AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟ್​ಮಾರ್ಟಮ್ ರೂಂನಲ್ಲಿ ತನ್ನಷ್ಟಕ್ಕೆ ಚಲಿಸಿದ ಏಣಿ; ವೈರಲ್ ವಿಡಿಯೋ ಕಂಡು ನೆಟ್ಟಿಗರು ಶಾಕ್

ಉತ್ತರ ಪ್ರದೇಶದ ಆಸ್ಪತ್ರೆಯೊಂದರ ಪೋಸ್ಟ್​ಮಾರ್ಟಂ ರೂಂನಲ್ಲಿ ತನ್ನಷ್ಟಕ್ಕೆ ತಾನೇ ಚಲಿಸುವ ಬಿದಿರಿನ ಏಣಿಯೊಂದರ ವಿಡಿಯೋ ಜನರನ್ನು ಭಯಭೀತಗೊಳಿಸಿದೆ. ಈ ವಿಡಿಯೋವನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 6.88 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ.

ಪೋಸ್ಟ್​ಮಾರ್ಟಮ್ ರೂಂನಲ್ಲಿ ತನ್ನಷ್ಟಕ್ಕೆ ಚಲಿಸಿದ ಏಣಿ; ವೈರಲ್ ವಿಡಿಯೋ ಕಂಡು ನೆಟ್ಟಿಗರು ಶಾಕ್
ಪೋಸ್ಟ್​ಮಾರ್ಟಮ್ ರೂಂನಲ್ಲಿ ತನ್ನಷ್ಟಕ್ಕೆ ಚಲಿಸಿದ ಏಣಿ
ಸುಷ್ಮಾ ಚಕ್ರೆ
|

Updated on: Sep 03, 2023 | 2:15 PM

Share

ವಿಜ್ಞಾನ ಮತ್ತು ಅಗೋಚರ ಶಕ್ತಿಯ ನಡುವಿನ ವಾದ-ವಿವಾದ ಇನ್ನೂ ಮುಂದುವರೆದೇ ಇದೆ. ಎಲ್ಲವನ್ನೂ ವೈಜ್ಞಾನಿಕವಾಗಿ ಸಾಬೀತುಪಡಿಸಿದ ಆಧುನಿಕ ಯುಗದಲ್ಲಿ ನಾವು ವಾಸಿಸುತ್ತಿದ್ದೇವೆ. ಆದರೆ, ಇಂದಿಗೂ ದೆವ್ವ, ಭೂತ, ಆತ್ಮಗಳೆಂಬ ಶಕ್ತಿಗಳನ್ನು ನಂಬುವವರು ಕೂಡ ಇದ್ದಾರೆ. ವೈಜ್ಞಾನಿಕ ಪ್ರಪಂಚ ಎಷ್ಟೇ ಮುಂದುವರೆದಿದ್ದರೂ ಕೆಲವೊಮ್ಮೆ ವಿಜ್ಞಾನ ಕೂಡ ಕೆಲವು ಘಟನೆಗಳನ್ನು ಸ್ಪಷ್ಟಪಡಿಸಲು ಹೆಣಗಾಡುತ್ತದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ಉತ್ತರ ಪ್ರದೇಶದ ಆಸ್ಪತ್ರೆಯೊಂದರ ಪೋಸ್ಟ್​ಮಾರ್ಟಂ ರೂಂನಲ್ಲಿ ತನ್ನಷ್ಟಕ್ಕೆ ತಾನೇ ಚಲಿಸುವ ಬಿದಿರಿನ ಏಣಿಯೊಂದರ ವಿಡಿಯೋ ಜನರನ್ನು ಭಯಭೀತಗೊಳಿಸಿದೆ. ಈ ವೀಡಿಯೊ ಕ್ಲಿಪ್ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಸಾವಿರಾರು ಜನರು ಇದನ್ನು ವೀಕ್ಷಿಸಿದ್ದಾರೆ. ಈ ಏಣಿಯ ವಿಡಿಯೋವನ್ನು ಉತ್ತರ ಪ್ರದೇಶದ ಬರೇಲಿಯಲ್ಲಿರುವ ಎಸ್‌ಆರ್‌ಎಂಎಸ್ ವೈದ್ಯಕೀಯ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ.

ಇದನ್ನೂ ಓದಿ: Viral Video: ನಾಲೆಯೊಳಗೆ ಬಿದ್ದು ಒದ್ದಾಡುತ್ತಿದ್ದ ಗೂಬೆಯನ್ನು ರಕ್ಷಿಸಿದ ಮಹಿಳೆಯ ವಿಡಿಯೋ ವೈರಲ್

ಮನುಷ್ಯರಂತೆಯೇ ಸರಾಗವಾಗಿ ನಡೆಯುತ್ತಿರುವ ಬಿದಿರಿನ ಏಣಿಯ ವಿಡಿಯೋ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ‘ವಾಕಿಂಗ್ ಲ್ಯಾಡರ್’ ನ ಈ ತುಣುಕು ಹಲವರಲ್ಲಿ ಭಯ ಸೃಷ್ಟಿಸಿದ್ದರೆ ಇನ್ನು ಕೆಲವರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವೈರಲ್ ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಏಣಿಯ ಚಲನೆಯ ಹಿಂದೆ ಅಗೋಚರ ಶಕ್ತಿಯಿದೆ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸಿದ್ದಾರೆ.

ಶಬ್ದ ಮಾಡುತ್ತಾ ನಡೆಯುತ್ತಿರುವ ಈ ಏಣಿಯನ್ನು ನೋಡಿದರೆ ಎಂಥವರಿಗೂ ಭಯವಾಗುವುದು ಸಹಜ. ಈ ವಿಡಿಯೋವನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 6.88 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ತಗ್ಗು ಪ್ರದೇಶವಾದ್ದರಿಂದ ಏಣಿ ತನ್ನಷ್ಟಕ್ಕೆ ತಾನು ಮುಂದೆ ಹೋಗಿದೆಯೇ ಹೊರತು ಇದರಲ್ಲಿ ಬೇರಾವ ಮ್ಯಾಜಿಕ್ ಕೂಡ ಇಲ್ಲ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್