AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಸರಲ್ಲಿ ತುಂಟಾಟವಾಡುತ್ತಿರುವ ಈ ಆನೆಮರಿಯನ್ನು ನೋಡಿದರೆ ಮುದ್ದಾಡಬೇಕೆನಿಸೋದು ಗ್ಯಾರಂಟಿ!

ಮುದ್ದಾದ ಆನೆ ಮರಿಯೊಂದು ಕೆಸರಿನಲ್ಲಿ ಮಜಾ ಮಾಡುತ್ತಿರುವ ದೃಶ್ಯ ಎಲ್ಲರ ಮನ ಗೆದ್ದಿದ್ದು, ಸಾಕಷ್ಟು ಮಂದಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

Viral Video: ಕೆಸರಲ್ಲಿ ತುಂಟಾಟವಾಡುತ್ತಿರುವ ಈ ಆನೆಮರಿಯನ್ನು ನೋಡಿದರೆ ಮುದ್ದಾಡಬೇಕೆನಿಸೋದು ಗ್ಯಾರಂಟಿ!
ಕೆಸರಾಟವಾಡುತ್ತಿರುವ ಆನೆಮರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 26, 2021 | 8:27 PM

ಮನುಷ್ಯರ ಮಕ್ಕಳೇ ಇರಲಿ, ಪ್ರಾಣಿಗಳ ಮರಿಗಳೇ ಇರಲಿ. ಅವುಗಳ ಆಟವನ್ನು, ತುಂಟಾಟವನ್ನು ನೋಡೋದೇ ಚೆಂದ. ನಾಯಿಮರಿಗಳು, ಬೆಕ್ಕಿನ ಮರಿ, ಆನೆ ಮರಿ, ಹಂದಿ ಮರಿ, ಕೋತಿ ಮರಿ ಹೀಗೆ ಮರಿಗಳು ಯಾವುದೇ ಇರಲಿ; ಅವುಗಳು ಆಟವಾಡುತ್ತಿದ್ದರೆ ಅದನ್ನು ನೋಡಲು ಎರಡು ಕಣ್ಣುಗಳು ಸಾಲದು. ಆನೆ ಮರಿಯೊಂದು ತನ್ನ ಅಮ್ಮನ ಜೊತೆ ಕೆಸರಾಟ ಆಡುತ್ತಿರುವ ಈ ವಿಡಿಯೋ ನೋಡಿದರೆ ನಿಮ್ಮ ಮುಖದಲ್ಲಿ ನಗು ಮೂಡುವುದು ಗ್ಯಾರಂಟಿ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ನೋಡಿದರೆ ನೀವು ಖುಷಿಯಾಗುತ್ತೀರ. ಮುದ್ದಾದ ಆನೆ ಮರಿಯೊಂದು ಕೆಸರಿನಲ್ಲಿ ಮಜಾ ಮಾಡುತ್ತಿರುವ ದೃಶ್ಯ ಎಲ್ಲರ ಮನ ಗೆದ್ದಿದ್ದು, ಸಾಕಷ್ಟು ಮಂದಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಕೆಸರು ತುಂಬಿದ ನೀರಿನ ಹೊಂಡದಲ್ಲಿ ಬಿದ್ದು ಹೊರಳಾಡುತ್ತಿರುವ ಆನೆ ಮರಿ ಸೊಂಡಿಲಿನಿಂದ ಕೆಸರನ್ನು ಮೈಮೇಲೆ ಎರಚಿಕೊಳ್ಳುತ್ತಾ ಇರುವ ದೃಶ್ಯವನ್ನು ಈ ವಿಡಿಯೋದಲ್ಲಿ ನೋಡಬಹುದು.

ಶೆಲ್ಡ್ರಿಕ್ ವೈಲ್ಡ್​ಲೈಫ್ ಎಂಬ ಟ್ವಿಟ್ಟರ್​ ಪೇಜ್​ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಇದುವರೆಗೂ ಸುಮಾರು 20 ಸಾವಿರ ಜನರಿಂದ ವೀಕ್ಷಿಸಲ್ಪಟ್ಟಿದೆ. ಆನೆಗಳ ಕೆಸರಾಟದ ವಿಡಿಯೋವನ್ನು ನೀವೂ ಒಮ್ಮೆ ನೋಡಿಬಿಡಿ…

ಇದನ್ನೂ ಓದಿ: Viral Video: ಸೀರೆಯುಟ್ಟು ರೈಲಿನ ಕಿಟಕಿಯಲ್ಲೇ ಒಳನುಗ್ಗಿದ ಮಹಿಳೆ!; ಎಮರ್ಜೆನ್ಸಿ ಎಂಟ್ರಿಯ ವಿಡಿಯೋ ವೈರಲ್

Viral News | ಬರೋಬ್ಬರಿ 1 ಕೋಟಿಗೆ ಹರಾಜಾಯ್ತು ವಿಸ್ಕಿ ಬಾಟಲ್; ಇದರ ವಿಶೇಷತೆ ಕೇಳಿದರೆ ಕಿಕ್ ಏರುತ್ತೆ!

(Baby Elephants Enjoying Playing in Mud This Adorable Video Will Make You Smile Trending Video)

Published On - 8:25 pm, Mon, 26 July 21

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್