AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆರಳಿದ ಆನೆಯಿಂದ ಸಫಾರಿ ಜೀಪ್ ಮೇಲೆ ದಾಳಿ; ಕಂಗಾಲಾಗಿ ಓಡಿದ ಪ್ರವಾಸಿಗರು

ಆನೆಯ ದಾಳಿಯಿಂದ ಕಂಗಾಲಾದ ಪ್ರವಾಸಿಗರು ವಾಹನದಿಂದ ಜಿಗಿದು ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ.

Viral Video: ಕೆರಳಿದ ಆನೆಯಿಂದ ಸಫಾರಿ ಜೀಪ್ ಮೇಲೆ ದಾಳಿ; ಕಂಗಾಲಾಗಿ ಓಡಿದ ಪ್ರವಾಸಿಗರು
ಸಫಾರಿ ವಾಹನದ ಮೇಲೆ ಆನೆಯ ದಾಳಿ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 03, 2021 | 6:48 PM

Share

ಸಫಾರಿಗೆ ಹೋಗಿ ಹುಲಿ, ಸಿಂಹ, ಆನೆಗಳನ್ನು ಎಂದಾದರೂ ಹತ್ತಿರದಿಂದ ನೋಡಿದ್ದೀರಾ? ಕಣ್ಣೆದುರು ಕ್ರೂರ ಪ್ರಾಣಿಗಳು ಕಾಡಿನಲ್ಲಿ ಓಡಾಡುತ್ತಿದ್ದಾಗಲೇ ಸಫಾರಿಗೆ ಹೋದ ಅರ್ಧಕ್ಕರ್ಧ ಜನರ ಹೃದಯಬಡಿತ ಹೆಚ್ಚಾಗಿರುತ್ತದೆ. ಇನ್ನೇನಾದರೂ ಆ ಪ್ರಾಣಿಗಳು ಕೈಗೆಟುಕುವಷ್ಟು ಹತ್ತಿರ ಬಂದು ನಮ್ಮ ಮೇಲೆ ದಾಳಿ ಮಾಡಿದರೆ ಆಗಿನ ಪರಿಸ್ಥಿತಿ ಹೇಗಿರಬಹುದು? ದಕ್ಷಿಣ ಆಫ್ರಿಕಾದ ಸೆಲಾಟಿ ಗೇಮ್ ರಿಸರ್ವ್‌ ಫಾರೆಸ್ಟ್​ನಲ್ಲಿ ಕೆರಳಿದ ಆನೆಯೊಂದು ಸಫಾರಿ ವಾಹನದ ಮೇಲೆ ದಾಳಿ ಮಾಡಿ ಅದರಲ್ಲಿದ್ದ ಪ್ರಯಾಣಿಕರನ್ನು ಓಡಿ ಹೋಗುವಂತೆ ಮಾಡಿರುವ ವಿಡಿಯೋ ಬೆಚ್ಚಿ ಬೀಳಿಸುವಂತಿದೆ.

ಆನೆಯ ದಾಳಿಯಿಂದ ಕಂಗಾಲಾದ ಪ್ರವಾಸಿಗರು ವಾಹನದಿಂದ ಜಿಗಿದು ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತ ಸಫಾರಿ ವಾಹನದಲ್ಲಿ ಗೈಡ್ ಕೂಡ ಇದ್ದರು. ಎಲ್ಲರೂ ಸಫಾರಿಯನ್ನು ಎಂಜಾಯ್ ಮಾಡುತ್ತಾ, ಕೇಕೆ ಹಾಕುತ್ತಾ ಹೋಗುತ್ತಿದ್ದಾಗ ಮರಗಳ ಹಿಂದಿನಿಂದ ಓಡಿಬಂದ ಆನೆಯೊಂದು ಸಫಾರಿ ವಾಹನವನ್ನು ತನ್ನ ಸೊಂಡಿಲಿನಿಂದ ತಳ್ಳಿ ದಾಳಿ ಮಾಡಿದೆ. ಇದರಿಂದ ಕಂಗಾಲಾದ ಪ್ರವಾಸಿಗರು ದಿಕ್ಕೆಟ್ಟು ಓಡಿದ್ದಾರೆ.

ಆಕ್ರಮಣಕಾರಿ ಆನೆಯ ದಾಳಿಯಿಂದ ಹೆದರಿ ಟ್ರೈನಿ ಗೈಡ್‌ಗಳು ಕೂಡ ಓಡಿಹೋಗಿದ್ದಾರೆ. ಈ ವೇಳೆ ಪ್ರವಾಸಿಗರಲ್ಲೊಬ್ಬರು ಆ ದೃಶ್ಯವನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಲಕ್ಷಾಂತರ ಜನರು ಫೇಸ್​ಬುಕ್ ಮತ್ತು ಟ್ವಿಟ್ಟರ್​ನಲ್ಲಿ ವೀಕ್ಷಿಸಿದ್ದಾರೆ.

ಸಾಮಾನ್ಯವಾಗಿ ಗಂಡಾನೆಗಳು ಸಂಭೋಗದ ಅವಧಿಯಲ್ಲಿ ಈ ರೀತಿ ಆಕ್ರಮಣಕಾರಿಯಾಗಿರುತ್ತವೆ. ಹೆಣ್ಣಾನೆಯೊಂದಿಗೆ ಲೈಂಗಿಕ ಆಕರ್ಷಣೆಯಲ್ಲಿರುವ ಗಂಡಾನೆಗಳು ಆ ಸಂದರ್ಭದಲ್ಲಿ ಮನುಷ್ಯರು ಮತ್ತು ಇತರ ಆನೆಗಳನ್ನು ಕಂಡರೆ ಅತ್ಯಂತ ಆಕ್ರಮಣಕಾರಿ ಮತ್ತು ಹಿಂಸಾತ್ಮಕವಾಗಿ ವರ್ತಿಸುತ್ತವೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಸರ್ಕಾರಿ ಕಚೇರಿಗೆ ನುಗ್ಗಿದ ಮೇಕೆ ಫೈಲ್ ಕಚ್ಚಿಕೊಂಡು ಪರಾರಿ; ಬೆನ್ನತ್ತಿ ಓಡಿದ ಸಿಬ್ಬಂದಿಯ ವಿಡಿಯೋ ವೈರಲ್

ಕೈ ತುಂಬ ಸಂಬಳ ಕೊಟ್ಟರೂ ಲಂಚ ತಗೊಂಡು ನಾಯಿ ಹಾಗೆ ಬಿದ್ದಿರುತ್ತಾರೆ; ಪೊಲೀಸರ ವಿರುದ್ಧ ಕೂಗಾಡಿದ ಆರಗ ಜ್ಞಾನೇಂದ್ರ

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ