AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಆಟೋ ಚಾಲಕನ ಕೂಲಿಂಗ್ ಸಿಸ್ಟಮ್ ಐಡಿಯಾ ಹೇಗಿದೆ ನೋಡಿ

ಬೇಸಿಗೆಯ ಬೇಗೆಯು ಜೋರಾಗಿದ್ದು, ಸುಡು ಬಿಸಿಲಿನ ನಡುವೆ ಹೊರಗಡೆ ಹೋಗುವುದಕ್ಕೂ ಕಷ್ಟ ಎನ್ನುವಂತಿದೆ ಆದರೆ, ಹೊರಗಡೆ ದುಡಿಯುವ ವ್ಯಕ್ತಿಗಳು ಬಿಸಿಲಿನಲ್ಲಿ ಸಮಯ ಕಳೆಯದೇ ಬೇರೆ ವಿಧಿಯೇ ಇಲ್ಲ. ತಮಿಳುನಾಡಿನಲ್ಲಿ ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಆಟೋ ಚಾಲಕರೊಬ್ಬರು ಉಪಾಯ ಕಂಡುಕೊಂಡಿದ್ದಾರೆ. ಆಟೋದಲ್ಲಿ ಪೈಪ್ ಅಳವಡಿಸಿ ಗಾಳಿ ಬರುವಂತೆ ಮಾಡಿದ್ದಾರೆ. ಸದ್ಯಕ್ಕೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Viral Video : ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಆಟೋ ಚಾಲಕನ ಕೂಲಿಂಗ್ ಸಿಸ್ಟಮ್ ಐಡಿಯಾ ಹೇಗಿದೆ ನೋಡಿ
ಸಾಯಿನಂದಾ
| Edited By: |

Updated on: Mar 30, 2024 | 1:59 PM

Share

ಸೂರ್ಯನು ನೆತ್ತಿಯನ್ನು ಸುಡುತ್ತಿದ್ದು, ಹೊರಗಡೆ ಕಾಲಿಡುವುದಕ್ಕೂ ಕಷ್ಟ ಎನ್ನುವಂತಾಗಿದೆ. ಬಿಸಿ ಗಾಳಿಯು ಮೈಯನ್ನು ಸುಡುವಂತಹ ಅನುಭವವಾಗುತ್ತದೆ. ಹೀಗಾಗಿ ಹೆಚ್ಚಿನವರಿಗೆ ಫ್ಯಾನ್ ಕೆಳಗೆ ಇರುವುದೆಂದರೆ ತುಂಬಾನೇ ಇಷ್ಟ. ಆದರೆ ಹೊರಗಡೆ ಹೋಗಿ ದುಡಿಯುವವರಿಗೆ ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ದುಡಿಯಲೇಬೇಕು. ವಿಪರೀತವಾದ ಬಿಸಿಲಿನಿಂದಪಾರಾಗಲು ಇಲ್ಲೊಬ್ಬ ಆಟೋ ಚಾಲಕ ಉಪಾಯವೊಂದನ್ನು ಕಂಡುಕೊಂಡಿದ್ದಾನೆ.

ಹೌದು, ಆಟೋದಲ್ಲಿ ಪೈಪ್ ಅನ್ನು ಎಷ್ಟು ಬುದ್ಧಿವಂತಿಕೆಯಿಂದ ಅಳವಡಿಸಲಾಗಿದೆ. ಈ ವೀಡಿಯೊವನ್ನು ಇನ್ಸ್ಟಾಗ್ರಾಮ್ ಹ್ಯಾಂಡಲ್ @sangeeeramez ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಆಟೋದಲ್ಲಿರುವ ಕನ್ನಡಿಯ ಪಕ್ಕದಲ್ಲಿ ಪೈಪ್ ಅಳವಡಿಸಿರುವುದನ್ನು ನೋಡಬಹುದು. ಈ ಪೈಪ್ ಅನ್ನು ಆಟೋ ಮುಂಭಾಗದ ಚಕ್ರಕ್ಕೆ ಜೋಡಿಸಲಾಗಿದೆ.

View this post on Instagram

A post shared by Ramez (@sangeeeramez)

ವೆಂಚುರಿ ಎಫೆಕ್ಟ್’ ತತ್ವವನ್ನು ಆಧಾರಿಸಿ ದ್ರವವು ಕಿರಿದಾದ ಜಾಗದಲ್ಲಿ ಹಾದುಹೋದಾಗ ಅದರ ವೇಗವು ಹೆಚ್ಚಾಗಿ ಒತ್ತಡವು ಕಡಿಮೆಯಾಗುತ್ತದೆ. ಆ ವೇಳೆಯಲ್ಲಿ ಈ ಪೈಪ್ ಮಿನಿ ವೆಂಚುರಿ ಟ್ಯೂಬ್ ಆಗಿ ಕೆಲಸ ಮಾಡಲು ಪ್ರಾರಂಭಿಸುತ್ತದೆ. ಹೌದು, ಈ ಸಣ್ಣ ಪೈಪ್ ಮೂಲಕ ಗಾಳಿಯು ಹಾದುಹೋಗುವಾಗ, ವೇಗವು ಹೆಚ್ಚಾಗಿ ಒತ್ತಡವು ಕಡಿಮೆಯಾಗುತ್ತದೆ. ಹೀಗಾಗಿ ತಂಪಾದ ಗಾಳಿಯು ಹೊರಬರಲು ಪ್ರಾರಂಭಿಸುತ್ತದೆ. ಈ ರೀತಿಯ ತಂತ್ರವನ್ನು ಬಳಸಿ ಚಾಲಕನು ಗಾಳಿಯು ಬರುವಂತೆ ಮಾಡಿಕೊಂಡಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಈ ವಿಡಿಯೋಗೆ ಆರು ಲಕ್ಷಕ್ಕೂ ಅಧಿಕ ಜನರು ಈ ವಿಡಿಯೋವನ್ನು ನೋಡಿ ಇಷ್ಟ ಪಟ್ಟಿದ್ದಾರೆ. ಬಳಕೆದಾರರೊಬ್ಬರು, ‘ಚಾಲಕನು ತುಂಬಾ ಯೋಚಿಸಿದ ನಂತರ ಈ ತಂತ್ರವನ್ನು ಬಳಸಿದ್ದಾನೆಯೇ ಅಥವಾ ಇದು ಕೇವಲ ಕಾಕತಾಳೀಯವೇ ಎಂದು ಹೇಳುವುದು ಕಷ್ಟ, ಆದರೆ ಈ ಕಲ್ಪನೆಯು ಅದ್ಭುತವಾಗಿದೆ’ ಎಂದಿದ್ದಾರೆ. ಮತ್ತೊಬ್ಬರು, ‘ಭೌತಶಾಸ್ತ್ರವನ್ನು ಇದಕ್ಕಿಂತ ಉತ್ತಮ ರೀತಿಯಲ್ಲಿ ಬಳಸಲಾಗುವುದಿಲ್ಲ’ ಎಂದಿದ್ದಾರೆ. ಇನ್ನೊಬ್ಬರು, ‘ಈ ಚಾಲಕ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾನೆಯೇ’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ