AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ರಾಂಚೋ’ ಎಲ್ಲಿದ್ದೀಯಾ? ಸೆಪ್ಟೆಂಬರ್ 5 ಬಂದಿದೆ!

Teachers Day : ರಾಂಚೋ ಪಾತ್ರಧಾರಿ ಅಮೀರ್​ ಖಾನ್​ ಅವರಿಗೆ ಶಿಕ್ಷಕರ ದಿನಾಚರಣೆ ನಿಮಿತ್ತ ವಿಡಿಯೋ ಸಂದೇಶ ಕಳಿಸಿದ್ಧಾರೆ ಚತುರ್​ ರಾಮಲಿಂಗಂ ಪಾತ್ರಧಾರಿ ಓಮಿ ವೈದ್ಯ. ಏನಿದೆ ವಿಡಿಯೋದಲ್ಲಿ?

Viral Video : ‘ರಾಂಚೋ’ ಎಲ್ಲಿದ್ದೀಯಾ? ಸೆಪ್ಟೆಂಬರ್ 5 ಬಂದಿದೆ!
ಚತುರ್​ ರಾಮಲಿಂಗಮ್ ಖ್ಯಾತಿಯ ನಟ ಓಮಿ ವೈದ್ಯ
TV9 Web
| Edited By: ಶ್ರೀದೇವಿ ಕಳಸದ|

Updated on:Sep 06, 2022 | 4:41 PM

Share

Viral Video : ತ್ರೀ ಈಡಿಯಟ್ಸ್​ನಂಥ ಉತ್ತಮ ಸಿನೆಮಾ ನೋಡಿದ ಯಾರೂ ಅಲ್ಲಿರುವ ಎಲ್ಲ ಪಾತ್ರಧಾರಿಗಳನ್ನೂ ಮರೆಯಲು ಸಾಧ್ಯವೇ ಇಲ್ಲ. ಅಮೀರ್ ಖಾನ್, ಕರೀನಾ ಕಪೂರ್ ಖಾನ್, ಮಾಧವನ್ ಮತ್ತು ಬೊಮನ್ ಇರಾನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಲನಚಿತ್ರವನ್ನು ವೀಕ್ಷಿಸದೇ ಇರುವವರು ಕಡಿಮೆಯೇ. ಈ ಪಾತ್ರವೃಂದದೊಂದಿಗೆ ಗಮನ ಸೆಳೆದ ಚತುರ ನಟನೇ ಚತುರ್ ರಾಮಲಿಂಗಂ ಪಾತ್ರಧಾರಿ ಓಮಿ ವೈದ್ಯ. ಪಂಚಿಂಗ್ ಡೈಲಾಗ್​ ಮತ್ತು ಆಕರ್ಷಕ ಅಭಿನಯದ ಮೂಲಕ ಜನಮನ ಸೆಳೆದ ಓಮಿ ಈಗ, ರಾಂಚೋ ಪಾತ್ರಧಾರಿ ಅಮೀರ್​ ಖಾನ್​ ಅವರಿಗೆ ಶಿಕ್ಷಕರ ದಿನಾಚರಣೆ ನಿಮಿತ್ತ ವಿಡಿಯೋ ಸಂದೇಶ ಕಳಿಸಿದ್ಧಾರೆ. ಈ ವಿಡಿಯೋ ಅನ್ನು ಅವರ ಇನ್​ಸ್ಟಾಗ್ರಾಂ ಖಾತೆಯಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ರಾಂಚೋ ಪಾತ್ರವನ್ನು ಹತ್ತು ವರ್ಷಗಳ ನಂತರ ಭೇಟಿಯಾಗುವೆನೆಂದು ಚತುರ್ ಸವಾಲು ಹಾಕಿದ್ದರು. ಹೀಗೆ ಸವಾಲು ಹಾಕಿದ ದಿನವೂ ಸೆಪ್ಟೆಂಬರ್ 5 ಆಗಿತ್ತು. ಈ ಕ್ಲಿಪ್ ಸಿನೆಮಾದಲ್ಲಿದೆ.

ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದರೂ ಚತುರ್ ಪಾತ್ರವೇ ಓಮಿ ಅವರಿಗೆ ಬ್ರೇಕ್​ ತಂದುಕೊಟ್ಟಿದ್ದು. 52, 500 ಕ್ಕೂ ಹೆಚ್ಚು ಫಾಲೋವರ್ಸ್​ ಹೊಂದಿರುವ ನಟ ಓಮಿ ಇನ್‌ಸ್ಟಾಗ್ರಾಮ್ ಪುಟದಲ್ಲಿ ಈ ಕ್ಲಿಪ್ ಹಂಚಿಕೊಂಡಿದ್ದಾರೆ. ಈತನಕ 1,29,000 ಲೈಕ್ಸ್​ಗಳನ್ನು ಈ ವಿಡಿಯೋ ಪಡೆದಿದೆ.

ಈ ಮನುಷ್ಯ ಬಂಗಾರದಂತೆ ಎಂದು ಇನ್​ಸ್ಟಾಗ್ರಾಂ ಖಾತೆದಾರರೊಬ್ಬರು ಮರುಹಂಚಿಕೆ ಮಾಡುವಾಗ ಶೀರ್ಷಿಕೆ ಬರೆದಿದ್ದಾರೆ. ಸೆಪ್ಟೆಂಬರ್ 5ನೇ ತಾರೀಖನ್ನು ನೆನಪಿಡಿ ಎಂದು ಹೇಳುತ್ತ ಮತ್ತೊಬ್ಬರು ಮರುಹಂಚಿಕೆ ಮಾಡಿಕೊಂಡಿದ್ದಾರೆ. ನೀವೊಬ್ಬ ದಂತಕಥೆ ಎಂದು ಮಗದೊಬ್ಬರು ಮರುಹಂಚಿಕೆ ಮಾಡಿಕೊಳ್ಳುತ್ತ ಹೊಗಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:32 pm, Tue, 6 September 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು