AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನವಿಲಿಗೆ ಕೈಯಾರೆ ಕಾಳು ತಿನ್ನಿಸಿದ ತರಕಾರಿ ಮಾರುವ ಮಹಿಳೆ; ವೈರಲ್ ವಿಡಿಯೋಗೆ ಭಾರೀ ಮೆಚ್ಚುಗೆ

ಆನಂದ್ ಮಹೀಂದ್ರಾ ಶೇರ್ ಮಾಡಿರುವ ಈ ವಿಡಿಯೋ ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 56 ಸೆಕೆಂಡ್​ಗಳ ಈ ವಿಡಿಯೋದಲ್ಲಿ ತರಕಾರಿಗಳ ಮಧ್ಯೆ ಕುಳಿತಿರುವ ಹೆಂಗಸು ತನ್ನ ಬಳಿ ನಡೆದುಕೊಂಡು ಬರುವ ನವಿಲಿಗೆ ಕಾಳು ತಿನ್ನಿಸತೊಡಗುತ್ತಾಳೆ.

Viral Video: ನವಿಲಿಗೆ ಕೈಯಾರೆ ಕಾಳು ತಿನ್ನಿಸಿದ ತರಕಾರಿ ಮಾರುವ ಮಹಿಳೆ; ವೈರಲ್ ವಿಡಿಯೋಗೆ ಭಾರೀ ಮೆಚ್ಚುಗೆ
ನವಿಲಿಗೆ ಕಾಳು ತಿನ್ನಿಸುತ್ತಿರುವ ಮಹಿಳೆ
TV9 Web
| Edited By: |

Updated on: Aug 11, 2021 | 5:45 PM

Share

ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಆ್ಯಕ್ಟಿವ್ ಆಗಿರುವ ಆನಂದ್ ಮಹೀಂದ್ರಾ ಆಗಾಗ ತಮಗೆ ಬಹಳ ಇಷ್ಟವಾದ, ಪ್ರೇರಣೆ ನೀಡುವಂತಹ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆನಂದ್ ಮಹೀಂದ್ರಾ ಹಂಚಿಕೊಂಡಿರುವ ಭಾವನಾತ್ಮಕವಾದ ಹೊಸ ವಿಡಿಯೋ ಟ್ವಿಟ್ಟಿಗರ ಮನ ಗೆದ್ದಿದೆ. ತರಕಾರಿ ಮಾರುವ ಹೆಂಗಸೊಬ್ಬರು ತಾನೇ ಕೈಯಾರೆ ನವಿಲಿಗೆ ಕಾಳು ತಿನ್ನಿಸುತ್ತಿರುವ ಈ ವಿಡಿಯೋ ನೋಡಿ ಖುಷಿಯಾಗಿರುವ ಆನಂದ್ ಮಹೀಂದ್ರಾ ಆ ವಿಡಿಯೋವನ್ನು ತಮ್ಮ ಪೇಜಿನಲ್ಲಿ ಹಂಚಿಕೊಂಡಿದ್ದಾರೆ.

ಪ್ರತಿದಿನವೂ ನವಿಲಿಗೆ ಕಾಳು ತಿನ್ನಿಸುವ ತರಕಾರಿ ಮಾರುವ ಹೆಂಗಸಿನ ಮಾತೃಹೃದಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆನಂದ್ ಮಹೀಂದ್ರಾ ಶೇರ್ ಮಾಡಿರುವ ಈ ವಿಡಿಯೋ ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 56 ಸೆಕೆಂಡ್​ಗಳ ಈ ವಿಡಿಯೋದಲ್ಲಿ ತರಕಾರಿಗಳ ಮಧ್ಯೆ ಕುಳಿತಿರುವ ಹೆಂಗಸು ತನ್ನ ಬಳಿ ನಡೆದುಕೊಂಡು ಬರುವ ನವಿಲಿಗೆ ಕಾಳು ತಿನ್ನಿಸತೊಡಗುತ್ತಾಳೆ. ಆ ಮಹಿಳೆಯೊಂದಿಗೆ ಬಹಳ ಆತ್ಮೀಯತೆ ಹೊಂದಿರುವ ಆ ನವಿಲು ಯಾವುದೇ ಭಯವಿಲ್ಲದೆ, ಹಿಂಜರಿಕೆಯಿಲ್ಲದೆ ಧೈರ್ಯವಾಗಿ ಆಕೆಯ ಪಕ್ಕದಲ್ಲಿ ನಿಂತು ಕಾಳು ತಿನ್ನುತ್ತದೆ. ಪ್ರತಿದಿನವೂ ಆ ಜಾಗಕ್ಕೆ ಬರುವ ನವಿಲಿಗೆ ಆ ಹೆಂಗಸು ಕಾಳು ತಿನ್ನಿಸುತ್ತಾಳೆ ಎಂಬುದನ್ನು ಆಕೆ ಹೇಳಿಕೊಂಡಿದ್ದಾಳೆ.

ಮಾನವೀಯತೆ ಇನ್ನೂ ಉಳಿದಿದೆ ಎಂದು ತೋರಿಸಲೆಂದೇ ಕೆಲವೊಮ್ಮೆ ನಮ್ಮ ನಡುವೆ ಇಂತಹ ದೃಶ್ಯಗಳು ಕಣ್ಮುಂದೆ ಬರುತ್ತವೆ ಎಂದು ಆನಂದ್ ಮಹೀಂದ್ರಾ ಖುಷಿಯಿಂದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಭಾರತದ ರಾಷ್ಟ್ರಪಕ್ಷಿಗೆ ಭಾರತಮಾತೆ ಊಟ ಮಾಡಿಸುತ್ತಿದ್ದಾಳೆ ಎಂದು ಕೆಲವರು ಟ್ವಿಟ್ಟರ್​ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲೇ ಯೋಗಾಸನ ಮಾಡಿದ ಯುವತಿ; ಶಾಕಿಂಗ್ ವಿಡಿಯೋ ಇಲ್ಲಿದೆ

Shocking News: ಮನುಷ್ಯರ ಮೂತ್ರದಿಂದ ತಯಾರಾದ ಬಿಯರ್​ಗೆ ಭಾರೀ ಬೇಡಿಕೆ; ಏನಿದು ವಿಚಿತ್ರ ಸುದ್ದಿ?

( Anand Mahindra shares viral video of woman vegetable vendor feeding a peacock by Hand)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ