಸ್ಥೆ (CSA)ಯ ಕ್ರಿಸ್ ಹ್ಯಾಡ್‌ಫೀಲ್ಡ್ ಎಂಬ ಗಗನಯಾತ್ರಿ ಐಎಸ್‌ಎಸ್‌ನಲ್ಲಿ ಒದ್ದೆಯಾದ ಟವೆಲ್ ಅನ್ನು ಪ್ರಯೋಗಿಸುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ವಿಡಿಯೋದಲ್ಲಿ ಕಾಣುವಂತೆ, ಕ್ರಿಸ್ ಅವರು ಟವೆಲ್​ಗೆ ನೀರು ಹಾಕಿ ಹಿಂಡಿದಾಗ ಅದು ಗುರುತ್ವಾಕರ್ಷಣೆ ಇಲ್ಲದೆ ಅದರಲ್ಲೇ ಅಂಟಿಕೊಂಡಿರುವುದನ್ನು ಕಾಣಬಹುದು.

ವಿಡಿಯೋವನ್ನು ಆರಂಭದಲ್ಲಿ 2013ರಲ್ಲಿ ಕೆನಡಾದ ಬಾಹ್ಯಾಕಾಶ ಸಂಸ್ಥೆ (CSA) ಪೋಸ್ಟ್ ಮಾಡಿತ್ತು. ‘ಐಎಸ್‌ಎಸ್‌ನಲ್ಲಿ ನೀರನ್ನು ಹಿಂಡುವುದು – ವಿಜ್ಞಾನಕ್ಕಾಗಿ!’ ಎಂಬ ಶೀರ್ಷಿಕೆಯೊಂದಿಗೆ ಏಪ್ರಿಲ್ 17, 2013 ರಂದು ಪೋಸ್ಟ್ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಇಂಟರ್​ನೆಟ್​ನಲ್ಲಿ ಮುನ್ನೆಲೆಗೆ ಬಂದು ವೈರಲ್ ಆಗಲು ಪ್ರಾರಂಭಿಸಿದೆ. ಆನಂದ್ ಮಹೀಂದ್ರಾ ಅವರು ಪೋಸ್ಟ್ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 1,100 ಕ್ಕೂ ಹೆಚ್ಚು ಲೈಕ್ಸ್​ ಮತ್ತು 105ಕ್ಕೂ ಹೆಚ್ಚು ರೀಟ್ವೀಟ್‌ಗಳನ್ನು ಗಳಿಸಿದೆ. ಪೋಸ್ಟ್​ಗೆ ಸಾಕಷ್ಟು ಕಾಮೆಂಟ್‌ಗಳು ಬಂದಿವೆ.

ಒಂಬತ್ತು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಿದ ನಂತರ, ಕ್ರಿಸ್ ಹ್ಯಾಡ್‌ಫೀಲ್ಡ್ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಪ್ರಯೋಗವನ್ನು ಮಾಡುತ್ತಿರುವ 3 ನಿಮಿಷ ಮತ್ತು 17 ಸೆಕೆಂಡುಗಳ ವಿಡಿಯೋ 19 ಲಕ್ಷ ವೀಕ್ಷಣೆಗಳನ್ನು ಸಂಗ್ರಹಿಸಲಾಗಿದೆ.

Published On - 5:14 pm, Sun, 26 June 22

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ