Viral Video : ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಆಟೋ ಚಾಲಕನ ಕೂಲಿಂಗ್ ಸಿಸ್ಟಮ್ ಐಡಿಯಾ ಹೇಗಿದೆ ನೋಡಿ

ಬೇಸಿಗೆಯ ಬೇಗೆಯು ಜೋರಾಗಿದ್ದು, ಸುಡು ಬಿಸಿಲಿನ ನಡುವೆ ಹೊರಗಡೆ ಹೋಗುವುದಕ್ಕೂ ಕಷ್ಟ ಎನ್ನುವಂತಿದೆ ಆದರೆ, ಹೊರಗಡೆ ದುಡಿಯುವ ವ್ಯಕ್ತಿಗಳು ಬಿಸಿಲಿನಲ್ಲಿ ಸಮಯ ಕಳೆಯದೇ ಬೇರೆ ವಿಧಿಯೇ ಇಲ್ಲ. ತಮಿಳುನಾಡಿನಲ್ಲಿ ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಆಟೋ ಚಾಲಕರೊಬ್ಬರು ಉಪಾಯ ಕಂಡುಕೊಂಡಿದ್ದಾರೆ. ಆಟೋದಲ್ಲಿ ಪೈಪ್ ಅಳವಡಿಸಿ ಗಾಳಿ ಬರುವಂತೆ ಮಾಡಿದ್ದಾರೆ. ಸದ್ಯಕ್ಕೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ.

Viral Video : ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಆಟೋ ಚಾಲಕನ ಕೂಲಿಂಗ್ ಸಿಸ್ಟಮ್ ಐಡಿಯಾ ಹೇಗಿದೆ ನೋಡಿ
Follow us
| Updated By: ಅಕ್ಷತಾ ವರ್ಕಾಡಿ

Updated on: Mar 30, 2024 | 1:59 PM

ಸೂರ್ಯನು ನೆತ್ತಿಯನ್ನು ಸುಡುತ್ತಿದ್ದು, ಹೊರಗಡೆ ಕಾಲಿಡುವುದಕ್ಕೂ ಕಷ್ಟ ಎನ್ನುವಂತಾಗಿದೆ. ಬಿಸಿ ಗಾಳಿಯು ಮೈಯನ್ನು ಸುಡುವಂತಹ ಅನುಭವವಾಗುತ್ತದೆ. ಹೀಗಾಗಿ ಹೆಚ್ಚಿನವರಿಗೆ ಫ್ಯಾನ್ ಕೆಳಗೆ ಇರುವುದೆಂದರೆ ತುಂಬಾನೇ ಇಷ್ಟ. ಆದರೆ ಹೊರಗಡೆ ಹೋಗಿ ದುಡಿಯುವವರಿಗೆ ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ದುಡಿಯಲೇಬೇಕು. ವಿಪರೀತವಾದ ಬಿಸಿಲಿನಿಂದಪಾರಾಗಲು ಇಲ್ಲೊಬ್ಬ ಆಟೋ ಚಾಲಕ ಉಪಾಯವೊಂದನ್ನು ಕಂಡುಕೊಂಡಿದ್ದಾನೆ.

ಹೌದು, ಆಟೋದಲ್ಲಿ ಪೈಪ್ ಅನ್ನು ಎಷ್ಟು ಬುದ್ಧಿವಂತಿಕೆಯಿಂದ ಅಳವಡಿಸಲಾಗಿದೆ. ಈ ವೀಡಿಯೊವನ್ನು ಇನ್ಸ್ಟಾಗ್ರಾಮ್ ಹ್ಯಾಂಡಲ್ @sangeeeramez ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಆಟೋದಲ್ಲಿರುವ ಕನ್ನಡಿಯ ಪಕ್ಕದಲ್ಲಿ ಪೈಪ್ ಅಳವಡಿಸಿರುವುದನ್ನು ನೋಡಬಹುದು. ಈ ಪೈಪ್ ಅನ್ನು ಆಟೋ ಮುಂಭಾಗದ ಚಕ್ರಕ್ಕೆ ಜೋಡಿಸಲಾಗಿದೆ.

View this post on Instagram

A post shared by Ramez (@sangeeeramez)

ವೆಂಚುರಿ ಎಫೆಕ್ಟ್’ ತತ್ವವನ್ನು ಆಧಾರಿಸಿ ದ್ರವವು ಕಿರಿದಾದ ಜಾಗದಲ್ಲಿ ಹಾದುಹೋದಾಗ ಅದರ ವೇಗವು ಹೆಚ್ಚಾಗಿ ಒತ್ತಡವು ಕಡಿಮೆಯಾಗುತ್ತದೆ. ಆ ವೇಳೆಯಲ್ಲಿ ಈ ಪೈಪ್ ಮಿನಿ ವೆಂಚುರಿ ಟ್ಯೂಬ್ ಆಗಿ ಕೆಲಸ ಮಾಡಲು ಪ್ರಾರಂಭಿಸುತ್ತದೆ. ಹೌದು, ಈ ಸಣ್ಣ ಪೈಪ್ ಮೂಲಕ ಗಾಳಿಯು ಹಾದುಹೋಗುವಾಗ, ವೇಗವು ಹೆಚ್ಚಾಗಿ ಒತ್ತಡವು ಕಡಿಮೆಯಾಗುತ್ತದೆ. ಹೀಗಾಗಿ ತಂಪಾದ ಗಾಳಿಯು ಹೊರಬರಲು ಪ್ರಾರಂಭಿಸುತ್ತದೆ. ಈ ರೀತಿಯ ತಂತ್ರವನ್ನು ಬಳಸಿ ಚಾಲಕನು ಗಾಳಿಯು ಬರುವಂತೆ ಮಾಡಿಕೊಂಡಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಈ ವಿಡಿಯೋಗೆ ಆರು ಲಕ್ಷಕ್ಕೂ ಅಧಿಕ ಜನರು ಈ ವಿಡಿಯೋವನ್ನು ನೋಡಿ ಇಷ್ಟ ಪಟ್ಟಿದ್ದಾರೆ. ಬಳಕೆದಾರರೊಬ್ಬರು, ‘ಚಾಲಕನು ತುಂಬಾ ಯೋಚಿಸಿದ ನಂತರ ಈ ತಂತ್ರವನ್ನು ಬಳಸಿದ್ದಾನೆಯೇ ಅಥವಾ ಇದು ಕೇವಲ ಕಾಕತಾಳೀಯವೇ ಎಂದು ಹೇಳುವುದು ಕಷ್ಟ, ಆದರೆ ಈ ಕಲ್ಪನೆಯು ಅದ್ಭುತವಾಗಿದೆ’ ಎಂದಿದ್ದಾರೆ. ಮತ್ತೊಬ್ಬರು, ‘ಭೌತಶಾಸ್ತ್ರವನ್ನು ಇದಕ್ಕಿಂತ ಉತ್ತಮ ರೀತಿಯಲ್ಲಿ ಬಳಸಲಾಗುವುದಿಲ್ಲ’ ಎಂದಿದ್ದಾರೆ. ಇನ್ನೊಬ್ಬರು, ‘ಈ ಚಾಲಕ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾನೆಯೇ’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ